ಬ್ರೇಕಿಂಗ್ ನ್ಯೂಸ್
12-06-23 11:45 am HK News Desk ಕರ್ನಾಟಕ
ರಾಮನಗರ, ಜೂನ್ 12: ಬೆಂಗಳೂರು-ಮೈಸೂರು ದಶಪಥದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಸ್ನೇಹಿತರಿಬ್ಬರು ಸಾವಿಗೀಡಾಗಿದ್ದು, ಮತ್ತಿಬ್ಬರು ಸ್ನೇಹಿತರ ಪರಿಸ್ಥಿತಿ ಗಂಭೀರವಾಗಿದೆ. ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಭಾನುವಾರ ಈ ಭೀಕರ ಅಪಘಾತ ಸಂಭವಿಸಿದೆ.
ಚನ್ನಪಟ್ಟಣ ತಾಲೂಕಿನ ಕೋಲೂರು ಗೇಟ್ ಬಳಿಯ ಚಾಮುಂಡೇಶ್ವರಿ ಆಸ್ಪತ್ರೆ ಮುಂಭಾಗ ಈ ಅಪಘಾತ ಸಂಭವಿಸಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಮದ್ದೂರು ಮೂಲದ ಚಾಲಕ ಮಂಜೇಶ್ (28) ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದರು.


ಗಂಭೀರ ಗಾಯಗೊಂಡಿದ್ದ ವಿಜಯ್, ವಿನಯ್ ಹಾಗೂ ನಿಖಿಲ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದ ನಿವಾಸಿ ವಿನಯ್ (23) ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ರಾಮನಗರದ ಮಂಜುನಾಥ್ ನಗರ ನಿವಾಸಿ ವಿಜಯ್ (23), ಮತ್ತೊಬ್ಬ ಗಾಯಾಳು ನಿಖಿಲ್ಗೆ ಚಿಕಿತ್ಸೆ ಮುಂದುವರಿದಿದೆ. ವಿಜಯ್ ಪರಿಸ್ಥಿತಿ ಚಿಂತಾಜನಕವಾಗಿದೆ.

ನಾಲ್ವರು ಸ್ನೇಹಿತರು ಮದ್ದೂರಿನ ಬೆಸಗರಹಳ್ಳಿಗೆ ಬಟ್ಟೆ ತರಲು ಹೋಗಿದ್ದರು. ಅಲ್ಲಿಂದ ವಾಪಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದಿದೆ. ವಾಹನ ಚಲಾಯಿಸುತ್ತಿದ್ದ ಮಂಜೇಶ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಸಾವಿಗೀಡಾಗಿದ್ದ. ಅಪಘಾತಕ್ಕೂ ಮುನ್ನ ಈ ನಾಲ್ವರು ಕಾರಿನಲ್ಲಿ ಜಾಲಿಯಾಗಿ ಹಾಡು ಹೇಳಿಕೊಂಡು ಬಂದಿದ್ದು, ವಿಡಿಯೋ ಕೂಡ ಮಾಡಿಕೊಂಡಿದ್ದರು. ಆದರೆ ಅದಾದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿದ್ದರು.
ಕಾರು ರಾಮನಗರದ ಕಡೆಗೆ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ಗಾಯಾಳುಗಳನ್ನು ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Bengaluru Mysuru express way road accident, two friends killed on spot at Ramnagara.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 10:17 pm
HK News Staffer
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm