ಬ್ರೇಕಿಂಗ್ ನ್ಯೂಸ್
14-06-23 02:11 pm HK News Desk ಕರ್ನಾಟಕ
ದಾವಣಗೆರೆ, ಜೂನ್ 14: ರಾಜ್ಯದಲ್ಲಿ ಬಿಜೆಪಿ - ಕಾಂಗ್ರೆಸ್ ನಾಯಕರು ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆಂದು ಆರೋಪ ಎದ್ದಿರುವ ಸಂದರ್ಭದಲ್ಲೇ ಮಾಜಿ ಸಿಎಂ ಬೊಮ್ಮಾಯಿ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ರಹಸ್ಯ ಮೀಟಿಂಗ್ ಮಾಡಿದ್ದಾರೆ.
ದಾವಣಗೆರೆ ಹೊರವಲಯದ ಖಾಸಗಿ ರೇಸಾರ್ಟ್ ನಲ್ಲಿ ನಿನ್ನೆ ಸಂಜೆ ಗುಪ್ತ ಮಾತುಕತೆ ನಡೆಸಿದ್ದು ಬಾಗಿಲು ಹಾಕಿಕೊಂಡು 25 ನಿಮಿಷ ಕಾಲ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿದೆ ಎಂಬ ಚರ್ಚೆ ಬೆನ್ನಲ್ಲೇ ಸೀಕ್ರೇಟ್ ಮೀಟಿಂಗ್ ನಡೆಸಿರೋದು ಕುತೂಹಲ ಮೂಡಿಸಿದೆ.
ಮಂಗಳವಾರ ದಾವಣಗೆರೆಯಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ಸಭೆ ನಡೆದಿತ್ತು. ಸಭೆಯಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿ ಪಕ್ಷವನ್ನು ಸೋಲಿಸಿದ್ದೀರಿ ಎಂದು ಸ್ಥಳೀಯ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಕಾರ್ಯಕರ್ತರು ರಾಜ್ಯ ಮತ್ತು ಜಿಲ್ಲಾ ನಾಯಕರ ವಿರುದ್ಧ ಆಕ್ರೋಶ ತೋರಿದ್ದರು. ಮಧ್ಯಾಹ್ನ ನಡೆದ ಕೋರ್ ಕಮಿಟಿ ಸಭೆಯಲ್ಲಿ ಗಲಾಟೆಯಾಗಿದ್ದರಿಂದ ಸಾಯಂಕಾಲ ಮಾಜಿ ಸಿಎಂ ಬೊಮ್ಮಾಯಿ ಅವರು ಜಿಲ್ಲೆಯ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಈ ರೀತಿ ಗುಪ್ತ ಮೀಟಿಂಗ್ ನಡೆಸಿರೋದು ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಿಟ್ಟಿಗೆ ಕಾರಣವಾಗಿದೆ. ನಾಯಕರು ಹೊಂದಾಣಿಕೆ ಮಾಡಿಕೊಂಡಿದ್ದೇ ಪಕ್ಷದ ಸೋಲಿಗೆ ಕಾರಣ ಅಂತ ಕಾರ್ಯಕರ್ತರು ಚರ್ಚೆ ನಡೆಸುತ್ತಿದ್ದಾರೆ.
ಜಿಂಕೆ ಮಾಂಸ ತಿಂದ ಬಗ್ಗೆ ಬೊಮ್ಮಾಯಿ ಮೌನ !
ಈ ಹಿಂದೆ ಬೊಮ್ಮಾಯಿ ಸರ್ಕಾರ ಇದ್ದಾಗ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎಸ್.ಎಸ್ ಮಲ್ಲಿಕಾರ್ಜುನ್ ಅವರ ಮೇಲೆ ಪ್ರಕರಣ ದಾಖಲಾಗಿತ್ತು. ಜಿಂಕೆಯನ್ನು ಅಕ್ರಮವಾಗಿ ಕೊಂದು ಮಾಂಸ ಮಾಡಿ ತಿಂದಿರುವುದಾಗಿ ಪ್ರಕರಣ ದಾಖಲಾಗಿತ್ತು. ಎಸ್.ಎಸ್ ಮಲ್ಲಿಕಾರ್ಜುನ ಅವರು ತಮ್ಮ ಫಾರಂ ಹೌಸ್ ನಲ್ಲಿಯೇ ವನ್ಯಜೀವಿಗಳನ್ನು ಸಾಕಿದ್ದಾರೆ ಎಂದು ದೂರು ನೀಡಲಾಗಿತ್ತು.
ಪ್ರಕರಣ ಸಂಬಂಧ ಶಾಮನೂರು ಪುತ್ರ ಮಲ್ಲಿಕಾರ್ಜುನ್ ಬಂಧನಕ್ಕಾಗಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ, ಮೌನ ವಹಿಸಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಬಗ್ಗೆಯೂ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಕರಣದ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಅವರ ಫಾರಂ ಹೌಸಲ್ಲಿದ್ದ ಜಿಂಕೆಗಳನ್ನ ವಶಕ್ಕೆ ಪಡೆದಿದ್ದ ಅರಣ್ಯ ಸಿಬಂದಿ ಮೃಗಾಲಯಕ್ಕೆ ಬಿಟ್ಟಿದ್ದರು. ಆದರೆ ಮಾಜಿ ಶಾಸಕ ಮಲ್ಲಿಕಾರ್ಜುನ ಬಗ್ಗೆ ಯಾವುದೇ ತನಿಖೆ ನಡೆಸಿರಲಿಲ್ಲ.
Bommai and senior Congress leader Shamanur Shivashankarappa held a secret meeting at a time when bjp and Congress leaders are indulging in politics of compromise in the state. They held secret talks at a private resort on the outskirts of Davanagere last evening and closed the door for 25 minutes. It is interesting to note that the secret meeting was held in the wake of the debate on the politics of compromise in the state.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
06-07-25 03:53 pm
HK News Desk
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
06-07-25 10:52 pm
HK News Desk
Mangalore Foreign Job Scam, Hireglow Elegant,...
06-07-25 04:14 pm
Pregnant Woman Murder, Chamarajanagar: ಗರ್ಭಿಣ...
06-07-25 01:23 pm
6 ವರ್ಷಗಳ ಹಿಂದೆ ಮಗನ ಹತ್ಯೆ ; ಇಂದು ಅಪ್ಪನ ಗುಂಡಿಕ್...
05-07-25 11:04 pm
Puttur News, Girl Pregnant, Father Arrest: ಸಹ...
05-07-25 09:06 pm