ಬ್ರೇಕಿಂಗ್ ನ್ಯೂಸ್
14-06-23 04:00 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 14: ವಿಧಾನಸಭೆ ಚುನಾವಣೆಯಲ್ಲಿ ಹೊಸಬರಿಗೆ ಟಿಕೆಟ್ ಕೊಡಿ ಎಂದು ಬಿಜೆಪಿ ಹೈಕಮಾಂಡ್ಗೆ ಯಾರು ಐಡಿಯಾ ಕೊಟ್ಟಿದ್ದಾರೋ ಗೊತ್ತಿಲ್ಲ. ಅವರನ್ನು ನೇಣಿಗೆ ಬೇಕಾದರೂ ಹಾಕಿ, ಕಾಲನ್ನಾದರೂ ಕಡಿಯಿರಿ ಎಂದು ಹೇಳಿರುವ ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಮಾತಿಗೆ ಕಾಂಗ್ರೆಸ್ ಟಾಂಗ್ ನೀಡಿದೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಹೊಸಬರಿಗೆ ಟಿಕೆಟ್ ನೀಡಿದವರನ್ನು ನೇಣಿಗೆ ಹಾಕಿ ಅಂದಿದ್ದಾರೆ ಬಿಜೆಪಿ ಸಂಸದ. ಈಗ ಯಾರನ್ನು ನೇಣಿಗೆ ಹಾಕುವಿರಿ? ಎಂದು ಕಾಂಗ್ರೆಸ್ ಬಿಜೆಪಿಯನ್ನು ಪ್ರಶ್ನೆ ಮಾಡಿದೆ. 'ಅಮಿತ್ ಷಾರವರನ್ನೋ? ಬಿ.ಎಲ್ ಸಂತೋಷರನ್ನೋ ? ಪ್ರಹ್ಲಾದ್ ಜೋಶಿಯವರನ್ನೋ ? ಮೋದಿಯವರನ್ನೋ? ಬೊಮ್ಮಾಯಿಯವರನ್ನೋ? ಹೊಣೆ ಯಾರು, ನೇಣುಗಂಬ ಯಾರಿಗೆ? ಸೋಲಿನ ನಾಯಕತ್ವ ವಹಿಸಿಕೊಳ್ಳುವವರು ಯಾರು? ಬಿಜೆಪಿಯಿಂದ ಉತ್ತರ ನಿರೀಕ್ಷಿಸಬಹುದೇ?' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಬಿಜೆಪಿಯಲ್ಲಿ ಸೋಲಿನ ಅವಲೋಕನ ಚೆನ್ನಾಗಿಯೇ ನಡೆಯುತ್ತಿದೆ, ಬೊಮ್ಮಾಯಿ ಹಾಗೂ ಬಿ.ಎಸ್ ಯಡಿಯೂರಪ್ಪ ಅವರನ್ನು ಪರೋಕ್ಷವಾಗಿ ಟಾರ್ಗೆಟ್ ಮಾಡುತ್ತಿರುವ ಪ್ರತಾಪ್ ಸಿಂಹ ಹಾಗೂ ಸಿ.ಟಿ ರವಿ ಅವರ ಹೇಳಿಕೆಗಳ ಹಿಂದಿರುವುದು ಮತ್ತದೇ ಜೋಶಿ, ಸಂತೋಷ್ ಜೋಡಿ. ಸೋಲಿನ ನಂತರ ನಾಪತ್ತೆಯಾಗಿರುವ ಈ ಜೋಡಿ ತೆರೆಯ ಹಿಂದೆ ನಿಂತು ಕಲ್ಲು ಹೊಡೆಯುವ ಪ್ರಯತ್ನ ಮಾಡುತ್ತಿದ್ದಾರೆ.


ರಿಟೈರ್ಡ್ ಹರ್ಟ್ ಆಗಿರುವ ಸಿಟಿ ರವಿ ಈಗ ಸ್ವಪಕ್ಷದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ, ಅವರ ಅರಣ್ಯ ರೋದನಕ್ಕೆ ಪ್ರತಾಪ್ ಸಿಂಹ ದನಿ ಜೋಡಿಸಿದ್ದಾರೆ. ಇಬ್ಬರಿಗೂ ದಮ್ಮು ತಾಕತ್ತು ಇದ್ದರೆ ಅಡ್ಜಸ್ಟ್ ಮೆಂಟ್ ಮಾಡಿಕೊಂಡ ತಮ್ಮ ಪಕ್ಷದ ನಾಯಕರ ಹೆಸರು ಹೇಳಿ ಆರೋಪಿಸಲಿ. ಅಂದಹಾಗೆ ಬಿಜೆಪಿಯೊಂದಿಗೆ ಅಡ್ಜಸ್ಟ್ ಮಾಡಿಕೊಂಡಿದ್ದ ಕುಮಾರಸ್ವಾಮಿ ತಲೆ ಸವರಿಕೊಂಡು ನಗುತ್ತಿದ್ದಾರಂತೆ ಅಲ್ಲವೇ ಎಂದು ಟ್ವೀಟ್ ಮಾಡಿದೆ.
ಹೊಸಬರಿಗೆ ಟಿಕೆಟ್ ನೀಡಿದವರನ್ನು ನೇಣಿಗೆ ಹಾಕಿ ಅಂದಿದ್ದಾರೆ ಬಿಜೆಪಿ ಸಂಸದ.
— Karnataka Congress (@INCKarnataka) June 14, 2023
ಈಗ ಯಾರನ್ನು ನೇಣಿಗೆ ಹಾಕುವಿರಿ @BJP4Karnataka?
ಅಮಿತ್ ಷಾರವರನ್ನೋ?
ಬಿ ಎಲ್ ಸಂತೋಷರನ್ನೊ?
ಪ್ರಹ್ಲಾದ್ ಜೋಶಿಯವರನ್ನೋ ?
ಮೋದಿಯವರನ್ನೋ?
ಬೊಮ್ಮಾಯಿಯವರನ್ನೋ?
ಹೊಣೆ ಯಾರು, ನೇಣುಗಂಬ ಯಾರಿಗೆ? ಸೋಲಿನ ನಾಯಕತ್ವ ವಹಿಸಿಕೊಳ್ಳುವವರು ಯಾರು?
ಬಿಜೆಪಿಯಿಂದ ಉತ್ತರ… pic.twitter.com/siPebUNZia
Vijayapura MP Ramesh Jigajinagi wants BJP to hang leaders who denied tickets to Seniors, Congress slams on Twitter asking who is the first leader to be hanged. A statement by Ramesh Jigajinagi, MP from Vijayapura, implying that some of BJP leaders were responsible for the party’s debacle in the Karnataka Assembly elections, has created a controversy
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am