ಬ್ರೇಕಿಂಗ್ ನ್ಯೂಸ್
14-06-23 07:33 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 14: ಕಾಂಗ್ರೆಸ್ ವಿರುದ್ಧ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಟ್ವಿಟರ್ ಮೂಲಕ ತೀವ್ರ ವಾಗ್ದಾಳಿ ನಡೆಸಿದ್ದು ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಅವರನ್ನು ಸೋಲಿಸಿದ್ದು ಯಾರು? 135 ಸೀಟು ಪಡೆದಿದ್ದೇವೆಂದು ಕಾಂಗ್ರೆಸ್ ಅಮಲಿನಲ್ಲಿ ತೇಲುತ್ತಿದೆ ಎಂದು ಮೊನಚು ಮಾತುಗಳಿಂದ ತಿವಿದಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಖರ್ಗೆ, ಪರಮೇಶ್ವರ್ ಸೋಲಿಸಲು ಹೂಡಿದ ತಂತ್ರ, ಆಡಿದ ಸದಾರಮೆ ಆಟಗಳ ಬಗ್ಗೆ ಪ್ರಾಯಶ್ಚಿತ್ತ ಮಾಡಿಕೊಳ್ಳುವ ಧೈರ್ಯ ಕಾಂಗ್ರೆಸ್ ಗೆ ಇದೆಯೇ ಎಂದು ಪ್ರಶ್ನೆ ಮಾಡಿದೆ.
135 ಸೀಟುಗಳ ಅಮಲಿನಲ್ಲಿ ತೇಲುತ್ತಿರುವ ಕಾಂಗ್ರೆಸ್ ಪಕ್ಷ, 'ಕೋತಿ ಮೊಸರನ್ನ ತಿಂದು ಮೇಕೆ ಮೂತಿಗೆ ಒರೆಸಿತು' ಎಂಬಂತೆ ಹುಚ್ಚಾಟ ಆಡುತ್ತಿದೆ. ಕಳೆದೆರಡು ಲೋಕಸಭೆ ಚುನಾವಣೆಗಳಲ್ಲಿ ಕಂಡ ಅತಿ ಅಪಮಾನಕರ ಸೋಲನ್ನು ಮರೆತು, ಈಗ ಜಗತ್ತನ್ನೇ ಗೆದ್ದೆ ಎಂದು ಗದೆ ತಿರುಗಿಸುತ್ತಿರುವುದು ವಿಕೃತಿಯ ಪರಮಾವಧಿ. ಜಾತಿ, ಧರ್ಮ ಒಡೆದು, ಮನಸ್ಸುಗಳ ನಡುವೆ ದ್ವೇಷದ ಬೆಂಕಿ ಬಿತ್ತಿ, ಪರಸ್ಪರ ವ್ಯವಹಾರದ ಪರಿಣಾಮವೇ ಈ 135 ಸೀಟು. ಶಿಗ್ಗಾಂವಿ, ವರುಣಾ, ಶಿಕಾರಿಪುರ, ಚಿಕ್ಕಮಗಳೂರು, ಕನಕಪುರ ಕ್ಷೇತ್ರ ಸೇರಿ ಆಯ್ದ ಜಿಲ್ಲೆಗಳಲ್ಲಿ ನಡೆದ ಅಡ್ಜಸ್ಟ್ ಮೆಂಟ್ ಆಟ ಎರಡೂ ರಾಷ್ಟ್ರೀಯ ಪಕ್ಷಗಳ ನೀತಿಗೆಟ್ಟ ರಾಜಕಾರಣಕ್ಕೆ ಹಿಡಿದ ಕನ್ನಡಿ ಎಂದು ಕಿಡಿಕಾರಿದೆ.


ಅಲ್ಲದೆ, ಬಿಜೆಪಿಯ ಸಿಟಿ ರವಿ, ಸಂಸದ ಪ್ರತಾಪ್ ಸಿಂಹ, ಡಾ.ಜಿ ಪರಮೇಶ್ವರ್ ಅವರು ಎತ್ತಿರುವ ಪ್ರಶ್ನೆಗಳಿಗೆ ಉತ್ತರ ಕೊಡುವ ದಮ್ಮು, ತಾಕತ್ತು ಮುಖ ಮೂತಿಗೆಲ್ಲ ಒಳ ರಾಜಕೀಯದ ಗಲೀಜು ಮೆತ್ತಿಕೊಂಡ ಎರಡೂ ಪಕ್ಷಗಳ ನಾಯಕರಿಗೆ ಇದೆಯಾ? ಹಗಲಲ್ಲಿ ಹಾರಾಟ, ಕತ್ತಲಾದರೆ ಕಳ್ಳಾಟ!! ಕಾರ್ಯಕರ್ತರೇ ಹಾದಿಬೀದಿಯಲ್ಲಿ ಮಾತನಾಡುತ್ತಿದ್ದಾರೆ. ಮಂಡ್ಯ ಜಿಲ್ಲೆ ಒಂದರಲ್ಲಿಯೇ ಪ್ರತಿ ಕ್ಷೇತ್ರಕ್ಕೆ ಕಮ್ಮಿ ಎಂದರೂ 10-20 ಕೋಟಿ ವ್ಯಯಿಸಿ ಮತ ವಿಭಜನೆ ಮಾಡಿದ್ದು ಯಾರು? ಒಬ್ಬರನ್ನು ಒಬ್ಬರು ಮೀರಿಸುವಂತೆ ಹಣದ ಹೊಳೆ ಹರಿಸಿದ್ದು ಯಾರು? ಪ್ರಾದೇಶಿಕ ಪಕ್ಷದ ಕತ್ತು ಕೊಯ್ಯಲು ನೀಚ, ನಿಕೃಷ್ಟ ರಾಜಕೀಯ ಮಾಡಿದ್ದು ಯಾರು? ಈಗ ನೀವೇ ಸತ್ಯ ಹೇಳುತ್ತಿದ್ದೀರಿ, ಸತ್ಯದ ಕತ್ತು ಕೊಯ್ಯುವುದು ಸಾಧ್ಯವೇ? ಎಂದು ಜೆಡಿಎಸ್ ಕಿಡಿಕಾರಿದೆ.


ಅಂತೆಯೇ, 'ಅಡ್ಜಸ್ಟ್ ಮೆಂಟ್ ಇಲ್ಲದಿದ್ದರೆ ಕಳೆದ ಬಾರಿ ಡಾ.ಜಿ.ಪರಮೇಶ್ವರ ಅವರು ಕೊರಟಗೆರೆಯಲ್ಲಿ, ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರ್ಗಿಯಲ್ಲಿ ಸೋತಿದ್ದೇಕೆ? ದಲಿತೋದ್ಧಾರ, ಆಹಿಂದೋದ್ಧಾರ ಎನ್ನುವರು, ಈ ಇಬ್ಬರನ್ನು ಸೋಲಿಸಲು ಹೂಡಿದ ತಂತ್ರಗಳ ಬಗ್ಗೆ, ಆಡಿದ ಸದಾರಮೆ ಆಟಗಳ ಬಗ್ಗೆ ಪ್ರಾಯಶ್ಚಿತ್ತ ಮಾಡಿಕೊಳ್ಳುವ ಧೈರ್ಯ ಈ ಕಾಂಗ್ರೆಸ್ ಗೆ ಇದೆಯಾ? ಆಪರೇಶನ್ ಕಮಲ; ಇಬ್ಬರು ನಾಯಕರ ಜಂಟಿ ಆಪರೇಶನ್ ಎನ್ನುವುದು ಯಾರಿಗೆ ಗೊತ್ತಿಲ್ಲ? ಇದರ ಅಸಲಿ ಕಥೆ ಗೊತ್ತಿಲ್ಲದಷ್ಟು ಮುಗ್ಧರಾ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು? ಆ ಹೇಸಿಗೆಯಲ್ಲಿ ಬಿದ್ದು ಹೊರಳುತ್ತಿರುವ ಕಾಂಗ್ರೆಸ್ ಆ ಗಲೀಜನ್ನೆಲ್ಲ ಮುಖಕ್ಕೆ ಮೆತ್ತಿಕೊಂಡು ಇತರರಿಗೂ ಮೆತ್ತಲು ಹವಣಿಸುತ್ತಿದೆ! ಛೇ, ಅಸಹ್ಯ!! ವಿಕೃತಿ ವಿನಾಶಕ್ಕೆ ದಾರಿ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.
135 ಸೀಟುಗಳ ಅಮಲಿನಲ್ಲಿ ತೇಲುತ್ತಿರುವ @INCKarnataka ಪಕ್ಷ, 'ಕೋತಿ ಮೊಸರನ್ನ ತಿಂದು ಮೇಕೆ ಮೂತಿಗೆ ಒರೆಸಿತು' ಎಂಬಂತೆ ಹುಚ್ಚಾಟ ಆಡುತ್ತಿದೆ. ಕಳೆದೆರಡು ಲೋಕಸಭೆ ಚುನಾವಣೆಗಳಲ್ಲಿ ಕಂಡ ಅತಿ ಅಪಮಾನಕರ ಸೋಲನ್ನು ಮರೆತು,ಈಗ ಜಗತ್ತನ್ನೇ ಗೆದ್ದೆ ಎಂದು ಗದೆ ತಿರುಗಿಸುತ್ತಿರುವುದು ವಿಕೃತಿಯ ಪರಮಾವಧಿ.1/6#ಬಿಜೆಪಿ_ಕಾಂಗ್ರೆಸ್_ಭಾಯಿ_ಭಾಯಿ
— Janata Dal Secular (@JanataDal_S) June 14, 2023
HD Kumaraswamy Slams Congress government over adjustment politics, Karghe planned for Parmeshwars defeat.
24-04-26 02:35 pm
HK News Staffer
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
24-04-26 01:51 pm
HK News Staffer
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm