ಬ್ರೇಕಿಂಗ್ ನ್ಯೂಸ್
18-06-23 07:56 pm HK News Desk ಕರ್ನಾಟಕ
ಕಲಬುರ್ಗಿ, ಜೂನ್ 18: ಚಿಂಚೋಳಿ ತಾಲೂಕಿನ ಕುಂಚಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಪೋಚಾವರಂ ಗ್ರಾಮದಲ್ಲಿ ತಂದೆ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.
ಕುಂಚಾವರಂ ಗ್ರಾಮದ ಹಣಮಂತ ಸಂಜಪ್ಪ (36), ಅಕ್ಷತಾ (6), ಓಂಕಾರ (9) ಮೃತಪಟ್ಟರು.
ಹಣಮಂತ ತೆಲಂಗಾಣ ರಾಜ್ಯದ ಹೈದರಾಬಾದ್ ಗೆ ಕೂಲಿ ಕೆಲಸಕ್ಕೆ ಹೋಗಿದ್ದನು. ಶನಿವಾರ ತನ್ನ ಮಕ್ಕಳನ್ನು ಕರೆದುಕೊಂಡು ಬಂದು ತನ್ನ ಅಣ್ಣ ಗೋಪಾಲ ಇವರಿಗೆ ಪೋನ ಮಾಡಿ ‘ನಾನು ಮತ್ತು ನನ್ನ ಮಕ್ಕಳು ಬಾವಿಗೆ ಬಿದ್ದು ಸಾಯುತ್ತಿದ್ದೇವೆ’ ಎಂದು ಹೇಳಿದ್ದಾನೆ. ಗಾಬರಿಗೊಂಡ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಪೊಲೀಸರು ಎಲ್ಲಾ ಕಡೆ ಹುಡುಕಾಟ ಮಾಡಿದ್ದಾರೆ. ಆದರೆ ಎಲ್ಲಿಯೂ ಪತ್ತೆಯಾಗಲಿಲ್ಲ. ಇಂದು ಭಾನುವಾರ ಪೊಚಾವರಂ ಗ್ರಾಮದ ಬಾವಿಯ ಬಳಿ ಚಪ್ಪಲಿ ಕಂಡು ಬಂದವು. ಬಾವಿಯಲ್ಲಿ ಪಾತಾಳಗರಡಿ ಹಾಕಿ ಹುಡುಕಿದಾಗ ಹಣಮಂತ ಶವ ಪತ್ತೆಯಾಗಿದೆ. ಜೊತೆಗೆ ಬೆನ್ನಿಗೆ ಇಬ್ಬರು ಮಕ್ಕಳ ಶವ ಕಾಣಿಸಿಕೊಂಡಿವೆ.
ಪತ್ನಿ ಮಕ್ಕಳೊಂದಿಗೆ ಹೈದ್ರಾಬಾದನಲ್ಲಿ ವಾಸಿಸುತ್ತಿದ್ದ ಹಣಮಂತ ನಿನ್ನೆ ಮಕ್ಕಳೊಂದಿಗೆ ಹೈದ್ರಾಬಾದನಿಂದ ಸ್ವಗ್ರಾಮಕ್ಕೆ ಬಂದಿದ್ದನು. ಗದೂರದ ಊರಿಗೆ ದುಡಿಯಲು ಹೋಗಿ ವಾಪಸ್ ಬಂದಿದ್ದರೂ ಆತನ ಮುಖದಲ್ಲಿ ಸಂತಸ ಇರಲಿಲ್ಲ. ನಿನ್ನೆಯಿಂದ ಸದಾ ಚಿಂತನೆಯಲ್ಲೇ ಮುಳುಗಿದ್ದ ಹಣಮಂತ ಇಂದು ಮಧ್ಯಾಹ್ನ ವೇಳೆ ಮಕ್ಕಳನ್ನು ತನ್ನೊಂದಿಗೆ ಕರೆದೊಕೊಂಡು ಹೋಗಿ, ಇಬ್ಬರಿಗೂ ಮೊದಲು ಹಗ್ಗ ಕಟ್ಟಿದ್ದಾನೆ. ಈ ವೇಳೆ ಅಪ್ಪ ಏನು ಮಾಡುತ್ತಿದ್ದಾನೆ ನಂತರ, ಇಬ್ಬರಿಗೂ ಕಟ್ಟಿದ್ದ ಹಗ್ಗವನ್ನು ತಾನೂ ಕಟ್ಟಿಕೊಂಡು ಬಾಯಿಗೆ ಜಿಗಿದಿದ್ದಾನೆ.
Chincholi Kalaburagi, Father jumps into well with his two children, commits suicide on fathers day.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am