ಬ್ರೇಕಿಂಗ್ ನ್ಯೂಸ್
19-06-23 03:13 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 19: ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋಮುರಾಜಕಾರಣಕ್ಕೆ ಬಲಿಯಾದ ಬಳಿಕ ಸರ್ಕಾರದ ತಾರತಮ್ಯ ನೀತಿಯಿಂದ ವಂಚನೆಗೆ ಒಳಗಾಗಿದ್ದ ಆರು ಕುಟುಂಬಗಳಿಗೆ ತಲಾ ರೂ. 25 ಲಕ್ಷ ಮೊತ್ತದ ಪರಿಹಾರ ಚೆಕ್ ಗಳನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತರಿಸಿ ಮಾತನಾಡಿದರು.

ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯ. ಬಿಜೆಪಿಯ ದ್ವೇಷ ಮತ್ತು ತಾರತಮ್ಯ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ ಎಂದು ಸಿದ್ದರಾಮಯ್ಯ ಹೇಳಿದರು.

ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತ್ತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಸರ್ಕಾರ ಮಾಡಿದ್ದ ತಾರತಮ್ಯವನ್ನು ನಾವು ಸರಿಪಡಿಸಿದ್ದೇವೆ ಎಂದೂ ಅವರು ತಿಳಿಸಿದರು.
'ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಈಗಾಗಲೇ ಸ್ಪಷ್ಟ ಸೂಚನೆ ನೀಡಿದ್ದೇನೆ' ಎಂದೂ ಅವರು ಹೇಳಿದರು.
CM Siddaramaiah warns of strict against against Moral Policing and attacks in state, says given orders to police department to take action. He spoke to media persons while handovering cheques to the families of Deceased in Communial Killings in Karnataka.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm