ಬ್ರೇಕಿಂಗ್ ನ್ಯೂಸ್
22-06-23 08:27 pm HK News Desk ಕರ್ನಾಟಕ
ಬೆಂಗಳೂರು, ಜೂನ್ 22: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ಮೇಲೆ ನಿಗಾ ವಹಿಸಿ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಅಲೋಕ್ ಮೋಹನ್ ಎಚ್ಚರಿಕೆ ನೀಡಿದ್ದಾರೆ.
ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಗುರುವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಸುದ್ದಿಗಾರರ ಜತೆ ಮಾತನಾಡಿದ ಡಾ.ಅಲೋಕ್ ಮೋಹನ್, ಜಾಲತಾಣಗಳಲ್ಲಿ ಬರುವ ಸುಳ್ಳು ಸುದ್ದಿಗಳ ಮೇಲೆ ವಿಶೇಷ ನಿಗಾವಹಿಸಲಾಗುತ್ತದೆ. ಇದಕ್ಕಾಗಿ ಪ್ರತ್ಯೇಕ ತಂಡ ರಚನೆ ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ರಾಜಧಾನಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಂಚಾರ ವ್ಯವಸ್ಥೆ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಗರದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಸಲಹೆ-ಸೂಚನೆ ನೀಡಲಾಗಿದೆ.
ಠಾಣೆಗಳಿಗೆ ಬರುವ ಜನರೊಂದಿಗೆ ಪೊಲೀಸರು ಸೌಜನ್ಯಯುತವಾಗಿ ವರ್ತಿಸಬೇಕು. ಈಗಾಗಲೇ ಠಾಣೆಗಳಲ್ಲಿ ಹಿರಿಯ ಅಧಿಕಾರಿಗಳ ಮೊಬೈಲ್ ನಂಬರ್ ಮತ್ತು ಹೆಸರು ಸಮೇತ ಫಲಕಗಳ ಅಳವಡಿಕೆಗೆ ಆದೇಶಿಸಲಾಗಿದೆ. ತಿಂಗಳಲ್ಲಿ ಅಥವಾ ವಾರದಲ್ಲಿ ಒಮ್ಮೆಯಾದರೂ ಠಾಣೆಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಎಸ್ಪಿಗಳಿಗೆ, ನಗರದ ಡಿಸಿಪಿ ಮತ್ತು ಎಸಿಪಿಗಳಿಗೆ ಸಹ ಸೂಚಿಸಲಾಗಿದೆ.
ಕೆಲವು ಪೊಲೀಸ್ ಠಾಣೆಗಳಲ್ಲಿ ನಾಮಫಲಕ ಹಾಕದ ಬಗ್ಗೆ ದೂರುಗಳು ಬಂದಿವೆ. ಈ ಉದಾಸೀನತೆ ಮುಂದುವರಿದರೇ ಅಶಿಸ್ತು ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ. ನಾನು ಸಹ ಆಯ್ದ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತೇನೆ ಎಂದು ಡಿಜಿಪಿ ಡಾ. ಅಲೋಕ್ ಮೋಹನ್, ಮುನ್ನೆಚ್ಚರಿಕೆ ಕೊಟ್ಟಿದ್ದಾರೆ.
ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಹೆಚ್ಚುವರಿ ಆಯುಕ್ತರಾದ ಸತೀಶ್ ಕುಮಾರ್, ರಮಣ ಗುಪ್ತಾ, ಜಂಟಿ ಆಯುಕ್ತರಾದ ಡಾ.ಎಸ್.ಡಿ. ಶರಣಪ್ಪ ಮತ್ತು ಎಂ.ಎನ್. ಅನುಚೇತ್ ಸೇರಿದಂತೆ ಎಲ್ಲ ಡಿಸಿಪಿಗಳು ಉಪಸ್ಥಿತರಿದ್ದರು.
Treat public coming to Police station with respect, DCPs, SPs in Karnataka should visit one police station every day says DG Alok Mohan. I too will give surprise visits to police station any officer found irresponsible in thier work strict action will be implemented he added.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm