ಬ್ರೇಕಿಂಗ್ ನ್ಯೂಸ್
24-06-23 12:55 pm HK News Desk ಕರ್ನಾಟಕ
ಬಳ್ಳಾರಿ, ಜೂನ್ 24: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡರೂ ನೈತಿಕ ಹೊಣೆ ಹೊತ್ತು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ರಾಜಿನಾಮೆ ಸಲ್ಲಿಸಿರಲಿಲ್ಲ. ಈಗ ಹೊಸಬರ ನೇಮಕ ಖಚಿತವಾಗುತ್ತೆ, ಇವರನ್ನು ಕಿತ್ತು ಹಾಕುತ್ತಾರೆ ಎನ್ನುವಾಗ ರಾಜಿನಾಮೆ ನೀಡಿದ್ದಾರೆ ಎಂಬ ಸುದ್ದಿ ಹರಡಿದೆ. ಬಳ್ಳಾರಿಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಿದ್ದೇನೆ ಎಂದಿದ್ದಾರೆ ಎಂಬುದಾಗಿ ಟಿವಿ ಮಾಧ್ಯಮಗಳು ವರದಿ ಮಾಡಿವೆ. ಆದರೆ ಇದರ ಬೆನ್ನಲ್ಲೇ ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ರಾಜಿನಾಮೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಶನಿವಾರ ಬಳ್ಳಾರಿಯಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ್ದ ನಳಿನ್ ಕುಮಾರ್ ಕಟೀಲ್, ಈಗಾಗಲೇ ನನ್ನ ಅವಧಿ ಮುಗಿದಿರುವುದರಿಂದ ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ. ರಾಜ್ಯಾಧ್ಯಕ್ಷನಾಗಿ ಎರಡು ವರ್ಷದ ಅವಧಿ ಮುಗಿದಿದೆ. ಅದರ ಬೆನ್ನಲ್ಲೇ ನಾನು ರಾಜೀನಾಮೆಯನ್ನೂ ನೀಡಿದ್ದೆ ಎಂದು ಹೇಳಿದ್ದರು. ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿ.ಸೋಮಣ್ಣ ಬೇಡಿಕೆ ಇಟ್ಟ ಪ್ರಶ್ನೆಗೆ ಉತ್ತರಿಸಿ, ಸೋಮಣ್ಣ ಹಿರಿಯ ನಾಯಕರು. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕೇಳುವುದು ತಪ್ಪಲ್ಲ ಎಂದರು. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಪಕ್ಷ ನೇಮಕ ಮಾಡಲಿದೆ ಎಂದು ಹೇಳಿದರು.
ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ರಾಜಿನಾಮೆ ನೀಡಿದ್ದಾರೆಂದು ಸುದ್ದಿ ಬಿತ್ತರವಾದ ಬೆನ್ನಲ್ಲೇ ರಾಜ್ಯಾಧ್ಯಕ್ಷರ ಹೆಸರಲ್ಲಿ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಪ್ರಕಟಣೆ ನೀಡಿದ್ದು ನಳಿನ್ ಕುಮಾರ್ ರಾಜಿನಾಮೆ ನೀಡಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷ ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ಮಾಡಲಿದೆ. ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ನಳಿನ್ ಕುಮಾರ್ ಹೆಸರಿನಲ್ಲಿ ಮಾಧ್ಯಮ ಸಂಚಾಲಕ ಪ್ರಕಟಣೆ ನೀಡಿದ್ದಾರೆ.
ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ಒದ್ದಾಟ ನಡೆಸುತ್ತಿದೆ. ಇಂದು, ನಾಳೆ ಬದಲಾವಣೆ ಎನ್ನುವ ಸುದ್ದಿ ದಿನವೂ ಹರಿದಾಡುತ್ತಿದ್ದು ಹೈಕಮಾಂಡ್ ಇಷ್ಟು ದುರ್ಬಲ ಆಗಿದ್ದೇಕೆ ಎನ್ನುವ ಮಾತು ಕಾರ್ಯಕರ್ತರಿಂದ ಕೇಳಿಬರುತ್ತಿದೆ.
Nalin Kumar Kateel resigns as BJP Karnataka President is Fake News, Never made such statement says Kateel. Dakshina Kannada MP Nalin Kumar Kateel has declared that he had resigned from his post of Karnataka State President of the BJP. Addressing reporters in Ballari on Saturday, Kateel said that he had submitted his resignation to the party high command, taking moral responsibility for the defeat of the party in the Karnataka Assembly elections in May which is fake he added. I only stated that i am taking the sole responsibility of losing elections in Karnataka he added.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
07-07-25 04:11 pm
HK News Desk
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
07-07-25 05:02 pm
Mangalore Correspondent
Mangalore Car Accident, Thumbe: ಹಳೆ ಸ್ವಿಫ್ಟ್...
05-07-25 05:16 pm
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
07-07-25 03:30 pm
Mangalore Correspondent
Moral policing, Puttur, Mangalore Crime: ನೀನು...
07-07-25 12:20 pm
Tamilnadu Lock up death, Kannada News: ತಮಿಳುನ...
06-07-25 10:52 pm
Mangalore Foreign Job Scam, Hireglow Elegant,...
06-07-25 04:14 pm
Pregnant Woman Murder, Chamarajanagar: ಗರ್ಭಿಣ...
06-07-25 01:23 pm