ಬ್ರೇಕಿಂಗ್ ನ್ಯೂಸ್
24-06-23 03:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 24: ನಾನು ರಾಮನಗರ ಜಿಲ್ಲಾ ಉಸ್ತುವಾರಿ ಆದಾಗ, ನಿನಗೂ ರಾಮನಗರಕ್ಕೂ ಏನು ಸಂಬಂಧ ಅಂತಾ ಡಿಕೆ ಶಿವಕುಮಾರ್ ಕೇಳಿದ್ರು. ಈಗ ನಾನು ಕೇಳ್ತೀನಿ, ನಿನಗೂ ಬೆಂಗಳೂರಿಗೂ ಏನಪ್ಪ ಸಂಬಂಧ ಶಿವಕುಮಾರ? ಎಂದು ಏಕವಚನದಲ್ಲಿಯೇ ಮಾಜಿ ಡಿಸಿಎಂ ಡಾ ಸಿಎನ್ ಅಶ್ವತ್ಥ ನಾರಾಯಣ ಹಾಲಿ ಡಿಸಿಎಂ ಡಿಕೆ ಶಿವಕುಮಾರ್ಗೆ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮನಗರ ನನ್ನ ಪೂರ್ವಿಕರ ಜಿಲ್ಲೆ. ನನಗೆ ಕೇಳಿದ ಹಾಗೇ ನಿನಗೂ ಕೇಳ್ತಿದೀನಿ. ನಿನಗೂ ಬೆಂಗಳೂರಿಗೆ ಏನು ಸಂಬಂಧ ಶಿವಕುಮಾರ? ಬೆಂಗಳೂರಿಗೆ ನಿಮ್ಮಿಂದ ನಯಾಪೈಸೆ ಲಾಭ ಇಲ್ಲ. ನಿಮ್ಮನ್ನು ಜನ ಕಳೆದ 35 ವರ್ಷಗಳಿಂದ ನೋಡಿದ್ದಾರೆ. ಡಿಕೆ ಶಿವಕುಮಾರ್ ಅಂದ್ರೆ ಏನು, ಯಾರು ಎಂಬುದನ್ನು ಜನ ನೋಡಿದ್ದಾರೆ. ನಿಮ್ಮಿಂದ ಏನು ಆಗಲ್ಲ, ನಿಮಗೆ ಜನರ ಮೇಲೆ ಕಾಳಜಿ ಇಲ್ಲ ಎಂದು ಕಿಡಿಕಾರಿದರು.
![]()
ಡಿಕೆ ಶಿವಕುಮಾರ್ ರಿಯಲ್ ಎಸ್ಟೇಟ್ ವ್ಯಾಪಾರಿ, ಅವರಿಂದ ಬೆಂಗಳೂರಿಗೆ ಉಪಯೋಗ ಆಗಲ್ಲ. ಡಿಕೆ ಶಿವಕುಮಾರ್ ಅವರದ್ದು ದ್ವೇಷದ ರಾಜಕಾರಣ, ವೇಷದ ರಾಜಕಾರಣ. ಡಿಕೆ ಶಿವಕುಮಾರ್ ಅಂದ್ರೆ ದ್ವೇಷ, ಡಿಕೆ ಶಿವಕುಮಾರ್ ಅಂದ್ರೆ ಅಸೂಯೆ, ಕಿರುಕುಳ ಎಂದು ಡಾ ಸಿಎನ್ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದರು.
ಗ್ಯಾರಂಟಿ ಯೋಜನೆಗಳ ಜಾರಿ ವಿಳಂಬದ ಬಗ್ಗೆ ಮಾತನಾಡಿದ ಸಿಎನ್ ಅಶ್ವತ್ಥ ನಾರಾಯಣ, ಕಾಂಗ್ರೆಸ್ನವರು ಮಾತು ತಪ್ಪುತ್ತಿದ್ದಾರೆ. ಅವರು ನುಡಿದಂತೆ ಉಚಿತ ಗ್ಯಾರಂಟಿಗಳನ್ನು ಕೊಡಲಿ. ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಪ್ರತಿಯೊಬ್ಬರಿಗೂ ಕೊಡಬೇಕು. ಗ್ಯಾರಂಟಿಗಳನ್ನು ಕೊಡುವುದಕ್ಕೆ ಶುರು ಮಾಡಿ, ಬೇಕಾದವರು ಅರ್ಜಿ ಹಾಕೋತಾರೆ. ಈ ಸರ್ಕಾರಕ್ಕೆ ಗ್ಯಾರಂಟಿಗಳನ್ನು ಕೊಡೋಕ್ಕೆ ಇಷ್ಟ ಇಲ್ಲ. ಕಳ್ಳನಿಗೆ ಪಿಳ್ಳೆ ನೆವ ಎಂಬಂತೆ ಇವರ ಪರಿಸ್ಥಿತಿ ಆಗಿದೆ ಎಂದು ಕಿಡಿಕಾರಿದರು.
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ಮಾತನಾಡಿ, ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ. ಪಕ್ಷ ಯಾರನ್ನೇ ನೇಮಕ ಮಾಡಿದರೂ ನಾವು ಕೆಲಸ ಮಾಡ್ತೇವೆ. ಯಾರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೂ ನಾವು ಒಪ್ಕೋತೇವೆ. ಸಾಕು ಈ ಜಾತಿ ವಿಚಾರ, ನಾವು ಕನ್ನಡಿಗರು, ಕರ್ನಾಟಕದವರು. ಪಕ್ಷದಲ್ಲಿ ಜವಾಬ್ದಾರಿ ನೀಡಿದರೆ ನಿಭಾಯಿಸುತ್ತೇನೆ. ಹಿಂದೆ ಡಿಸಿಎಂ ಸ್ಥಾನವನ್ನು ಬಯಸಿದ್ದಿಲ್ಲ, ನೀಡಿದರು ನಿಭಾಯಿಸಿದೆ ಎಂದು ಹೇಳಿದರು.
Ashwath Narayan slams DK Shivakumar in singular, says what is your connection with Bangalore, what good have you done. There is not a paisa benefit from him he added.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am