ಬ್ರೇಕಿಂಗ್ ನ್ಯೂಸ್
24-06-23 03:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 24: ನಾನು ರಾಮನಗರ ಜಿಲ್ಲಾ ಉಸ್ತುವಾರಿ ಆದಾಗ, ನಿನಗೂ ರಾಮನಗರಕ್ಕೂ ಏನು ಸಂಬಂಧ ಅಂತಾ ಡಿಕೆ ಶಿವಕುಮಾರ್ ಕೇಳಿದ್ರು. ಈಗ ನಾನು ಕೇಳ್ತೀನಿ, ನಿನಗೂ ಬೆಂಗಳೂರಿಗೂ ಏನಪ್ಪ ಸಂಬಂಧ ಶಿವಕುಮಾರ? ಎಂದು ಏಕವಚನದಲ್ಲಿಯೇ ಮಾಜಿ ಡಿಸಿಎಂ ಡಾ ಸಿಎನ್ ಅಶ್ವತ್ಥ ನಾರಾಯಣ ಹಾಲಿ ಡಿಸಿಎಂ ಡಿಕೆ ಶಿವಕುಮಾರ್ಗೆ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮನಗರ ನನ್ನ ಪೂರ್ವಿಕರ ಜಿಲ್ಲೆ. ನನಗೆ ಕೇಳಿದ ಹಾಗೇ ನಿನಗೂ ಕೇಳ್ತಿದೀನಿ. ನಿನಗೂ ಬೆಂಗಳೂರಿಗೆ ಏನು ಸಂಬಂಧ ಶಿವಕುಮಾರ? ಬೆಂಗಳೂರಿಗೆ ನಿಮ್ಮಿಂದ ನಯಾಪೈಸೆ ಲಾಭ ಇಲ್ಲ. ನಿಮ್ಮನ್ನು ಜನ ಕಳೆದ 35 ವರ್ಷಗಳಿಂದ ನೋಡಿದ್ದಾರೆ. ಡಿಕೆ ಶಿವಕುಮಾರ್ ಅಂದ್ರೆ ಏನು, ಯಾರು ಎಂಬುದನ್ನು ಜನ ನೋಡಿದ್ದಾರೆ. ನಿಮ್ಮಿಂದ ಏನು ಆಗಲ್ಲ, ನಿಮಗೆ ಜನರ ಮೇಲೆ ಕಾಳಜಿ ಇಲ್ಲ ಎಂದು ಕಿಡಿಕಾರಿದರು.
![]()
ಡಿಕೆ ಶಿವಕುಮಾರ್ ರಿಯಲ್ ಎಸ್ಟೇಟ್ ವ್ಯಾಪಾರಿ, ಅವರಿಂದ ಬೆಂಗಳೂರಿಗೆ ಉಪಯೋಗ ಆಗಲ್ಲ. ಡಿಕೆ ಶಿವಕುಮಾರ್ ಅವರದ್ದು ದ್ವೇಷದ ರಾಜಕಾರಣ, ವೇಷದ ರಾಜಕಾರಣ. ಡಿಕೆ ಶಿವಕುಮಾರ್ ಅಂದ್ರೆ ದ್ವೇಷ, ಡಿಕೆ ಶಿವಕುಮಾರ್ ಅಂದ್ರೆ ಅಸೂಯೆ, ಕಿರುಕುಳ ಎಂದು ಡಾ ಸಿಎನ್ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದರು.
ಗ್ಯಾರಂಟಿ ಯೋಜನೆಗಳ ಜಾರಿ ವಿಳಂಬದ ಬಗ್ಗೆ ಮಾತನಾಡಿದ ಸಿಎನ್ ಅಶ್ವತ್ಥ ನಾರಾಯಣ, ಕಾಂಗ್ರೆಸ್ನವರು ಮಾತು ತಪ್ಪುತ್ತಿದ್ದಾರೆ. ಅವರು ನುಡಿದಂತೆ ಉಚಿತ ಗ್ಯಾರಂಟಿಗಳನ್ನು ಕೊಡಲಿ. ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಪ್ರತಿಯೊಬ್ಬರಿಗೂ ಕೊಡಬೇಕು. ಗ್ಯಾರಂಟಿಗಳನ್ನು ಕೊಡುವುದಕ್ಕೆ ಶುರು ಮಾಡಿ, ಬೇಕಾದವರು ಅರ್ಜಿ ಹಾಕೋತಾರೆ. ಈ ಸರ್ಕಾರಕ್ಕೆ ಗ್ಯಾರಂಟಿಗಳನ್ನು ಕೊಡೋಕ್ಕೆ ಇಷ್ಟ ಇಲ್ಲ. ಕಳ್ಳನಿಗೆ ಪಿಳ್ಳೆ ನೆವ ಎಂಬಂತೆ ಇವರ ಪರಿಸ್ಥಿತಿ ಆಗಿದೆ ಎಂದು ಕಿಡಿಕಾರಿದರು.
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ಮಾತನಾಡಿ, ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ. ಪಕ್ಷ ಯಾರನ್ನೇ ನೇಮಕ ಮಾಡಿದರೂ ನಾವು ಕೆಲಸ ಮಾಡ್ತೇವೆ. ಯಾರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೂ ನಾವು ಒಪ್ಕೋತೇವೆ. ಸಾಕು ಈ ಜಾತಿ ವಿಚಾರ, ನಾವು ಕನ್ನಡಿಗರು, ಕರ್ನಾಟಕದವರು. ಪಕ್ಷದಲ್ಲಿ ಜವಾಬ್ದಾರಿ ನೀಡಿದರೆ ನಿಭಾಯಿಸುತ್ತೇನೆ. ಹಿಂದೆ ಡಿಸಿಎಂ ಸ್ಥಾನವನ್ನು ಬಯಸಿದ್ದಿಲ್ಲ, ನೀಡಿದರು ನಿಭಾಯಿಸಿದೆ ಎಂದು ಹೇಳಿದರು.
Ashwath Narayan slams DK Shivakumar in singular, says what is your connection with Bangalore, what good have you done. There is not a paisa benefit from him he added.
20-01-26 02:15 pm
Bangalore Correspondent
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm