ಬ್ರೇಕಿಂಗ್ ನ್ಯೂಸ್
25-06-23 01:49 pm HK News Desk ಕರ್ನಾಟಕ
ಕಾರವಾರ, ಜೂನ್ 25: ಕಳ್ಳತನ ಪ್ರಕರಣದ ಆರೋಪದಡಿ ವಿಚಾರಣೆಗೆ ಕರೆ ತಂದಿದ್ದ ಕೈದಿಯೋರ್ವ ಪೊಲೀಸ್ ಠಾಣೆಯಲ್ಲಿ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಬಿಹಾರ ಮೂಲದ ದಿಲೀಪ ಮಂಡೇಲ್ ಆತ್ಮಹತ್ಯೆಗೆ ಶರಣಾದ ವಿಚಾರಣಾಧೀನ ಕೈದಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
ಹೊನ್ನಾವರ ಪಟ್ಟಣದ ಸಾಲೆಹಿತ್ತಲ್ ಮನೆಯಲ್ಲಿ ಬಂಗಾರ ಕಳ್ಳತನ ಪ್ರಕರಣ ಪತ್ತೆ ಕಾರ್ಯದಲ್ಲಿರುವಾಗ ಚಿನ್ನಕ್ಕೆ ಹೊಳಪು ನೀಡುತ್ತೇವೆ ಎಂದು ಮೃತ ವ್ಯಕ್ತಿಯು ತಂದೆಯ ಜತೆ ಪಟ್ಟಣದಲ್ಲಿ ವಂಚಿಸಲು ಯತ್ನಿಸುತ್ತಿದ್ದಾರೆ ಎಂದು ಸಾರ್ವಜನಿಕರಿಂದ ಬಂದ ದೂರನ್ನು ಆಧರಿಸಿ ವಿಚಾರಣೆಗೆ ಕರೆತರಲಾಗಿತ್ತು. ವಿಚಾರಣೆಯ ಹಂತದಲ್ಲಿರುವಾಗ ಆರೋಪಿತ ನೀರು ಕುಡಿಯುತ್ತೇನೆ ಎಂದು ಬ್ಯಾಗ್ನಲ್ಲಿ ತಂದಿದ್ದ ಸೈನೆಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಳಿಕ ಆತನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಐವರು ಪೊಲೀಸರು ಅಮಾನತು:
ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಡಿವೈಎಸ್ಪಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ ವಿಚಾರಣೆ ನಡೆಸಿದ್ದರು. ನಂತರ ಮಂಗಳೂರು ವಲಯದ ಐಜಿ ಚಂದ್ರಗುಪ್ತ ಸುದೀರ್ಘ ಎರಡು ಗಂಟೆಯ ವಿಚಾರಣೆಯ ಬಳಿಕ ಸಿಪಿಐ ಮಂಜುನಾಥ ಇ.ಒ, ಪಿಎಸ್ಐ ಮಂಜೇಶ್ವರ ಚಂದಾವರ, ಸಿಬ್ಬಂದಿಗಳಾದ ಸಂತೋಷ, ರಮೇಶ ಲಂಬಾಣಿ ಹಾಗೂ ಮಹಾವೀರ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಮೃತದೇಹವನ್ನು ತಾಲೂಕು ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಇಂದು ಮಾಜಿಸ್ಟೇಟ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. ಈ ಪ್ರಕರಣ ಸಂಬಂಧಿಸಿದಂತೆ ಮಾನವ ಹಕ್ಕು ಆಯೋಗ, ಸಿ.ಐ.ಡಿ ಅಧಿಕಾರಿಗಳು ಪ್ರಕರಣದ ವಿಚಾರಣೆಗೆ ಇಂದು ಆಗಮಿಸುವ ಸಾಧ್ಯತೆ ಇದೆ. ತನಿಖೆಯ ಬಳಿಕ ಪ್ರಕರಣದ ಸತ್ಯಾಸತ್ಯತೆ ಬೆಳಕಿಗೆ ಬರಲಿದೆ.
Five police personnel have been placed under suspension after a man allegedly committed suicide while in the custody of the Honnavar police. He committed suicide by consuming poison in the police station.
07-03-26 12:01 pm
HK News Staffer
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm