ಬ್ರೇಕಿಂಗ್ ನ್ಯೂಸ್
25-06-23 01:49 pm HK News Desk ಕರ್ನಾಟಕ
ಕಾರವಾರ, ಜೂನ್ 25: ಕಳ್ಳತನ ಪ್ರಕರಣದ ಆರೋಪದಡಿ ವಿಚಾರಣೆಗೆ ಕರೆ ತಂದಿದ್ದ ಕೈದಿಯೋರ್ವ ಪೊಲೀಸ್ ಠಾಣೆಯಲ್ಲಿ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಬಿಹಾರ ಮೂಲದ ದಿಲೀಪ ಮಂಡೇಲ್ ಆತ್ಮಹತ್ಯೆಗೆ ಶರಣಾದ ವಿಚಾರಣಾಧೀನ ಕೈದಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
ಹೊನ್ನಾವರ ಪಟ್ಟಣದ ಸಾಲೆಹಿತ್ತಲ್ ಮನೆಯಲ್ಲಿ ಬಂಗಾರ ಕಳ್ಳತನ ಪ್ರಕರಣ ಪತ್ತೆ ಕಾರ್ಯದಲ್ಲಿರುವಾಗ ಚಿನ್ನಕ್ಕೆ ಹೊಳಪು ನೀಡುತ್ತೇವೆ ಎಂದು ಮೃತ ವ್ಯಕ್ತಿಯು ತಂದೆಯ ಜತೆ ಪಟ್ಟಣದಲ್ಲಿ ವಂಚಿಸಲು ಯತ್ನಿಸುತ್ತಿದ್ದಾರೆ ಎಂದು ಸಾರ್ವಜನಿಕರಿಂದ ಬಂದ ದೂರನ್ನು ಆಧರಿಸಿ ವಿಚಾರಣೆಗೆ ಕರೆತರಲಾಗಿತ್ತು. ವಿಚಾರಣೆಯ ಹಂತದಲ್ಲಿರುವಾಗ ಆರೋಪಿತ ನೀರು ಕುಡಿಯುತ್ತೇನೆ ಎಂದು ಬ್ಯಾಗ್ನಲ್ಲಿ ತಂದಿದ್ದ ಸೈನೆಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಳಿಕ ಆತನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಐವರು ಪೊಲೀಸರು ಅಮಾನತು:
ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಡಿವೈಎಸ್ಪಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ ವಿಚಾರಣೆ ನಡೆಸಿದ್ದರು. ನಂತರ ಮಂಗಳೂರು ವಲಯದ ಐಜಿ ಚಂದ್ರಗುಪ್ತ ಸುದೀರ್ಘ ಎರಡು ಗಂಟೆಯ ವಿಚಾರಣೆಯ ಬಳಿಕ ಸಿಪಿಐ ಮಂಜುನಾಥ ಇ.ಒ, ಪಿಎಸ್ಐ ಮಂಜೇಶ್ವರ ಚಂದಾವರ, ಸಿಬ್ಬಂದಿಗಳಾದ ಸಂತೋಷ, ರಮೇಶ ಲಂಬಾಣಿ ಹಾಗೂ ಮಹಾವೀರ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಮೃತದೇಹವನ್ನು ತಾಲೂಕು ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಇಂದು ಮಾಜಿಸ್ಟೇಟ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. ಈ ಪ್ರಕರಣ ಸಂಬಂಧಿಸಿದಂತೆ ಮಾನವ ಹಕ್ಕು ಆಯೋಗ, ಸಿ.ಐ.ಡಿ ಅಧಿಕಾರಿಗಳು ಪ್ರಕರಣದ ವಿಚಾರಣೆಗೆ ಇಂದು ಆಗಮಿಸುವ ಸಾಧ್ಯತೆ ಇದೆ. ತನಿಖೆಯ ಬಳಿಕ ಪ್ರಕರಣದ ಸತ್ಯಾಸತ್ಯತೆ ಬೆಳಕಿಗೆ ಬರಲಿದೆ.
Five police personnel have been placed under suspension after a man allegedly committed suicide while in the custody of the Honnavar police. He committed suicide by consuming poison in the police station.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm