ಬ್ರೇಕಿಂಗ್ ನ್ಯೂಸ್
28-06-23 07:36 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 28: ಕಾಂಗ್ರೆಸ್ ಸರ್ಕಾರ ಬಿಟ್ ಕಾಯಿನ್ ಹಗರಣವನ್ನು ಪುನರ್ ತನಿಖೆ ಮಾಡಲಿದೆ ಎಂಬ ವರದಿಗಳ ನಡುವೆಯೇ, ಕಾಂಗ್ರೆಸ್ ರಾಜ್ಯ ಘಟಕ ಬಿಜೆಪಿ ವಿರುದ್ಧ ಟ್ವೀಟ್ ಮಾಡಿದೆ. ಬಿಟ್ ಕಾಯಿನ್ ಹಗರಣದ ತನಿಖೆ ಮಾಡಲಾಗುತ್ತೆ ಎನ್ನುವಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬೆವರುತ್ತಿದ್ದಾರಂತೆ, ಏಕಿರಬಹುದು ಎಂದು ಕಟಕಿಯಾಡಿದೆ.
ಬಿಟ್ ಕಾಯಿನ್ ಹಗರಣ ಬಯಲಿಗೆ ಬಂದಾಗ ಅಂದಿನ ಬಿಜೆಪಿ ಸರ್ಕಾರ ಪ್ರಕರಣ ಮುಚ್ಚಿ ಹಾಕಲು ಸರ್ವ ಪ್ರಯತ್ನ ಮಾಡಿತ್ತು. ಹಗರಣ ಮುಚ್ಚಿ ಹಾಕಲು ಯಶಸ್ವಿಯೂ ಆಗಿತ್ತು. ಈಗ ನಮ್ಮ ಸರ್ಕಾರ ಬಿಟ್ ಕಾಯಿನ್ ಹಗರಣದ ಬುಡ, ಬೇರುಗಳನ್ನು ಜಾಲಾಡಲಿದೆ. ಅಂದಹಾಗೆ, ನಳಿನ್ ಕಟೀಲ್ ಅವರು ಕುಳಿತಲ್ಲಿಯೇ ಬೆವರುತ್ತಿದ್ದಾರಂತೆ, ಏಕಿರಬಹುದು ಎಂದು ಪ್ರಶ್ನೆ ಮಾಡಿದೆ.

ಹಗರಣದಲ್ಲಿ ನಳಿನ್ ಕುಮಾರ್ ಕಟೀಲ್ ಶಾಮೀಲಾತಿ ಇದೆಯೆಂದು ಈ ಹಿಂದೆ ಕಾಂಗ್ರೆಸ್ ರಾಜ್ಯ ವಕ್ತಾರ ಕೆ.ಲಕ್ಷ್ಮಣ್ ಆರೋಪ ಮಾಡಿದ್ದರು. ಎರಡು ವರ್ಷಗಳ ಹಿಂದೆ ಪ್ರಕರಣದ ತನಿಖೆ ಹಳ್ಳ ಹಿಡಿದಾಗ ಈ ಪ್ರಶ್ನೆ ಮಾಡಿದ್ದರು. ಆದರೆ ತನಿಖೆಯನ್ನು ಸಿಐಡಿ ತಂಡ ಅರ್ಧಕ್ಕೆ ಸ್ಥಗಿತಗೊಳಿಸಿತ್ತು. ಪ್ರಕರಣದ ಬಗ್ಗೆ ಚಾರ್ಜ್ ಶೀಟನ್ನೂ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರಲಿಲ್ಲ. ಆನಂತರ, ಚುನಾವಣೆ ಸಂದರ್ಭದಲ್ಲಿ ನಾವು ಅಧಿಕಾರಕ್ಕೆ ಬಂದರೆ ಬಿಟ್ ಕಾಯಿನ್ ಹಗರಣವನ್ನು ತನಿಖೆ ಮಾಡುತ್ತೇವೆ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದರು. ಇದೀಗ ಹಿಂದಿನ ಸರ್ಕಾರದ ಎಲ್ಲ ಹಗರಣಗಳನ್ನೂ ತನಿಖೆ ಮಾಡುತ್ತೇವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಮರು ತನಿಖೆಗೆ ಬೆಂಗಳೂರು ಕಮಿಷನರ್ ಡಿಜಿಪಿಗೆ ಪತ್ರ ಬರೆದಿದ್ದು ಸಿಐಡಿ ಅಥವಾ ಎಸ್ಐಟಿ ತಂಡದಿಂದ ತನಿಖೆ ನಡೆಯೋದು ಖಾತ್ರಿಯಾಗಿದೆ.
Re investigation of Bitcoin scam, Nalin Kateel is sweating, mocks Congress on Twitter. The Congress government in Karnataka on Tuesday said it will get the Bitcoin scam taken place during the previous BJP government thoroughly investigated
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am