ಬ್ರೇಕಿಂಗ್ ನ್ಯೂಸ್
30-06-23 09:45 pm HK News Desk ಕರ್ನಾಟಕ
ಬೆಳಗಾವಿ, ಜೂನ್ 30: ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಪಡಿಸುವ ಬಗ್ಗೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸ್ಪಷ್ಟವಾಗಿ ಹೇಳಿದ್ದೇವೆ. ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟು ರಾಷ್ಟ್ರೀಯ ಶಿಕ್ಷಣ ನೀತಿ ಕಿತ್ತೆಸೆದು, ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎರಡು ವರ್ಷದ ಹಿಂದೆ ನಮ್ಮ ರಾಜ್ಯದಲ್ಲಿ ಮಾತ್ರ ಹೊಸ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತರಲಾಗಿದೆ. ಅದಕ್ಕೆ ಬಹಳಷ್ಟು ಪೂರ್ವ ತಯಾರಿ ಆಗಬೇಕಿತ್ತು ಮತ್ತು ಅದರಲ್ಲಿ ಕೆಲವು ನ್ಯೂನತೆಗಳಿವೆ. ಈ ಬಗ್ಗೆ ವಿವರವಾಗಿ ಶಿಕ್ಷಣ ತಜ್ಞರ ಜೊತೆಗೆ ಚರ್ಚಿಸುತ್ತಿದ್ದೇವೆ. ಯಾವುದೇ ರೀತಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಆಗದಂತೆ, ಯಾವ ರೀತಿಯಲ್ಲಿ ಬದಲಾವಣೆ ತರಬೇಕೆಂದು ಬಹಳಷ್ಟು ಗಮನಹರಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಒಂದು ಸ್ಪಷ್ಟವಾದ ರೂಪವನ್ನು ಕೊಟ್ಟು ಬದಲಾವಣೆ ಪ್ರಕ್ರಿಯೆ ಪ್ರಾರಂಭಿಸುತ್ತೇವೆ ಎಂದರು.
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ನ್ಯೂನತೆಗಳು ಏನೇನಿವೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಶಿಕ್ಷಣ ನೀತಿಯಲ್ಲಿ ಬೇರೆ ಬೇರೆ ಆವಿಷ್ಕಾರಗಳಿವೆ. ಎರಡು ಮುಖ್ಯ ವಿಷಯಗಳನ್ನು ತೆಗೆದುಕೊಳ್ಳುವುದು, ಮತ್ತೊಂದು ಎಲೆಕ್ಟಿವ್ ವಿಷಯ ತೆಗೆದುಕೊಳ್ಳುವುದು. ಥಿರಿಯಾಟಿಕಲ್ಗಿಂತ ಪ್ರಾಕ್ಟಿಕಲ್ ಜ್ಞಾನ ಕೌಶಲ್ಯಭಿವೃದ್ಧಿ ವಿಚಾರ ಸೇರಿ ಬಹಳಷ್ಟು ವಿಚಾರಗಳು ಒಳಗೊಂಡಿವೆ. ಯಾವುದೇ ನೀತಿ ಜಾರಿಗೆ ತರಬೇಕಾದರೆ ಮೂಲಭೂತ ಸೌಲಭ್ಯಗಳು ಇರಬೇಕು. ಅದಕ್ಕೆ ಬೇಕಾದ ಬೋಧಕ, ಬೋಧಕೇತರ ಸಿಬ್ಬಂದಿಗಳ ವ್ಯವಸ್ಥೆ ಮಾಡಬೇಕಾಗುತ್ತದೆ. ಅದಕ್ಕೆ ಅನುದಾನ ಒದಗಿಸುವ ಬಗ್ಗೆ ತಯಾರಿ ಮಾಡಬೇಕಾಗುತ್ತದೆ. ಇವೆಲ್ಲ ಖಾಸಗಿ ಸಂಸ್ಥೆಗಳಲ್ಲಿ ಒಂದು ರೀತಿ ಆದರೆ ಸರ್ಕಾರಿ ಸಂಸ್ಥೆಗಳಲ್ಲಿ ಮತ್ತೊಂದು ರೀತಿ ಆಗುತ್ತದೆ. ಈ ಎಲ್ಲಾ ವಿಚಾರಗಳ ಬಗ್ಗೆ ಹೆಚ್ಚಿನ ಅಧ್ಯಯನ ಮಾಡುತ್ತೇವೆ ಎಂದು ಹೇಳಿದರು.
ಹಂತ ಹಂತವಾಗಿ ನೀತಿಯಲ್ಲಿ ಬದಲಾವಣೆ ತರಬೇಕಾಗುತ್ತದೆ. ಆದರೆ ಏಕಾಏಕಿ 2021ರಲ್ಲಿ ಅನುಷ್ಠಾನಕ್ಕೆ ತರುವ ಕೆಲಸ ಆಗಿದೆ. ಎಲ್ಲರ ಜೊತೆಗೂ ಚರ್ಚಿಸಿ ಮಾಹಿತಿ ಸಂಗ್ರಹಿಸುವ ಕೆಲಸ ಮಾಡುತ್ತಿದ್ದೇವೆ. ಸಮಗ್ರವಾಗಿ ಎಲ್ಲ ಜಾತಿ, ವರ್ಗಗಳ ಹಿತ ಮತ್ತು ಉದ್ಯೋಗ ಸೃಷ್ಟಿಯನ್ನು ಒಳಗೊಂಡ ರಾಜ್ಯ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತರುತ್ತೇವೆ ಎಂದು ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು.
Reiterating his government’s decision not to implement the National Education Policy 2020 (NEP 2020), Higher Education Minster M.C. Sudhakar has said that the State will implement its own education policy.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm