ಬ್ರೇಕಿಂಗ್ ನ್ಯೂಸ್
30-06-23 09:45 pm HK News Desk ಕರ್ನಾಟಕ
ಬೆಳಗಾವಿ, ಜೂನ್ 30: ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಪಡಿಸುವ ಬಗ್ಗೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸ್ಪಷ್ಟವಾಗಿ ಹೇಳಿದ್ದೇವೆ. ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟು ರಾಷ್ಟ್ರೀಯ ಶಿಕ್ಷಣ ನೀತಿ ಕಿತ್ತೆಸೆದು, ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎರಡು ವರ್ಷದ ಹಿಂದೆ ನಮ್ಮ ರಾಜ್ಯದಲ್ಲಿ ಮಾತ್ರ ಹೊಸ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತರಲಾಗಿದೆ. ಅದಕ್ಕೆ ಬಹಳಷ್ಟು ಪೂರ್ವ ತಯಾರಿ ಆಗಬೇಕಿತ್ತು ಮತ್ತು ಅದರಲ್ಲಿ ಕೆಲವು ನ್ಯೂನತೆಗಳಿವೆ. ಈ ಬಗ್ಗೆ ವಿವರವಾಗಿ ಶಿಕ್ಷಣ ತಜ್ಞರ ಜೊತೆಗೆ ಚರ್ಚಿಸುತ್ತಿದ್ದೇವೆ. ಯಾವುದೇ ರೀತಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಆಗದಂತೆ, ಯಾವ ರೀತಿಯಲ್ಲಿ ಬದಲಾವಣೆ ತರಬೇಕೆಂದು ಬಹಳಷ್ಟು ಗಮನಹರಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಒಂದು ಸ್ಪಷ್ಟವಾದ ರೂಪವನ್ನು ಕೊಟ್ಟು ಬದಲಾವಣೆ ಪ್ರಕ್ರಿಯೆ ಪ್ರಾರಂಭಿಸುತ್ತೇವೆ ಎಂದರು.
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ನ್ಯೂನತೆಗಳು ಏನೇನಿವೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಶಿಕ್ಷಣ ನೀತಿಯಲ್ಲಿ ಬೇರೆ ಬೇರೆ ಆವಿಷ್ಕಾರಗಳಿವೆ. ಎರಡು ಮುಖ್ಯ ವಿಷಯಗಳನ್ನು ತೆಗೆದುಕೊಳ್ಳುವುದು, ಮತ್ತೊಂದು ಎಲೆಕ್ಟಿವ್ ವಿಷಯ ತೆಗೆದುಕೊಳ್ಳುವುದು. ಥಿರಿಯಾಟಿಕಲ್ಗಿಂತ ಪ್ರಾಕ್ಟಿಕಲ್ ಜ್ಞಾನ ಕೌಶಲ್ಯಭಿವೃದ್ಧಿ ವಿಚಾರ ಸೇರಿ ಬಹಳಷ್ಟು ವಿಚಾರಗಳು ಒಳಗೊಂಡಿವೆ. ಯಾವುದೇ ನೀತಿ ಜಾರಿಗೆ ತರಬೇಕಾದರೆ ಮೂಲಭೂತ ಸೌಲಭ್ಯಗಳು ಇರಬೇಕು. ಅದಕ್ಕೆ ಬೇಕಾದ ಬೋಧಕ, ಬೋಧಕೇತರ ಸಿಬ್ಬಂದಿಗಳ ವ್ಯವಸ್ಥೆ ಮಾಡಬೇಕಾಗುತ್ತದೆ. ಅದಕ್ಕೆ ಅನುದಾನ ಒದಗಿಸುವ ಬಗ್ಗೆ ತಯಾರಿ ಮಾಡಬೇಕಾಗುತ್ತದೆ. ಇವೆಲ್ಲ ಖಾಸಗಿ ಸಂಸ್ಥೆಗಳಲ್ಲಿ ಒಂದು ರೀತಿ ಆದರೆ ಸರ್ಕಾರಿ ಸಂಸ್ಥೆಗಳಲ್ಲಿ ಮತ್ತೊಂದು ರೀತಿ ಆಗುತ್ತದೆ. ಈ ಎಲ್ಲಾ ವಿಚಾರಗಳ ಬಗ್ಗೆ ಹೆಚ್ಚಿನ ಅಧ್ಯಯನ ಮಾಡುತ್ತೇವೆ ಎಂದು ಹೇಳಿದರು.
ಹಂತ ಹಂತವಾಗಿ ನೀತಿಯಲ್ಲಿ ಬದಲಾವಣೆ ತರಬೇಕಾಗುತ್ತದೆ. ಆದರೆ ಏಕಾಏಕಿ 2021ರಲ್ಲಿ ಅನುಷ್ಠಾನಕ್ಕೆ ತರುವ ಕೆಲಸ ಆಗಿದೆ. ಎಲ್ಲರ ಜೊತೆಗೂ ಚರ್ಚಿಸಿ ಮಾಹಿತಿ ಸಂಗ್ರಹಿಸುವ ಕೆಲಸ ಮಾಡುತ್ತಿದ್ದೇವೆ. ಸಮಗ್ರವಾಗಿ ಎಲ್ಲ ಜಾತಿ, ವರ್ಗಗಳ ಹಿತ ಮತ್ತು ಉದ್ಯೋಗ ಸೃಷ್ಟಿಯನ್ನು ಒಳಗೊಂಡ ರಾಜ್ಯ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತರುತ್ತೇವೆ ಎಂದು ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು.
Reiterating his government’s decision not to implement the National Education Policy 2020 (NEP 2020), Higher Education Minster M.C. Sudhakar has said that the State will implement its own education policy.
20-01-26 12:20 pm
Bangalore Correspondent
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm