ಬ್ರೇಕಿಂಗ್ ನ್ಯೂಸ್
04-07-23 02:58 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 4: ಪತಿ ಹಾಗೂ ಆತನ ಗರ್ಲ್ ಫ್ರೆಂಡ್ ವಿರುದ್ದ ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆಬಂದಿದೆ. ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹೆಗ್ಗನಹಳ್ಳಿ ನಿವಾಸಿ ಪವಿತ್ರಾ ಮೃತ ಮಹಿಳೆ.
ಡೆತ್ ನೋಟ್ ಬರೆದಿಟ್ಟು ವಾಟ್ಸಾಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾಳೆ. ಮೃತ ಪವಿತ್ರಾ ಮೊದಲ ಪತಿಗೆ ವಿಚ್ಚೇದನ ನೀಡಿ, ಚೇತನ್ ಗೌಡ ಎಂಬಾತನನ್ನು ಎರಡನೇ ಮದುವೆಯಾಗಿದ್ದಳು. ಪವಿತ್ರಾಳ ಎರಡನೇ ಪತಿ ಚೇತನ್ ಗೌಡ ಉದ್ಯಮಿಯಾಗಿದ್ದು, ಪವಿತ್ರ ಚೇತನ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಳು. ಇತ್ತೀಚೆಗೆ ಮತ್ತೊರ್ವ ಯುವತಿಯ ವಿಚಾರವಾಗಿ ಪತಿ ಪತ್ನಿ ಮಧ್ಯೆ ಜಗಳವಾಗ್ತಿತ್ತು. ಈ ಬಗ್ಗೆ ಪವಿತ್ರ ತನ್ನ ತಾಯಿ ಪದ್ಮಮ್ಮ ಬಳಿ ತಿಳಿಸಿದ್ದಳು. ಕಡೆಗೆ ಮನನೊಂದು ಡೆತ್ ನೋಟ್ ವಾಟ್ಸಪ್ಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾಳೆ.

ನನ್ನ ಸಾವಿಗೆ ಗಂಡನಾದ ಚೇತನ್ ಗೌಡ ಹಾಗೂ ಪೂಜಾ ಗೌಡ ಕಾರಣರಾಗಿರುತ್ತಾರೆ. 2019ರ ಮೇ 26ರಲ್ಲಿ ಚೇತನ್ ಗೌಡ ಜೊತೆ ಮದುವೆ ಆಗಿದ್ದೇನೆ. ಬಳಿಕ ಚೇತನ್ ಗೌಡ, ಪೂಜಾ ಗೌಡ ಎಂಬ ಯುವತಿಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿರುತ್ತಾನೆ. ಅಕ್ರಮ ಸಂಬಂಧ ಇಟ್ಟುಕೊಂಡ ಬಳಿಕ ನನಗೆ ಸಾಕಷ್ಟು ಕಿರುಳುಕುಳ ಕೊಟ್ಟಿದ್ದು ಸಾಕಷ್ಟು ಕಷ್ಟ ಅನುಭವಿಸಿದ್ದೇನೆ.
ನನ್ನ ಸಾವಿಗೆ ಕಾರಣರಾದವರಿಗೆ ಶಿಕ್ಷೆ ಆಗಬೇಕು. ನನಗೆ ನ್ಯಾಯ ಸಿಗಬೇಕು. ಚೇತನ್ ಗೌಡನಿಗಾಗಿ ನನ್ನ ಅರ್ಧ ಜೀವನ ಮುಡುಪಾಗಿಟ್ಟಿದ್ದೆ. ಆದರೆ ಪೂಜಾ ಗೌಡ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ನನಗೆ ಚಿತ್ರಹಿಂಸೆ ಕೊಟ್ಟು ನನ್ನ ಸಾವಿಗೆ ಕಾರಣರಾಗಿದ್ದಾರೆ. ಹೀಗಾಗಿ ಪೂಜಾ ಗೌಡ ಹಾಗೂ ಚೇತನ್ ಗೆ ಶಿಕ್ಷೆಯಾಗಲೇ ಬೇಕು ಎಂದು ಪವಿತ್ರಾ ಡೆತ್ನೋಟ್ನಲ್ಲಿ ಒತ್ತಾಯಿಸಿದ್ದಾರೆ.
ಮಗಳ ವಾಟ್ಸಾಪ್ ಸ್ಟೇಟಸ್ ನಲ್ಲಿ ಡೆತ್ ನೋಟ್ ನೋಡಿ ತಾಯಿ, ಮಗಳ ಮನೆ ಬಳಿ ಬಂದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಸದ್ಯ ಕೆಂಗೇರಿ ಠಾಣೆಯಲ್ಲಿ ಚೇತನ್ ಗೌಡ ಹಾಗೂ ಗರ್ಲ್ ಫ್ರೆಂಡ್ ವಿರುದ್ದ ಎಫ್.ಐ.ಆರ್ ದಾಖಲಾಗಿದೆ.
Wife Pavirta Commits suicide over husband Chethan Gowda affair with company employee in Bangalore. Woman commits suicide after knowing her husband's illicit affair. Posts death note on whatsapp status and commits suicide.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am