ಬ್ರೇಕಿಂಗ್ ನ್ಯೂಸ್
08-07-23 12:51 pm Bangalore Correspondent ಕರ್ನಾಟಕ
ಬೆಂಗಳೂರು, ಜು.7: ರಾಜ್ಯ ವಿಧಾನಸಭಾ ಬಜೆಟ್ ಅಧಿವೇಶನದ ವೇಳೆ ಸದನದೊಳಗೆ ನುಗ್ಗಿದ ಅಪರಿಚಿತ ವ್ಯಕ್ತಿಯೊಬ್ಬ 15 ನಿಮಿಷಗಳ ಕಾಲ ಶಾಸಕರ ಆಸನದಲ್ಲಿ ಕುಳಿತು ಸದನದ ಕಲಾಪವನ್ನು ವೀಕ್ಷಣೆ ಮಾಡಿದ ಪ್ರಸಂಗ ನಡೆದಿದೆ. ಬಿಗಿ ಭದ್ರತೆಯುಳ್ಳ ವಿಧಾನಸಭೆ ಅಧಿವೇಶನಕ್ಕೆ ಅಪರಿಚಿತ ವ್ಯಕ್ತಿ ನುಗ್ಗಿದ ವಿಚಾರದ ಬಗ್ಗೆ ಗೃಹ ಸಚಿವ ಪರಮೇಶ್ವರ್ ತನಿಖೆಗೆ ಆದೇಶ ಮಾಡಿದ್ದಾರೆ.
ವಿಧಾನಸೌಧದಲ್ಲಿ ಬಿಗಿ ಭದ್ರತೆ ಇದ್ದರೂ ತಾನು ಮೊಳಕಾಲ್ಮೂರು ಶಾಸಕ ಎಂದು ಹೇಳಿಕೊಂಡು ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ಶಾಸಕರ ಸೋಗಿನಲ್ಲಿ ಕುಳಿತುಕೊಂಡಿದ್ದಾನೆ. ದೇವದುರ್ಗ ಶಾಸಕಿ ಕರೆಮ್ಮ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ಕುಳಿತು ಕಲಾಪ ವೀಕ್ಷಣೆ ಮಾಡಿದ್ದಾನೆ.


ಅಪರಿಚಿತ ವ್ಯಕ್ತಿ ಎಂಬುದನ್ನು ತಿಳಿದ ಶಾಸಕ ಶರಣಗೌಡ ಕಂದಕೂರು ಅವರು ವಿಧಾನಸಭೆ ಕಾರ್ಯದರ್ಶಿ ಮತ್ತು ಮಾರ್ಷಲ್ ಗಳ ಗಮನಕ್ಕೆ ತಂದಿದ್ದಾರೆ. ಕೂಡಲೇ ಮಾರ್ಷಲ್ ಗಳು ಆ ವ್ಯಕ್ತಿಯನ್ನು ಹೊರಗೆ ಕರೆದು ವಿಚಾರಿಸಿದ್ದು, ಶಾಸಕ ಅಲ್ಲ ಎಂಬುದು ತಿಳಿಯುತ್ತಲೇ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಬಜೆಟ್ ಮಂಡನೆಯ ಆರಂಭದಲ್ಲಿಯೇ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯನ್ನು ಮೊಳಕಾಲ್ಮೂರು ನಿವಾಸಿ ತಿಪ್ಪೇರುದ್ರ ಎಂದು ಗುರುತಿಸಲಾಗಿದೆ. ವಿಧಾನಸೌಧ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಾಲ್ಕು ದಿನಗಳ ಮೊದಲೇ ವಿಧಾನಸಭೆ ಪ್ರವೇಶಕ್ಕೆ ಪಾಸ್ ಪಡೆದಿದ್ದ ವ್ಯಕ್ತಿ, ಶಾಸಕರೊಬ್ಬರ ಸ್ಥಾನ ಖಾಲಿಯಿದೆಯೆಂದು ಕುಳಿತಿದ್ದಾಗಿ ಹೇಳಿದ್ದಾನೆ. ಭದ್ರತಾ ಲೋಪದಿಂದ ಈ ರೀತಿ ಆಗಿದೆಯೆಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಯಾರೋ ಹೊಸ ಶಾಸಕ ಆಗಿರಬೇಕೆಂದು ಒಳಗೆ ಬಿಟ್ಟಿದ್ದರು. ಪೊಲೀಸರ ಲೋಪದ ಬಗ್ಗೆ ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ಅವರು ವಿಚಾರಣೆ ಆರಂಭಿಸಿದ್ದಾರೆ.
The newly elected government in the Karnataka Assembly was presenting its budget on Friday, during which an incident raised questions on the security arrangements of the Assembly. Chief Minister Siddaramaiah was presenting the budget in the assembly on Friday, during which an unknown and unauthorized person was seen sitting on the seat of an MLA. He sat on the chair for 15 minutes. However, he was later arrested. An unknown person entered the House and sat on the chair of Devdurg MLA Kariyamma.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm