ಬ್ರೇಕಿಂಗ್ ನ್ಯೂಸ್
08-07-23 12:51 pm Bangalore Correspondent ಕರ್ನಾಟಕ
ಬೆಂಗಳೂರು, ಜು.7: ರಾಜ್ಯ ವಿಧಾನಸಭಾ ಬಜೆಟ್ ಅಧಿವೇಶನದ ವೇಳೆ ಸದನದೊಳಗೆ ನುಗ್ಗಿದ ಅಪರಿಚಿತ ವ್ಯಕ್ತಿಯೊಬ್ಬ 15 ನಿಮಿಷಗಳ ಕಾಲ ಶಾಸಕರ ಆಸನದಲ್ಲಿ ಕುಳಿತು ಸದನದ ಕಲಾಪವನ್ನು ವೀಕ್ಷಣೆ ಮಾಡಿದ ಪ್ರಸಂಗ ನಡೆದಿದೆ. ಬಿಗಿ ಭದ್ರತೆಯುಳ್ಳ ವಿಧಾನಸಭೆ ಅಧಿವೇಶನಕ್ಕೆ ಅಪರಿಚಿತ ವ್ಯಕ್ತಿ ನುಗ್ಗಿದ ವಿಚಾರದ ಬಗ್ಗೆ ಗೃಹ ಸಚಿವ ಪರಮೇಶ್ವರ್ ತನಿಖೆಗೆ ಆದೇಶ ಮಾಡಿದ್ದಾರೆ.
ವಿಧಾನಸೌಧದಲ್ಲಿ ಬಿಗಿ ಭದ್ರತೆ ಇದ್ದರೂ ತಾನು ಮೊಳಕಾಲ್ಮೂರು ಶಾಸಕ ಎಂದು ಹೇಳಿಕೊಂಡು ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ಶಾಸಕರ ಸೋಗಿನಲ್ಲಿ ಕುಳಿತುಕೊಂಡಿದ್ದಾನೆ. ದೇವದುರ್ಗ ಶಾಸಕಿ ಕರೆಮ್ಮ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ಕುಳಿತು ಕಲಾಪ ವೀಕ್ಷಣೆ ಮಾಡಿದ್ದಾನೆ.
ಅಪರಿಚಿತ ವ್ಯಕ್ತಿ ಎಂಬುದನ್ನು ತಿಳಿದ ಶಾಸಕ ಶರಣಗೌಡ ಕಂದಕೂರು ಅವರು ವಿಧಾನಸಭೆ ಕಾರ್ಯದರ್ಶಿ ಮತ್ತು ಮಾರ್ಷಲ್ ಗಳ ಗಮನಕ್ಕೆ ತಂದಿದ್ದಾರೆ. ಕೂಡಲೇ ಮಾರ್ಷಲ್ ಗಳು ಆ ವ್ಯಕ್ತಿಯನ್ನು ಹೊರಗೆ ಕರೆದು ವಿಚಾರಿಸಿದ್ದು, ಶಾಸಕ ಅಲ್ಲ ಎಂಬುದು ತಿಳಿಯುತ್ತಲೇ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಬಜೆಟ್ ಮಂಡನೆಯ ಆರಂಭದಲ್ಲಿಯೇ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯನ್ನು ಮೊಳಕಾಲ್ಮೂರು ನಿವಾಸಿ ತಿಪ್ಪೇರುದ್ರ ಎಂದು ಗುರುತಿಸಲಾಗಿದೆ. ವಿಧಾನಸೌಧ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಾಲ್ಕು ದಿನಗಳ ಮೊದಲೇ ವಿಧಾನಸಭೆ ಪ್ರವೇಶಕ್ಕೆ ಪಾಸ್ ಪಡೆದಿದ್ದ ವ್ಯಕ್ತಿ, ಶಾಸಕರೊಬ್ಬರ ಸ್ಥಾನ ಖಾಲಿಯಿದೆಯೆಂದು ಕುಳಿತಿದ್ದಾಗಿ ಹೇಳಿದ್ದಾನೆ. ಭದ್ರತಾ ಲೋಪದಿಂದ ಈ ರೀತಿ ಆಗಿದೆಯೆಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಯಾರೋ ಹೊಸ ಶಾಸಕ ಆಗಿರಬೇಕೆಂದು ಒಳಗೆ ಬಿಟ್ಟಿದ್ದರು. ಪೊಲೀಸರ ಲೋಪದ ಬಗ್ಗೆ ಸಿಸಿಬಿ ಜಂಟಿ ಆಯುಕ್ತ ಶರಣಪ್ಪ ಅವರು ವಿಚಾರಣೆ ಆರಂಭಿಸಿದ್ದಾರೆ.
The newly elected government in the Karnataka Assembly was presenting its budget on Friday, during which an incident raised questions on the security arrangements of the Assembly. Chief Minister Siddaramaiah was presenting the budget in the assembly on Friday, during which an unknown and unauthorized person was seen sitting on the seat of an MLA. He sat on the chair for 15 minutes. However, he was later arrested. An unknown person entered the House and sat on the chair of Devdurg MLA Kariyamma.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
07-07-25 08:45 pm
HK News Desk
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
07-07-25 05:02 pm
Mangalore Correspondent
Mangalore Car Accident, Thumbe: ಹಳೆ ಸ್ವಿಫ್ಟ್...
05-07-25 05:16 pm
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
07-07-25 10:31 pm
Mangalore Correspondent
Job Fraud, Mangalore, Doctor: ದುಬೈನ ಎನ್ಎಂಸಿ ಹ...
07-07-25 10:18 pm
ಹದಿನಾರರ ವಯಸ್ಸು ಹುಚ್ಚುಕೋಡಿ ಮನಸ್ಸು ; 16ರ ಹುಡುಗಿ...
07-07-25 07:13 pm
Digital Arrest, Cyber Fraud, Mangalore: ಡಿಜಿಟ...
07-07-25 03:30 pm
Moral policing, Puttur, Mangalore Crime: ನೀನು...
07-07-25 12:20 pm