ಬ್ರೇಕಿಂಗ್ ನ್ಯೂಸ್
08-07-23 06:07 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ 7: ದೇಶಾದ್ಯಂತ ಮಾನ್ಸೂನ್ ಚುರುಕಾಗಿದೆ. ರಾಜ್ಯದಲ್ಲಿ ಕೊಂಚ ತಡವಾದರೂ ಸದ್ಯ ಹಲವೆಡೆ ವರುಣ ಆರ್ಭಟಿಸುತ್ತಿದ್ದಾನೆ. ಮಲೆನಾಡಿನಲ್ಲೂ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಶಾಲೆಯಲ್ಲಿ ವಿದ್ಯಾರ್ಥಿಗಳು ಛತ್ರಿ ಹಿಡಿದು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಶಾಲೆಯ ಮೇಲ್ಛಾವಣಿ ಸೋರುತ್ತಿದ್ದು, ಮಕ್ಕಳು ತೊಂದರೆ ಅನುಭವಿಸುವಂತಾಗಿದೆ.
ಹೌದು, ಇದು ಶಿಕ್ಷಣ ಸಚಿವರ ತವರು ಜಿಲ್ಲೆಯ ಪರಿಸ್ಥಿತಿ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೋಡೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯು ಸಂಪೂರ್ಣ ಸೋರುತ್ತಿದೆ. ಈ ಶಾಲೆಯ 9ನೇ ತರಗತಿಯ ಒಳಗೆ ನೀರು ಬರುತ್ತದೆ. ಇದರಿಂದ ಪಾಠ ಕೇಳಬೇಕಾದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಛತ್ರಿ ಹಿಡಿದು ಪಾಠ ಮಾಡುವ ಸ್ಥಿತಿ ನಿರ್ಮಾಣವಾಗಿದೆ.

ಕೋಡೂರು ಗ್ರಾಮದ ಸರ್ಕಾರಿ ಶಾಲೆಯು ಸುಮಾರು 40 ವರ್ಷಗಳ ಹಳೆಯ ಕಟ್ಟಡವಾಗಿದೆ. ಇಲ್ಲಿ 8 ರಿಂದ 10ನೇ ತರಗತಿಯ ತನಕ ಒಟ್ಟು 123 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಇಷ್ಟು ಮಕ್ಕಳಿದ್ದರೂ ಶಾಲೆಯ ದುರಸ್ಥಿ ಕಾರ್ಯ ಇನ್ನೂ ಆಗಿಲ್ಲ. ಇದರಿಂದ ಶಾಲಾ ಕಟ್ಟಡದಲ್ಲಿ ಕಾರಿಡಾರ್ ಸೇರಿದಂತೆ 9ನೇ ತರಗತಿಯ ಮೇಲ್ಛಾವಣಿ ಸೂರುತ್ತಿದೆ.

ಉಳಿದ ಎರಡು ತರಗತಿಯಲ್ಲಿ ನೀರು ಗೋಡೆಗಳ ಮೇಲೆ ಇಳಿಯುತ್ತಿರುತ್ತದೆ. ಇದರಿಂದ ಇಲ್ಲಿ ಸದ್ಯ ಯಾವುದೇ ಸಮಸ್ಯೆ ಇಲ್ಲ. ಮುಖ್ಯವಾಗಿ ಶಾಲೆಯ ಕಾರಿಡಾರ್ ಹಾಗೂ 9 ನೇ ತರಗತಿ ಸೋರುತ್ತಿದೆ. ಸೋರುತ್ತಿರುವ ತರಗತಿಯಲ್ಲಿ ಒಬ್ಬರು ಛತ್ರಿ ಹಿಡಿದುಕೊಂಡರೆ, ಇನ್ನೊಬ್ಬ ವಿದ್ಯಾರ್ಥಿ ಪುಸ್ತಕದಲ್ಲಿ ಶಿಕ್ಷಕರು ಹೇಳಿದ್ದನ್ನು ನೋಟ್ ಮಾಡಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳು ಮಳೆಗಾಲ ಯಾಕಾದ್ರೂ ಬರುತ್ತೋ ಅಂತ ಗೊಣಗುವಂತಾಗಿದೆ.
Students found with umbrella as water leaks from roof due to rains at Koduru in government school at Shivamogga. Students are finding it difficult to attend schools at Educaiton Minister Madhu Bangarappa home town
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am