ಬ್ರೇಕಿಂಗ್ ನ್ಯೂಸ್
19-07-23 08:06 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19: ಬಿಜೆಪಿ ರೌಡಿತನಕ್ಕೆ ನಾವು ಹೆದರಲ್ಲ. ಅಸಭ್ಯವಾಗಿ, ಅನಾಗರಿಕವಾಗಿ ನಡೆದುಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ವಿಧಾನಸಭೆಯಲ್ಲಿ ಬಿಜೆಪಿ ಧರಣಿ ಹಾಗೂ ಸ್ಪೀಕರ್ ಪೀಠಕ್ಕೆ ಅಗೌರವ ಮಾಡಿದ ವಿಚಾರವಾಗಿ ಮಾತನಾಡಿದ ಅವರು, " ಬೇರೆ ರಾಜ್ಯದ ನಾಯಕರನ್ನು ಗೌರವಿಸೋದು ಪರಂಪರೆ ಅಲ್ವಾ? ಮೊದಲಿಂದಲೂ ನಡೆದುಕೊಂಡು ಬಂದಿರುವ ಪದ್ದತಿ ಇದು. ವಿಪಕ್ಷ ನಾಯಕರನ್ನು ಕರೆದುಕೊಂಡು ಬರೋದಕ್ಕೆ ಐಎಎಸ್ ಅಧಿಕಾರಿಗಳನ್ನು ನಿಯೋಜನೆ ಮಾಡಿದ್ದು ಅಷ್ಟೇ.

ಇದಕ್ಕೆ ಇಡೀ ದಿನ ರಂಪ ಮಾಡಿದ್ದಾರೆ " ಎಂದರು. ಡೆಪ್ಯುಟಿ ಸ್ಪೀಕರ್ ಮುಖಕ್ಕೆ ಪೇಪರ್ ಎಸೆದಿದ್ದಾರೆ. ಬಹಳ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಅನಾಗರಿಕವಾಗಿ ನಡೆದುಕೊಂಡಿದ್ದಾರೆ. ವಿರೋಧ ಪಕ್ಷವಾಗಿರುವಾಗ ಬಹಳ ಗೌರವಯುತವಾಗಿ ನಡೆದುಕೊಳ್ಳಬೇಕು. ನಾವು ಹಿಂದೆ ವಿಪಕ್ಷದ ಸ್ಥಾನದಲ್ಲಿದ್ದಾಗ ಗೌರವಯುತವಾಗಿ ನಡೆದುಕೊಂಡಿದ್ದೇವೆ ಎಂದು ಹೇಳಿದರು.
ಅಂಬೇಡ್ಕರ್, ಬುದ್ದ, ಬಸವ ಮುಂತಾದ ಮಹನೀಯರ ಪ್ರಜಾಪ್ರಭುತ್ವವಾದಿ ಮೌಲ್ಯಗಳ ಮುಂದುವರೆದ ಪರಂಪರೆಯ ಪ್ರಾತಿನಿಧಿಕ ಸಂಸ್ಥೆಯಾಗಿದ್ದ ವಿಧಾನಸಭೆಗೆ ಅಗೌರವ ಸಲ್ಲಿಸಿದ್ದಾರೆ. ಪ್ರಜಾಪ್ರಭುತ್ವ ಮಾದರಿಯಲ್ಲಿ ಮತ್ತು ಸದನದ ನಿಯಮಾವಳಿಗಳ ಆಧಾರದಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿಯವರಿಗೆ ಅವಕಾಶ ಇತ್ತು. ಆದರೆ ಸ್ಪೀಕರ್ ಮುಖಕ್ಕೆ ಪತ್ರ ಎಸೆಯುವುದು, ಸ್ಪೀಕರ್ ಪೀಠಕ್ಕೆ ಎಸೆಯುವುದು, ಅವಮಾನ ಮಾಡುವುದು ನಿಯಮ ಬಾಹಿರ. ಇದು ಅನಾಗರೀಕ ನಡವಳಿಕೆಯಲ್ಲವೇ ಎಂದು ಪ್ರಶ್ನಿಸಿದರು.
ಬಿಜೆಪಿಯವರಿಗೆ ಗ್ಯಾರಂಟಿಗಳನ್ನು ತಡೆದುಕೊಳ್ಳಕೆ ಆಗ್ತಿಲ್ಲ ನಾವು ಐದು ಗ್ಯಾರಂಟಿಗಳನ್ನು ಕೊಟ್ಟಿರೋದೇ ಅವರಿಗೆ ತಡೆದುಕೊಳ್ಳೋಕೆ ಆಗ್ತಿಲ್ಲ. ಬಿಜೆಪಿಯವರು ಬಹಳ ಹತಾಶರಾಗಿದ್ದಾರೆ. ಕೊಟ್ಟ ಮಾತಿನ ವೇಳೆ ಅವರು ನಡೆದುಕೊಳ್ಳೋರು ಅಲ್ಲ. ಆದರೆ ನಾವು ಕಾಯಕವೇ ಕೈಲಾಸದಂತೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಜನರು ಖುಷಿಯಾಗಿದ್ದಾರೆ, ಇವರಿಗೆ ತಡೆದುಕೊಳ್ಳೋಕೆ ಆಗ್ತಿಲ್ಲ ಎಂದು ಕಿಡಿಕಾರಿದರು.
ಇವರ ಯೋಗ್ಯತೆಗೆ ವಿರೋಧ ಪಕ್ಷದ ನಾಯಕ ಆಯ್ಕೆ ಮಾಡಕ್ಕಾಗಿಲ್ಲ ;
ಇವರ ಯೋಗ್ಯತೆ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳೋಕೆ ಆಗಿಲ್ಲ. ಬಜೆಟ್ ಮೇಲೆ ಚರ್ಚೆ ನಡೀತ್ತಿದೆ, ವಿಪಕ್ಷ ನಾಯಕ ಇಲ್ಲ ಅಂದರೆ ಇದು ಪ್ರಜಾಪ್ರಭುತ್ವ , ಸಂವಿಧಾನ ವಿರೋಧಿ ಅಲ್ವಾ? ಬಿಜೆಪಿಯವರಿಗೆ ಯೋಗ್ಯತೆ ಇಲ್ಲ. ಯೋಗ್ಯತೆ ಇಲ್ಲದೇ ಇರೋದು ಪಾಠ ಹೇಳಿಕೊಡೋಕೆ ಬರುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.
Siddaramaiah CM Angry over BJP rowdyism inside assembly. They are not even cable of even selecting opposition leader so far he added.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm