ಬ್ರೇಕಿಂಗ್ ನ್ಯೂಸ್
19-07-23 08:06 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19: ಬಿಜೆಪಿ ರೌಡಿತನಕ್ಕೆ ನಾವು ಹೆದರಲ್ಲ. ಅಸಭ್ಯವಾಗಿ, ಅನಾಗರಿಕವಾಗಿ ನಡೆದುಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ವಿಧಾನಸಭೆಯಲ್ಲಿ ಬಿಜೆಪಿ ಧರಣಿ ಹಾಗೂ ಸ್ಪೀಕರ್ ಪೀಠಕ್ಕೆ ಅಗೌರವ ಮಾಡಿದ ವಿಚಾರವಾಗಿ ಮಾತನಾಡಿದ ಅವರು, " ಬೇರೆ ರಾಜ್ಯದ ನಾಯಕರನ್ನು ಗೌರವಿಸೋದು ಪರಂಪರೆ ಅಲ್ವಾ? ಮೊದಲಿಂದಲೂ ನಡೆದುಕೊಂಡು ಬಂದಿರುವ ಪದ್ದತಿ ಇದು. ವಿಪಕ್ಷ ನಾಯಕರನ್ನು ಕರೆದುಕೊಂಡು ಬರೋದಕ್ಕೆ ಐಎಎಸ್ ಅಧಿಕಾರಿಗಳನ್ನು ನಿಯೋಜನೆ ಮಾಡಿದ್ದು ಅಷ್ಟೇ.

ಇದಕ್ಕೆ ಇಡೀ ದಿನ ರಂಪ ಮಾಡಿದ್ದಾರೆ " ಎಂದರು. ಡೆಪ್ಯುಟಿ ಸ್ಪೀಕರ್ ಮುಖಕ್ಕೆ ಪೇಪರ್ ಎಸೆದಿದ್ದಾರೆ. ಬಹಳ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಅನಾಗರಿಕವಾಗಿ ನಡೆದುಕೊಂಡಿದ್ದಾರೆ. ವಿರೋಧ ಪಕ್ಷವಾಗಿರುವಾಗ ಬಹಳ ಗೌರವಯುತವಾಗಿ ನಡೆದುಕೊಳ್ಳಬೇಕು. ನಾವು ಹಿಂದೆ ವಿಪಕ್ಷದ ಸ್ಥಾನದಲ್ಲಿದ್ದಾಗ ಗೌರವಯುತವಾಗಿ ನಡೆದುಕೊಂಡಿದ್ದೇವೆ ಎಂದು ಹೇಳಿದರು.
ಅಂಬೇಡ್ಕರ್, ಬುದ್ದ, ಬಸವ ಮುಂತಾದ ಮಹನೀಯರ ಪ್ರಜಾಪ್ರಭುತ್ವವಾದಿ ಮೌಲ್ಯಗಳ ಮುಂದುವರೆದ ಪರಂಪರೆಯ ಪ್ರಾತಿನಿಧಿಕ ಸಂಸ್ಥೆಯಾಗಿದ್ದ ವಿಧಾನಸಭೆಗೆ ಅಗೌರವ ಸಲ್ಲಿಸಿದ್ದಾರೆ. ಪ್ರಜಾಪ್ರಭುತ್ವ ಮಾದರಿಯಲ್ಲಿ ಮತ್ತು ಸದನದ ನಿಯಮಾವಳಿಗಳ ಆಧಾರದಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿಯವರಿಗೆ ಅವಕಾಶ ಇತ್ತು. ಆದರೆ ಸ್ಪೀಕರ್ ಮುಖಕ್ಕೆ ಪತ್ರ ಎಸೆಯುವುದು, ಸ್ಪೀಕರ್ ಪೀಠಕ್ಕೆ ಎಸೆಯುವುದು, ಅವಮಾನ ಮಾಡುವುದು ನಿಯಮ ಬಾಹಿರ. ಇದು ಅನಾಗರೀಕ ನಡವಳಿಕೆಯಲ್ಲವೇ ಎಂದು ಪ್ರಶ್ನಿಸಿದರು.
ಬಿಜೆಪಿಯವರಿಗೆ ಗ್ಯಾರಂಟಿಗಳನ್ನು ತಡೆದುಕೊಳ್ಳಕೆ ಆಗ್ತಿಲ್ಲ ನಾವು ಐದು ಗ್ಯಾರಂಟಿಗಳನ್ನು ಕೊಟ್ಟಿರೋದೇ ಅವರಿಗೆ ತಡೆದುಕೊಳ್ಳೋಕೆ ಆಗ್ತಿಲ್ಲ. ಬಿಜೆಪಿಯವರು ಬಹಳ ಹತಾಶರಾಗಿದ್ದಾರೆ. ಕೊಟ್ಟ ಮಾತಿನ ವೇಳೆ ಅವರು ನಡೆದುಕೊಳ್ಳೋರು ಅಲ್ಲ. ಆದರೆ ನಾವು ಕಾಯಕವೇ ಕೈಲಾಸದಂತೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಜನರು ಖುಷಿಯಾಗಿದ್ದಾರೆ, ಇವರಿಗೆ ತಡೆದುಕೊಳ್ಳೋಕೆ ಆಗ್ತಿಲ್ಲ ಎಂದು ಕಿಡಿಕಾರಿದರು.
ಇವರ ಯೋಗ್ಯತೆಗೆ ವಿರೋಧ ಪಕ್ಷದ ನಾಯಕ ಆಯ್ಕೆ ಮಾಡಕ್ಕಾಗಿಲ್ಲ ;
ಇವರ ಯೋಗ್ಯತೆ ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳೋಕೆ ಆಗಿಲ್ಲ. ಬಜೆಟ್ ಮೇಲೆ ಚರ್ಚೆ ನಡೀತ್ತಿದೆ, ವಿಪಕ್ಷ ನಾಯಕ ಇಲ್ಲ ಅಂದರೆ ಇದು ಪ್ರಜಾಪ್ರಭುತ್ವ , ಸಂವಿಧಾನ ವಿರೋಧಿ ಅಲ್ವಾ? ಬಿಜೆಪಿಯವರಿಗೆ ಯೋಗ್ಯತೆ ಇಲ್ಲ. ಯೋಗ್ಯತೆ ಇಲ್ಲದೇ ಇರೋದು ಪಾಠ ಹೇಳಿಕೊಡೋಕೆ ಬರುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.
Siddaramaiah CM Angry over BJP rowdyism inside assembly. They are not even cable of even selecting opposition leader so far he added.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am