ಬ್ರೇಕಿಂಗ್ ನ್ಯೂಸ್
19-07-23 09:10 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19: ಅಸಭ್ಯ ವರ್ತನೆ ಕಾರಣಕ್ಕೆ ಬಿಜೆಪಿ ಶಾಸಕರನ್ನು ವಿಧಾನಸಭೆ ಅಧಿವೇಶನದಿಂದ ಮಾರ್ಷಲ್ ಗಳು ಹೊರಕ್ಕೆ ತಳ್ಳಿರುವ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದಲ್ಲದೆ, ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
ವಿಶೇಷ ಅಂದ್ರೆ, ಮೊನ್ನೆ ವರೆಗೂ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರನ್ನೂ ಯಾವುದೇ ಮುಲಾಜಿಲ್ಲದೆ ಹೊರಕ್ಕೆ ತಳ್ಳಿರುವುದು. ಬಸವನಗೌಡ ಪಾಟೀಲ್ ಯತ್ನಾಳ್ ಮಾರ್ಷಲ್ ಗಳ ತಳ್ಳಾಟದಲ್ಲಿ ಕುಸಿದು ಬಿದ್ದರೆ, ಬೊಮ್ಮಾಯಿ ವಿಧಾನಸಭೆ ಬಾಗಿಲಿನಿಂದ ಹೊರ ದಬ್ಬಲ್ಪಟ್ಟಿದ್ದಾರೆ. ಸುನಿಲ್ ಕುಮಾರ್, ಅಶೋಕ್ ಸೇರಿದಂತೆ ಕರಾವಳಿಯ ಬಿಜೆಪಿ ಶಾಸಕರನ್ನು ಹೊರಕ್ಕೆ ತಳ್ಳಲಾಗಿದೆ.

ಸಾಮಾನ್ಯವಾಗಿ ಶಾಸಕರನ್ನು ಅಸಭ್ಯ ವರ್ತನೆಯ ಕಾರಣಕ್ಕೆ ಸ್ಪೀಕರ್ ಅಮಾನತು ಮಾಡಿದರೆ, ಅವರನ್ನು ಹೊರಕ್ಕೆ ಹೋಗಲು ಸ್ಪೀಕರ್ ಸೂಚಿಸುತ್ತಾರೆ. ಇವತ್ತು ಕೂಡ ಇದೇ ರೀತಿ ಸ್ಪೀಕರ್ ಹೊರಗೆ ಹೋಗಲು ಸೂಚನೆ ನೀಡಿದ್ದರು. ಆದರೆ ಸ್ಪೀಕರ್ ಕ್ರಮಕ್ಕೆ ಆಕ್ಷೇಪಿಸಿದ ಬಿಜೆಪಿ ಶಾಸಕರು ಪ್ರತಿಭಟನೆಗೆ ಇಳಿದಿದ್ದಾರೆ. ಆದರೆ ಸದನದಲ್ಲಿ ಅಧ್ಯಕ್ಷರೇ ಸುಪ್ರೀಂ ಆಗಿರುತ್ತಾರೆ. ಸದನದಲ್ಲಿ ಗಲಾಟೆ ನಡೆಸಿದರೆ, ವಿಧಾನಸಭೆಯ ಒಳಗೆ ಪೊಲೀಸರ ರೀತಿ ಕರ್ತವ್ಯದಲ್ಲಿರುವ ಮಾರ್ಷಲ್ ಗಳನ್ನು ಬಳಕೆ ಮಾಡುತ್ತಾರೆ. ಹೊರಕ್ಕೆ ತಳ್ಳಿ ಎಂದು ಸೂಚನೆ ಕೊಟ್ಟರೆ ಅದನ್ನು ಯಥಾವತ್ ಪಾಲನೆ ಮಾಡುತ್ತಾರೆ. ಇದೇ ರೀತಿ ಘಟನೆಯಾಗಿದ್ದು ಮಾಜಿ ಸಿಎಂ, ಮಾಜಿ ಸಚಿವ ಅನ್ನುವ ಮುಲಾಜು ನೋಡದೆ ಮಾರ್ಷಲ್ ಗಳು ತಮ್ಮ ಕರ್ತವ್ಯ ಪಾಲಿಸಿದ್ದಾರೆ.
ಆದರೆ ಹಿರಿಯ ಶಾಸಕರನ್ನು ಹೊರಕ್ಕೆ ತಳ್ಳಿರುವುದು, ವಯಸ್ಸಾದವರೆಂದೂ ಲೆಕ್ಕಿಸದೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ಇದರ ವಿಡಿಯೋ ನೋಡಿದ ಜನಸಾಮಾನ್ಯರು ಬಿಜೆಪಿ ಶಾಸಕರ ಸ್ಥಿತಿ ನೋಡಿ ನಗುವಷ್ಟರ ಮಟ್ಟಿಗೆ ಚರ್ಚೆ ಬೆಳೆದಿದೆ. ಕಾಂಗ್ರೆಸ್ ನಾಯಕರು ನೇರ ಕ್ರಮದ ಮೂಲಕ ಬಿಜೆಪಿ ಶಾಸಕರನ್ನು ಹೊರಗೆ ತಳ್ಳಿರುವುದು ಹೇಗೂ ವಿಪಕ್ಷ ನಾಯಕರೇ ಇಲ್ಲದ ಪಕ್ಷಕ್ಕೆ ಇಲ್ಲಿ ಬೆಲೆಯೇ ಇಲ್ಲ ಎನ್ನುವುದನ್ನು ಸೂಚಿಸಿದಂತಿದೆ. ಈ ರೀತಿಯ ಬೆಳವಣಿಗೆ ಬಿಜೆಪಿ ಕಾರ್ಯಕರ್ತರಲ್ಲಿ ಇರಿಸುಮುರಿಸು ತಂದಿದ್ದರೆ, ರಾಜ್ಯದಲ್ಲಿ ಕಾಂಗ್ರೆಸ್ ಪ್ರಭಾವ ಬೆಳೆಸಿಕೊಂಡಿರುವುದನ್ನು ತೋರಿಸಿದೆ.
Former CM Bommai pushed by marshals during fight at Assembly, video goes viral.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm