ಬ್ರೇಕಿಂಗ್ ನ್ಯೂಸ್
21-07-23 08:18 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಹೋರಾಟ ನಡೆಸಲು ಬಿಜೆಪಿ ಮತ್ತು ಜೆಡಿಎಸ್ ನಿರ್ಧಾರ ಮಾಡಿವೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಎಚ್.ಡಿ ಕುಮಾರಸ್ವಾಮಿ ಶುಕ್ರವಾರ ಜಂಟಿಯಾಗಿ ಹೇಳಿಕೆ ನೀಡಿದ್ದಾರೆ.
ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ನಾನು ಮತ್ತು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ. ನಾನು ವಿರೋಧ ಪಕ್ಷದಲ್ಲಿದ್ದೇನೆ, ಬೊಮ್ಮಾಯಿ ಅವರೂ ಜೊತೆಗೆ ಇದ್ದಾರೆ. ನಾಡಿನ ಹಿತಾಸಕ್ತಿ ಕಾಪಾಡುವ ಸಲುವಾಗಿ ಹೋರಾಟ ಮಾಡಲು ನಾವು ಒಗ್ಗಟ್ಟಾಗಿ ಹೋಗುತ್ತಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


ಜೆಡಿಎಸ್ ಮತ್ತು ಬಿಜೆಪಿ ಎರಡೂ ವಿರೋಧ ಪಕ್ಷಗಳಾಗಿದ್ದು, ಒಟ್ಟಾಗಿ ಕೆಲಸ ಮಾಡುವ ನಿರ್ಧಾರ ಆಗಿದೆ. ಎಲ್ಲರ ಅಭಿಪ್ರಾಯ ಪಡೆದು ಪಕ್ಷದ ಸಂಘಟನೆಗೆ 10 ಜನರ ತಂಡ ರಚನೆ ಮಾಡಲಾಗಿದೆ. ಇಡೀ ರಾಜ್ಯದಲ್ಲಿ ಸರ್ಕಾರದ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಧ್ವನಿ ಎತ್ತುವಂತೆ ದೇವಗೌಡರು ಸಂದೇಶ ನೀಡಿದ್ದಾರೆ. ದೇವೇಗೌಡರ ಮಾರ್ಗದರ್ಶನ, ಪಕ್ಷ ಸಂಘಟನೆ ಮೂಲಕ ತಂಡ ರಚನೆ ಮಾಡಲಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಏರ್ಪಡುತ್ತದೆ ಎನ್ನುವುದು ಈಗಾಗಲೇ ಕೇಳಿಬರುತ್ತಿರುವ ಮಾತು. ಆದರೆ ಈ ಬಗ್ಗೆ ಅಧಿಕೃತ ನಿರ್ಣಯ ಹೊರಬೀಳದಿದ್ದರೂ ವಿಧಾನಸಭೆ ಅಧಿವೇಶನದಲ್ಲಿ ಜೊತೆ ಜೊತೆಗೆ ಕಾಂಗ್ರೆಸ್ ವಿರುದ್ಧ ಹೋರಾಟ ಕೈಗೆತ್ತಿಕೊಂಡಿರುವುದು ಎರಡು ಪಕ್ಷಗಳು ಮೈತ್ರಿಗೆ ಮುಂದಾಗಿರುವ ಸುಳಿವು ಎನ್ನಲಾಗುತ್ತಿದೆ. ಬಿಜೆಪಿ ಜೊತೆಗೆ ಜೆಡಿಎಸ್ ವಿಲೀನ ಅಥವಾ ಮೈತ್ರಿಗೆ ಮುಂದಾದರೆ ವಿಪಕ್ಷ ನಾಯಕ ಸ್ಥಾನವನ್ನೇ ಕುಮಾರಸ್ವಾಮಿಗೆ ಬಿಟ್ಟು ಕೊಡಲು ಬಿಜೆಪಿ ಹೈಕಮಾಂಡ್ ನಾಯಕರು ಮುಂದಾಗಿದ್ದಾರೆ. ಇದರ ನಡುವಲ್ಲೇ ವಿಧಾನಸಭೆ ಅಧಿವೇಶನ ಕೊನೆಗೊಳ್ಳುವ ಸಂದರ್ಭದಲ್ಲೇ ಎರಡು ಪಕ್ಷಗಳ ಪ್ರಮುಖ ನಾಯಕರು ಜೊತೆಗೂಡಿ ಸುದ್ದಿಗೋಷ್ಟಿ ನಡೆಸಿರುವುದು ಕುತೂಹಲ ಮೂಡಿದೆ.
Former Chief Minister HD Kumaraswamy said that it is ironic that the state Congress government led the budget session when the opposition was out. He spoke at a joint press conference with former CM Basavaraja Bommai at his office in Vidhansouda.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm