ಬ್ರೇಕಿಂಗ್ ನ್ಯೂಸ್
04-11-20 05:29 pm Bangalore Correspondent ಕರ್ನಾಟಕ
ಮೈಸೂರು, ನವೆಂಬರ್ 4: ಉಪ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲಿದೆ, ದೆಹಲಿ ಬಿಜೆಪಿ ನಾಯಕರು ಯಡಿಯೂರಪ್ಪ ಅವರನ್ನು ಬದಲಾಯಿಸಲು ನಿರ್ಧರಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುವುದು ಖಂಡಿತ. ಈ ಬಗ್ಗೆ ನನಗೆ ಖಚಿತ ವಿಶ್ವಾಸವಿದೆ. ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯೋದಿಲ್ಲ. ನನಗೆ ದೆಹಲಿಯಿಂದ ಬಂದಿರುವ ಮಾಹಿತಿ ಆಧಾರದ ಮೇಲೆ ಹೇಳುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಬದಲಾವಣೆಗೆ, ನಾನು ಯಡಿಯೂರಪ್ಪ ಮೇಲೆ ಭ್ರಷ್ಟಾಚಾರ ಆರೋಪ ಮಾಡಿದ್ದು ಕಾರಣ ಇದ್ದಿರಬಹುದು. ಹಲವು ದಿನಗಳಿಂದ ಸಿಎಂ ಬದಲಾವಣೆ ಮಾಡುವ ಚಿಂತನೆಯಲ್ಲಿ ಬಿಜೆಪಿ ಇದೆ. ಹಾಗಾಗಿ ಉಪ ಚುನಾವಣೆ ಫಲಿತಾಂಶದ ನಂತರ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಉಪ ಚುನಾವಣೆ ನಡೆದ ಶಿರಾ ಮತ್ತು ಆರ್.ಆರ್. ನಗರ ಕ್ಷೇತ್ರದ ಎರಡರಲ್ಲೂ ಕಾಂಗ್ರೆಸ್ ಗೆಲ್ಲಲಿದೆ. ಶಿರಾದಲ್ಲಿ ಕಳೆದ ಬಾರಿ ಅಪಪ್ರಚಾರ ಆಗಿತ್ತು. ಆರ್.ಆರ್ ನಗರದಲ್ಲಿ ಕಾಂಗ್ರೆಸ್ ಗೆದ್ದಿತ್ತು. ಈ ಬಾರಿಯೂ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಪರವಾದ ಅಲೆ ಕಂಡುಬಂದಿದ್ದು ಕಾಂಗ್ರೆಸ್ಸೇ ಗೆಲ್ಲಲಿದೆ ಎಂದಿದ್ದಾರೆ.
ರಾಜ್ಯ ಸರಕಾರ ಶಾಲೆ ಆರಂಭಿಸುವ ಚಿಂತನೆ ಮಾಡಿರುವ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಈ ವರ್ಷ ಶಾಲೆಗಳನ್ನು ಆರಂಭಿಸೋದು ಬೇಡ. ಇದು ಸರಕಾರಕ್ಕೆ ನನ್ನ ನೀಡುತ್ತಿರುವ ವೈಯಕ್ತಿಕ ಸಲಹೆ. ಈ ವರ್ಷ ಆನ್ ಲೈನ್ ಕ್ಲಾಸ್ ಮಾಡಿ ಎಲ್ಲರನ್ನೂ ಪಾಸ್ ಮಾಡಲಿ. ಸಂಪೂರ್ಣ ಕೊರೊನಾ ಮುಕ್ತವಾದ ಬಳಿಕ ಶಾಲೆ ಆರಂಭಿಸಿದರೆ ಸಾಕು ಎಂದು ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ.
After the By-Elections of R R Nagar, the Chief Minister of Karnataka BS Yeddyurappa will anymore not be the cm but Karnataka will see a new cm predicts Congress leader Siddaramaiah.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm