ಬ್ರೇಕಿಂಗ್ ನ್ಯೂಸ್
26-07-23 03:59 pm HK News Desk ಕರ್ನಾಟಕ
ತುಮಕೂರು, ಜುಲೈ 26: ತುಮಕೂರು ಜಿಲ್ಲೆಯ ಗೊಲ್ಲರಹಟ್ಟಿ ಗ್ರಾಮ ಅಲ್ಲಿನ ಜನರ ಮೌಢ್ಯತನಕ್ಕೆ ಕುಖ್ಯಾತಿ ಪಡೆದಿದೆ. ಹೊಸತಾಗಿ ಋತುಮತಿಯಾದವರು, ಸೂತಕ ಇದ್ದವರನ್ನು ಗ್ರಾಮದಿಂದ ಹೊರಗೆ ಇರಿಸುವಂತಹ ಅನಿಷ್ಟ ಪದ್ಧತಿ ಅಲ್ಲಿ ಚಾಲ್ತಿಯಲ್ಲಿದೆ. ಆದರೆ ಈಗ ಈ ಅನಿಷ್ಟ ಪದ್ಧತಿಯ ಕಾರಣಕ್ಕೆ ನವಜಾತ ಶಿಶುವೊಂದು ಅಸುನೀಗಿದೆ.
ಸೂತಕವು ದೇವರಿಗೆ ಆಗಲ್ಲ ಎಂದು ಬಾಣಂತಿ ಮತ್ತು ಹಸುಗೂಸನ್ನೇ ಊರಿನಿಂದ ಹೊರಗಿಟ್ಟ ಕುಟುಂಬಸ್ಥರು ಮಗುವನ್ನೇ ಕಳೆದುಕೊಂಡಿದ್ದಾರೆ. ಗೊಲ್ಲರಹಟ್ಟಿ ಗ್ರಾಮದ ಸಿದ್ದೇಶ್ ಮತ್ತು ವಸಂತ ದಂಪತಿಯ ಮಗು ಮೃತಪಟ್ಟಿದೆ. ಸೂತಕದ ಕಾರಣ ಮಗು ಮತ್ತು ಬಾಣಂತಿಯನ್ನು ಮಳೆ ಎಂದೂ ಲೆಕ್ಕಿಸದೆ ಊರ ಹೊರಗಿನ ಗುಡಿಸಲಿನಲ್ಲಿ ಇರಿಸಿದ್ದರು.

ಈ ನಡುವೆ, ಮಗುವಿಗೆ ಶೀತ ಹೆಚ್ಚಾಗಿದ್ದರಿಂದ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಸುಗೂಸು ಜು.26ರಂದು ಪ್ರಾಣಬಿಟ್ಟಿದೆ. ತಮ್ಮ ದೇವರಿಗೆ ಸೂತಕ ಆಗಲ್ಲ ಎಂದು ಬಾಣಂತಿ, ಮಗುವನ್ನು ಕುಟುಂಬಸ್ಥರು ಊರ ಹೊರಗಿಟ್ಟಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ. ವಿಪರೀತ ಗಾಳಿ, ಮಳೆ ಇದ್ದರೂ ಸಹ ಮಗು ಮತ್ತು ತಾಯಿಯನ್ನು ಊರ ಹೊರಗೆ ಇರಿಸಲಾಗಿತ್ತು. ಇದರಿಂದ ಮಗುವಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು ಎನ್ನಲಾಗಿದೆ.
ವಸಂತ ಕಳೆದ ತಿಂಗಳು ಜೂನ್ 22ರಂದು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಏಳು ತಿಂಗಳಲ್ಲಿ ಹೆರಿಗೆ ಆಗಿದ್ದರಿಂದ ಒಂದು ಮಗು ಸಾವನ್ನಪ್ಪಿದ್ದರೆ, ಇನ್ನೊಂದು ಮಗು ಬದುಕುಳಿದಿತ್ತು. ಮಗುವನ್ನು 22 ದಿನ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿಟ್ಟು ಬಳಿಕ ಬಿಟ್ಟು ಕೊಡಲಾಗಿತ್ತು. ಜು.14 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆಸ್ಪತ್ರೆಯಿಂದ ಬರುತ್ತಿದ್ದಂತೆ ಕುಟುಂಬಸ್ಥರು ತಾಯಿ ಮತ್ತು ಮಗುವನ್ನು ಊರಾಚೆ ಇರುವ ಗುಡಿಸಲಿಗೆ ರವಾನೆ ಮಾಡಿದ್ದರು. ಹೀಗಾಗಿ ಬಾಣಂತಿ ಮತ್ತು ಹಸುಗೂಸು ಉಸಿರುಗಟ್ಟಿಸುವ ಸಣ್ಣ ಗುಡಿಸಲಿನಲ್ಲೇ ಹಗಲು, ರಾತ್ರಿ ಇರಬೇಕಾದ ಪರಿಸ್ಥಿತಿ ಎದುರಾಗಿತ್ತು. ವಿಪರೀತ ಮಳೆ, ಗಾಳಿಯಿಂದಾಗಿ ಮಗು ಅನಾರೋಗ್ಯಕೀಡಾಗಿ ಪ್ರಾಣಬಿಟ್ಟಿದ್ದು ಗ್ರಾಮಸ್ಥರ ಮೌಢ್ಯಕ್ಕೆ ಜನರು ಅಮಾಯಕ ಶಿಶು ಪ್ರಾಣ ಬಿಡುವಂತಾಗಿದೆ..
Tumkur Superstitious beliefs, Mother loses new born baby due to heavy wind and rains after daughter in law pushed to live in hut due to Superstitious beliefs of death.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am