ಬ್ರೇಕಿಂಗ್ ನ್ಯೂಸ್
27-07-23 08:28 pm HK News Desk ಕರ್ನಾಟಕ
ರಾಮನಗರ, ಜುಲೈ 27: ಉಡುಪಿ ಕಾಲೇಜಿನ ಟಾಯ್ಲೆಟ್ ನಲ್ಲಿ ಮೊಬೈಲ್ ಬಳಕೆ ವಿವಾದ ಹಿನ್ನೆಲೆಯಲ್ಲಿ ಇದೀಗ ರಾಮನಗರದ ಖಾಸಗಿ ಕಾಲೇಜೊಂದರ ಆಡಳಿತ ಮಂಡಳಿ ವಿದ್ಯಾರ್ಥಿಗಳ ಮೊಬೈಲ್ ತಪಾಸಣೆ ನಡೆಸುವ ಸಲುವಾಗಿಯೇ ವಿಶೇಷ ತಂಡವನ್ನು ರಚಿಸಿದೆ.
ನಗರದ ಗೌಸಿಯಾ ಇಂಜಿನಿಯರ್ ಕಾಲೇಜು ಈ ರೀತಿಯ ಕ್ರಮ ತೆಗೆದುಕೊಂಡಿರುವ ಬಗ್ಗೆ ವರದಿಯಾಗಿದೆ. ಅಲ್ಪಸಂಖ್ಯಾತ ಸಮುದಾಯ ಮಾಲಿಕತ್ವದ ಈ ಕಾಲೇಜಿನಲ್ಲಿ ಶೇ.60ಕ್ಕಿಂತಲೂ ಹೆಚ್ಚು ಹಿಂದೂ ವಿದ್ಯಾನಿಯರಿಂದ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ.
ಕಾಲೇಜು ಆವರಣ ಸೇರಿದಂತೆ ಕ್ಲಾಸ್ ರೂಮ್ ಗೂ ಮೊಬೈಲ್ ತರೋ ಹಾಗಿಲ್ಲ ಎಂದು ಈಗಾಗಲೇ ಕಾಲೇಜಿನಲ್ಲಿ ನಿಯಮ ಇದೆ. ಆದರೆ ಉಡುಪಿಯಲ್ಲಿ ಅನ್ಯಕೋಮಿನ ಮೂವರು ವಿದ್ಯಾರ್ಥಿನಿಯರು ಸೇರಿ ಶೌಚಾಲಯದಲ್ಲಿ ಒಬ್ಬಾಕೆ ವಿದ್ಯಾರ್ಥಿನಿಯ ವೀಡಿಯೋ ಮಾಡಿರುವ ವಿಚಾರ ಭಾರೀ ವಿವಾದವಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರಾಮನಗರದ ಗೌಸಿಯಾ ಕಾಲೇಜು ಆಡಳಿತ ಮಂಡಳಿ ತಮ್ಮಲ್ಲೂ ಮೊಬೈಲ್ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ತೀರ್ಮಾನಿಸಲಾಗಿದೆ.
ಮೊಬೈಲ್ ತರಬೇಡಿ ಎಂದು ಹೇಳಿದರೂ ವಿದ್ಯಾರ್ಥಿಗಳು ತಂದೇ ತರುತ್ತಾರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ಕಾಲೇಜು ಆಡಳಿತ ಮಂಡಳಿ ಪ್ರಾಂಶುಪಾಲ ನೇತ್ವತ್ವದಲ್ಲಿ 5 ಮಂದಿಯ ತಂಡವನ್ನು ರಚಿಸಿದೆ. ಈ ತಂಡದಲ್ಲಿ ಇಬ್ಬರು ಮಹಿಳಾ ಅಧ್ಯಾಪಕರು ಮತ್ತು ಮೂವರು ಮಂದಿ ಪುರುಷ ಅಧ್ಯಾಪಕರು ಇದ್ದಾರೆ. ಅವರು ಬೆಳಗ್ಗೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳನ್ನು ರ್ಯಾಂಡಮ್ ಆಗಿ ತಪಾಸಣೆ ನಡೆಸಿ ಕ್ಲಾಸ್ ರೂಂಗಳಿಗೆ ತೆರಳಲು ಅನುವು ಮಾಡಿಕೊಡುತ್ತಿದೆ.
Ramnagara college forms team to stop students getting mobile phone to college after Udupi Toilet camera case creates spark.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am