ಬ್ರೇಕಿಂಗ್ ನ್ಯೂಸ್
28-07-23 06:11 pm HK News Desk ಕರ್ನಾಟಕ
ಮೈಸೂರು, ಜುಲೈ 28: ಟ್ರಯಲ್ಗೆ ತೆಗೆದುಕೊಂಡು ಹೋದ ಕಾರು ಅಪಘಾತಕ್ಕೀಡಾಗಿದ್ದು, ಅಪಘಾತ ಸ್ಥಳದಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ನಗರದ ಹೊರವಲಯದ ಮಾನಂದವಾಡಿ ರಸ್ತೆಯಲ್ಲಿ ನಡೆದಿದೆ. ಗಾಯಾಳುಗಳನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೆಕೆಂಡ್ ಹ್ಯಾಂಡ್ ಇನ್ನೋವಾ ಕಾರು ಕೊಂಡುಕೊಳ್ಳಲೆಂದು, ಟ್ರಯಲ್ ನೋಡುವುದಾಗಿ ಹೇಳಿ ಅಶೋಕಪುರಂ ನಿವಾಸಿ ರವಿ ಕುಮಾರ್ ಎಂಬವರು ಕಾರು ತೆಗೆದುಕೊಂಡು ಹೋಗಿದ್ದರು. ಆ ಕಾರಿನಲ್ಲಿ ಅವರ ಜೊತೆ ಭಾಸ್ಕರ್, ರವಿ, ಸಂದೇಶ್ ಹಾಗೂ ಶಿವಕುಮಾರ್ ಎಂಬವರು ತೆರಳಿದ್ದರು. ಕಾರು ಮಾನಂದವಾಡಿ ರಸ್ತೆಯ ಬಳಿ ನಿಯಂತ್ರಣ ತಪ್ಪಿ ಕಾಂಪೌಂಡ್ಗೆ ಡಿಕ್ಕಿ ಹೊಡೆದಿದ್ದು, ಆನಂತರ ವಿದ್ಯುತ್ ಕಂಬಕ್ಕೂ ಡಿಕ್ಕಿ ಹೊಡೆದು ವಿದ್ಯುತ್ ತಂತಿ ಕಾರಿಗೆ ತಗುಲಿದೆ.
ಈ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ ಸಾಗುತ್ತಿದ್ದ ಆಟೋ ಡ್ರೈವರ್ ಕಿರಣ್ ಇವರ ಸಹಾಯಕ್ಕೆ ಬಂದಿದ್ದಾರೆ. ತುಂಡಾದ ವಿದ್ಯುತ್ ತಂತಿ ತಾಗಿ ರವಿ ಕುಮಾರ್ ಹಾಗೂ ಸಹಾಯ ಮಾಡಲು ಬಂದ ಕಿರಣ್ ಇಬ್ಬರೂ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ರವಿ, ಸಂದೇಶ್, ಶಿವಕುಮಾರ್ ಅವರಿಗೂ ಶಾಕ್ ಹೊಡೆದಿದೆ. ಮತ್ತೊಬ್ಬ ಭಾಸ್ಕರ್ ಎಂಬವರು ಅದೃಷ್ಟವಶಾತ್ ಆಪಾಯದಿಂದ ಪಾರಾಗಿದ್ದಾರೆ.
ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಸಹೋದರಿಯ ಮಗ ದೀರಜ್ ಪ್ರಸಾದ್ಗೆ ಸೇರಿದ ಕಾರು ಅಪಘಾತವಾಗಿತ್ತು. ಬಳಿಕ ಅಪಘಾತವಾದ ಸ್ಥಳದಿಂದ ಕಾರನ್ನು ತಳ್ಳಲು ಕಾರಿನಲ್ಲಿದ್ದ ನಾಲ್ವರು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ಅಲ್ಲೇ ಇದ್ದ ಆಟೋ ಚಾಲಕ ರವಿನನ್ನು ಸಹಾಯಕ್ಕೆ ಬರುವಂತೆ ಕರೆದಿದ್ದಾರೆ. ಅದರಂತೆ ರವಿ ನೆರವಿಗೆ ಧಾವಿಸಿದ್ದು, ಎಲ್ಲರೂ ಸೇರಿ ತಳ್ಳುವಾಗ ಕಾರಿನಲ್ಲಿ ಏಕಾಏಕಿ ವಿದ್ಯುತ್ ಪ್ರವಹಿಸಿದೆ. ಪರಿಣಾಮ ಕಾರು ಚಾಲನೆ ಮಾಡುತ್ತಿದ್ದ ಕಿರಣ್ ಹಾಗೂ ಸಹಾಯಕ್ಕೆ ಬಂದಿದ್ದ ಆಟೋ ಚಾಲಕ ರವಿ ಸಾವನ್ನಪ್ಪಿದ್ದಾರೆ.
ಇವರೆಲ್ಲ ಕಡು ಬಡತನದಲ್ಲಿ ಇರುವವರು. ಕೆಪಿಟಿಸಿಎಲ್ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕು ಎಂದು ಮೃತರ ಸಂಬಂಧಿಕರು ಒತ್ತಾಯ ಮಾಡಿದ್ದಾರೆ.
ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Mysuru accident, Second hand test drive car rams on electric Police, two killed on spot including auto driver who rushed to help.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
07-07-25 04:11 pm
HK News Desk
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
07-07-25 05:02 pm
Mangalore Correspondent
Mangalore Car Accident, Thumbe: ಹಳೆ ಸ್ವಿಫ್ಟ್...
05-07-25 05:16 pm
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
07-07-25 07:13 pm
Mangalore Correspondent
Digital Arrest, Cyber Fraud, Mangalore: ಡಿಜಿಟ...
07-07-25 03:30 pm
Moral policing, Puttur, Mangalore Crime: ನೀನು...
07-07-25 12:20 pm
Tamilnadu Lock up death, Kannada News: ತಮಿಳುನ...
06-07-25 10:52 pm
Mangalore Foreign Job Scam, Hireglow Elegant,...
06-07-25 04:14 pm