ಬ್ರೇಕಿಂಗ್ ನ್ಯೂಸ್
08-08-23 03:55 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8: ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಬಿಜೆಪಿ ಅಭ್ಯರ್ಥಿಗಳು ಈಗ ಲೋಕಸಭಾ ಚುನಾವಣೆ ಮೇಲೆ ಕಣ್ಣೀಟ್ಟಿದ್ದು, ಟಿಕೆಟ್ ಗಿಟ್ಟಿಸಿಕೊಳ್ಳಲು ಕಸರತ್ತು ಆರಂಭಿಸಿದ್ದಾರೆ. ರಾಜ್ಯದಲ್ಲಿ ಹತ್ತಕ್ಕೂ ಹೆಚ್ಚು ಕಡೆ ಕಳೆದ ಬಾರಿ ವಿಧಾನಸಭೆ ಚುನಾವಣೆ ಸೋತವರೇ ಲೋಕಸಭೆ ಅಭ್ಯರ್ಥಿ ಸ್ಥಾನಕ್ಕೆ ಲಾಬಿ ನಡೆಸುತ್ತಿದ್ದಾರೆ. ಹಾಲಿ ಸಂಸದರ ಪೈಕಿ ಬಹುತೇಕರಿಗೆ ಮರು ಸ್ಪರ್ಧೆಗೆ ಅವಕಾಶ ಇಲ್ಲವೆಂಬ ಸುಳಿವು ಹಿನ್ನೆಲೆಯಲ್ಲಿ ಮಾಜಿ ಶಾಸಕರೇ ಲೋಕಸಭೆ ಟಿಕೆಟಿಗಾಗಿ ಲಾಬಿಗೆ ಮುಂದಾಗಿದ್ದಾರೆ.
ಮಾಜಿ ಸಚಿವರು, ಶಾಸಕರು ಲೋಕಸಭಾ ಟಿಕೆಟ್ ಪಡೆಯಲು ಬಿಜೆಪಿ ವರಿಷ್ಠರ ಮೇಲೆ ಒತ್ತಡ ಹೇರುತ್ತಿದ್ದು, ಟಿಕೆಟ್ ನೀಡಿದರೆ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸುತ್ತಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ ಮಾಜಿ ಸಚಿವರಾದ ವಿ.ಸೋಮಣ್ಣ, ಸಿ.ಟಿ.ರವಿ, ಬಿ.ಸಿ.ಪಾಟೀಲ್, ಡಾ.ಸುಧಾಕರ್, ಮುರುಗೇಶ್ ನಿರಾಣಿ, ಬಿ.ಶ್ರೀರಾಮುಲು, ಗೋವಿಂದ ಕಾರಜೋಳ, ಕರುಣಾಕರ ರೆಡ್ಡಿ, ಎಂ.ಪಿ.ರೇಣುಕಾಚಾರ್ಯ ಹಾಗು ಹಾಸನದ ಪ್ರೀತಂ ಗೌಡ ಸೇರಿದಂತೆ ಹಲವು ನಾಯಕರು ಲೋಕಸಭೆ ಟಿಕೆಟ್ ಪಡೆಯಲು ದೆಹಲಿ ಮಟ್ಟದಲ್ಲಿ ಲಾಬಿ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.



ಮಾಜಿ ಶಾಸಕ ಸಿ.ಟಿ.ರವಿ ಉಡುಪಿ-ಚಿಕ್ಕಮಗಳೂರು ಇಲ್ಲವೇ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆಗೆ ಆಸಕ್ತಿ ತೋರಿದ್ದಾರೆ. ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಚಿಂತನೆ ನಡೆಸಿದ್ದಾರೆ. ಈ ಕ್ಷೇತ್ರದ ಸಂಸದರಾಗಿರುವ ಬಿ.ಎನ್.ಬಚ್ಚೇಗೌಡ ಅವರಿಗೆ ವಯಸ್ಸಿನ ಕಾರಣಕ್ಕೆ ಟಿಕೆಟ್ ದೊರೆಯುವುದು ಅನುಮಾನವಾಗಿದೆ. ವಿ.ಸೋಮಣ್ಣ ಬೆಂಗಳೂರು ದಕ್ಷಿಣ ಅಥವಾ ತುಮಕೂರು ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದಾರೆ. ಎಂ.ಪಿ.ರೇಣುಕಾಚಾರ್ಯ ದಾವಣಗೆರೆ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಇನ್ನು ಹಾಲಿ ಸಂಸದ ಶಿವಕುಮಾರ್ ಉದಾಸಿ ಅವರ ಕ್ಷೇತ್ರ ಹಾವೇರಿ ಮೇಲೆ ಬಿ.ಸಿ.ಪಾಟೀಲ್ ಕಣ್ಣಿಟ್ಟಿದ್ದಾರೆ. ಬಾಗಲಕೋಟೆಯಿಂದ ಮುರುಗೇಶ್ ನಿರಾಣಿ, ಬಳ್ಳಾರಿ ಕ್ಷೇತ್ರಕ್ಕಾಗಿ ಶ್ರೀರಾಮುಲು ಹಾಗೂ ಕರುಣಾಕರ ರೆಡ್ಡಿ ನಡುವೆ ಪೈಪೋಟಿ ನಡೆದಿದೆ. ಗೋವಿಂದ ಕಾರಜೋಳ ವಿಜಯಪುರ ಕ್ಷೇತ್ರಕ್ಕೆ, ವಿಶ್ವೇಶ್ವರ ಹೆಗಡೆ ಕಾಗೇರಿ ಉತ್ತರ ಕನ್ನಡ ಕ್ಷೇತ್ರದ ಟಿಕೆಟ್ ಗಾಗಿ ಲಾಬಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.


ಇದೇ ವೇಳೆ, ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಯಿಂದಾಗಿ ಜನರ ಒಲವು ಬದಲಾಗಿದೆ ಎನ್ನಲಾಗುತ್ತಿದ್ದು ಹೀಗಾಗಿ ಕೆಲವು ಕಡೆ ಬಿಜೆಪಿಯ ಹಾಲಿ ಲೋಕಸಭೆ ಸದಸ್ಯರೇ ಮತ್ತೆ ಸ್ಪರ್ಧೆಗೆ ನಿರಾಸಕ್ತಿ ತೋರಿದ್ದಾರೆ. ವಿರೋಧಿ ಅಲೆ ಮತ್ತು ವಯೋಮಾನದ ಕಾರಣಕ್ಕೆ ಈ ಬಾರಿ ಲೋಕಸಭಾ ಟಿಕೆಟ್ ಕೈತಪ್ಪುವ ಸಾಧ್ಯತೆ ಇರುವುದರಿಂದ ಆ ಕ್ಷೇತ್ರಗಳ ಮೇಲೆ ಹೊಸಬರು ಕಣ್ಣು ಹಾಕಿದ್ದಾರೆ. ಕರಾವಳಿ ಸೇರಿದಂತೆ ಬಹುತೇಕ ಬಿಜೆಪಿ ಹಾಲಿ ಸದಸ್ಯರನ್ನು ಬದಲಾಯಿಸಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ ಎನ್ನುವ ಮಾಹಿತಿಯಿದೆ. ಈ ಸುಳಿವು ಅರಿತ ಕೆಳ ಹಂತದ ನಾಯಕರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಲೋಕಸಭೆ ಟಿಕೆಟಿಗೆ ಲಾಬಿ ನಡೆಸಿದ್ದಾರೆ.
Many MLAs plan for master plan to get ticket for MP elections in Karnataka.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm