ಬ್ರೇಕಿಂಗ್ ನ್ಯೂಸ್
08-08-23 03:55 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8: ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಬಿಜೆಪಿ ಅಭ್ಯರ್ಥಿಗಳು ಈಗ ಲೋಕಸಭಾ ಚುನಾವಣೆ ಮೇಲೆ ಕಣ್ಣೀಟ್ಟಿದ್ದು, ಟಿಕೆಟ್ ಗಿಟ್ಟಿಸಿಕೊಳ್ಳಲು ಕಸರತ್ತು ಆರಂಭಿಸಿದ್ದಾರೆ. ರಾಜ್ಯದಲ್ಲಿ ಹತ್ತಕ್ಕೂ ಹೆಚ್ಚು ಕಡೆ ಕಳೆದ ಬಾರಿ ವಿಧಾನಸಭೆ ಚುನಾವಣೆ ಸೋತವರೇ ಲೋಕಸಭೆ ಅಭ್ಯರ್ಥಿ ಸ್ಥಾನಕ್ಕೆ ಲಾಬಿ ನಡೆಸುತ್ತಿದ್ದಾರೆ. ಹಾಲಿ ಸಂಸದರ ಪೈಕಿ ಬಹುತೇಕರಿಗೆ ಮರು ಸ್ಪರ್ಧೆಗೆ ಅವಕಾಶ ಇಲ್ಲವೆಂಬ ಸುಳಿವು ಹಿನ್ನೆಲೆಯಲ್ಲಿ ಮಾಜಿ ಶಾಸಕರೇ ಲೋಕಸಭೆ ಟಿಕೆಟಿಗಾಗಿ ಲಾಬಿಗೆ ಮುಂದಾಗಿದ್ದಾರೆ.
ಮಾಜಿ ಸಚಿವರು, ಶಾಸಕರು ಲೋಕಸಭಾ ಟಿಕೆಟ್ ಪಡೆಯಲು ಬಿಜೆಪಿ ವರಿಷ್ಠರ ಮೇಲೆ ಒತ್ತಡ ಹೇರುತ್ತಿದ್ದು, ಟಿಕೆಟ್ ನೀಡಿದರೆ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸುತ್ತಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ ಮಾಜಿ ಸಚಿವರಾದ ವಿ.ಸೋಮಣ್ಣ, ಸಿ.ಟಿ.ರವಿ, ಬಿ.ಸಿ.ಪಾಟೀಲ್, ಡಾ.ಸುಧಾಕರ್, ಮುರುಗೇಶ್ ನಿರಾಣಿ, ಬಿ.ಶ್ರೀರಾಮುಲು, ಗೋವಿಂದ ಕಾರಜೋಳ, ಕರುಣಾಕರ ರೆಡ್ಡಿ, ಎಂ.ಪಿ.ರೇಣುಕಾಚಾರ್ಯ ಹಾಗು ಹಾಸನದ ಪ್ರೀತಂ ಗೌಡ ಸೇರಿದಂತೆ ಹಲವು ನಾಯಕರು ಲೋಕಸಭೆ ಟಿಕೆಟ್ ಪಡೆಯಲು ದೆಹಲಿ ಮಟ್ಟದಲ್ಲಿ ಲಾಬಿ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.



ಮಾಜಿ ಶಾಸಕ ಸಿ.ಟಿ.ರವಿ ಉಡುಪಿ-ಚಿಕ್ಕಮಗಳೂರು ಇಲ್ಲವೇ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆಗೆ ಆಸಕ್ತಿ ತೋರಿದ್ದಾರೆ. ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಚಿಂತನೆ ನಡೆಸಿದ್ದಾರೆ. ಈ ಕ್ಷೇತ್ರದ ಸಂಸದರಾಗಿರುವ ಬಿ.ಎನ್.ಬಚ್ಚೇಗೌಡ ಅವರಿಗೆ ವಯಸ್ಸಿನ ಕಾರಣಕ್ಕೆ ಟಿಕೆಟ್ ದೊರೆಯುವುದು ಅನುಮಾನವಾಗಿದೆ. ವಿ.ಸೋಮಣ್ಣ ಬೆಂಗಳೂರು ದಕ್ಷಿಣ ಅಥವಾ ತುಮಕೂರು ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದಾರೆ. ಎಂ.ಪಿ.ರೇಣುಕಾಚಾರ್ಯ ದಾವಣಗೆರೆ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಇನ್ನು ಹಾಲಿ ಸಂಸದ ಶಿವಕುಮಾರ್ ಉದಾಸಿ ಅವರ ಕ್ಷೇತ್ರ ಹಾವೇರಿ ಮೇಲೆ ಬಿ.ಸಿ.ಪಾಟೀಲ್ ಕಣ್ಣಿಟ್ಟಿದ್ದಾರೆ. ಬಾಗಲಕೋಟೆಯಿಂದ ಮುರುಗೇಶ್ ನಿರಾಣಿ, ಬಳ್ಳಾರಿ ಕ್ಷೇತ್ರಕ್ಕಾಗಿ ಶ್ರೀರಾಮುಲು ಹಾಗೂ ಕರುಣಾಕರ ರೆಡ್ಡಿ ನಡುವೆ ಪೈಪೋಟಿ ನಡೆದಿದೆ. ಗೋವಿಂದ ಕಾರಜೋಳ ವಿಜಯಪುರ ಕ್ಷೇತ್ರಕ್ಕೆ, ವಿಶ್ವೇಶ್ವರ ಹೆಗಡೆ ಕಾಗೇರಿ ಉತ್ತರ ಕನ್ನಡ ಕ್ಷೇತ್ರದ ಟಿಕೆಟ್ ಗಾಗಿ ಲಾಬಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.


ಇದೇ ವೇಳೆ, ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಯಿಂದಾಗಿ ಜನರ ಒಲವು ಬದಲಾಗಿದೆ ಎನ್ನಲಾಗುತ್ತಿದ್ದು ಹೀಗಾಗಿ ಕೆಲವು ಕಡೆ ಬಿಜೆಪಿಯ ಹಾಲಿ ಲೋಕಸಭೆ ಸದಸ್ಯರೇ ಮತ್ತೆ ಸ್ಪರ್ಧೆಗೆ ನಿರಾಸಕ್ತಿ ತೋರಿದ್ದಾರೆ. ವಿರೋಧಿ ಅಲೆ ಮತ್ತು ವಯೋಮಾನದ ಕಾರಣಕ್ಕೆ ಈ ಬಾರಿ ಲೋಕಸಭಾ ಟಿಕೆಟ್ ಕೈತಪ್ಪುವ ಸಾಧ್ಯತೆ ಇರುವುದರಿಂದ ಆ ಕ್ಷೇತ್ರಗಳ ಮೇಲೆ ಹೊಸಬರು ಕಣ್ಣು ಹಾಕಿದ್ದಾರೆ. ಕರಾವಳಿ ಸೇರಿದಂತೆ ಬಹುತೇಕ ಬಿಜೆಪಿ ಹಾಲಿ ಸದಸ್ಯರನ್ನು ಬದಲಾಯಿಸಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ ಎನ್ನುವ ಮಾಹಿತಿಯಿದೆ. ಈ ಸುಳಿವು ಅರಿತ ಕೆಳ ಹಂತದ ನಾಯಕರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಲೋಕಸಭೆ ಟಿಕೆಟಿಗೆ ಲಾಬಿ ನಡೆಸಿದ್ದಾರೆ.
Many MLAs plan for master plan to get ticket for MP elections in Karnataka.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm