ಬ್ರೇಕಿಂಗ್ ನ್ಯೂಸ್
11-08-23 01:48 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 11: ರಾಜ್ಯಾದ್ಯಂತ 25 ಸಾವಿರ ಕೋಟಿ ರೂಪಾಯಿ ಗುತ್ತಿಗೆದಾರರಿಗೆ ಸರ್ಕಾರದಿಂದ ಪಾವತಿಗೆ ಬಾಕಿ ಉಳಿದಿದೆ, ಕಳೆದ 7 ತಿಂಗಳಿನಿಂದ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಯಾಗಿಲ್ಲ. ಬೆಂಗಳೂರಿನಲ್ಲಿ ಗುತ್ತಿಗೆದಾರರಿಗೆ ಕಮಿಷನ್ ಕೇಳಿರುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೇಳಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಕೆಂಪಣ್ಣ, ಈಗಾಗಲೇ ಕೆಲವಷ್ಟು ಹಣ ಬಿಡುಗಡೆ ಆಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದ್ದೇವೆ. ಕಂಟ್ರಾಕ್ಟರ್ಸ್ ಸೂಸೈಡ್ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ ಅಂತ ಹೇಳಿದ್ದೇವೆ ಎಂದರು. ನಮ್ಮ ಸಮಸ್ಯೆ ಕುರಿತು ಈ ಮೊದಲು ಸಿಎಂ ಆಗಿದ್ದ ಯಡಿಯೂರಪ್ಪ ಅವರಿಗೆ ಪತ್ರ ಕೊಟ್ಟಿದ್ದೆವು. ಬಳಿಕ ಪ್ರಧಾನಿ ಗೆ ಪತ್ರ ಕೊಟ್ಟಿದ್ದೇವೆ. ಈ ಹಿಂದೆ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರಿಗೂ ಪತ್ರ ಕೊಟ್ಟಿದ್ದೇವೆ. ಕುಮಾರಸ್ವಾಮಿ ನಮ್ಮ ಕೇಸ್ ತೆಗೆದುಕೊಳ್ಳಲಿಲ್ಲ. ಸಿದ್ದರಾಮಯ್ಯ ಕೂಡ ಕೇಸ್ ತೆಗೆದುಕೊಳ್ಳಲಿಲ್ಲ. ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಈ ಹಿಂದೆ ಕರೆದಿದ್ದರು, ಹಾಗಾಗಿ ಹೋಗಿದ್ದೆ. ಈಗ ಬಿಜೆಪಿ ವಿರೋಧ ಪಕ್ಷದ ನಾಯಕರು ಕರೆದರೂ ಹೋಗುತ್ತೇನೆ. ಕಾಮಗಾರಿಗಳ ತನಿಖೆಗೆ ಎಸ್ ಐಟಿ ತನಿಖೆಗೆ ವಹಿಸುವುದು ಬೇಡ ಎಂದು ಹೇಳಿದರು.
ಈ ಹಿಂದೆ ನಾವು 40% ಭ್ರಷ್ಟಾಚಾರ ನಡೀತಿದೆ ಅಂತ ಆರೋಪ ಮಾಡಿದ್ದೆವು. ನಮ್ಮ ಬಳಿ ದಾಖಲೆ ಇದೆ, ಕಮಿಷನ್ ಬಳಿ ಹೋಗಿ ದಾಖಲೆ ಕೊಡುತ್ತೇನೆ. ಬವಸರಾಜ ಬೊಮ್ಮಾಯಿಗೆ ಎಷ್ಟು ಬಾರಿ ಭೇಟಿ ಮಾಡಲು ಸಮಯ ಕೇಳಿದ್ದೆವು. ಆದರೆ, ಅವರು ನಮಗೆ ಭೇಟಿಗೆ ಅವಕಾಶವೇ ಕೊಡಲಿಲ್ಲ. ಅವರಿಗೆ ಚೀಟಿ ಕೊಟ್ಟೆವು, ಜೇಬಲ್ಲಿ ಇಟ್ಟುಕೊಂಡು ಹೋದರು. ಕರೆದು ಮಾತಾಡೋ ಕೆಲಸ ಮಾಡಲಿಲ್ಲ. ಅವರಿಗೆ ಬೇಕಾದವರಿಗೆ ಮಾತ್ರ ಹಣ ಬಿಡುಗಡೆ ಮಾಡಿದ್ದಾರೆ. ಆದರೂ ನಮಗೆ ಈಗಲೂ ಅವರ ಮೇಲೆ ಗೌರವ ಇದೆ ಎಂದು ಹೇಳಿದರು.
Contractors are again on a collision course with the Karnataka government. While the Bruhat Bengaluru Mahanagara Palike (BBMP) contractors have stopped work, demanding immediate clearance of pending bills, contractors across the State have also warned that they may tread the same path if bills are not cleared soon. The pending bills, cumulatively, have mounted to about ₹25,000 crore in the State.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am