ಬ್ರೇಕಿಂಗ್ ನ್ಯೂಸ್
14-08-23 06:04 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14: ವಿವಾದಾತ್ಮಕ ಹೇಳಿಕೆಯಿಂದಾಗಿ ಜಾತಿ ನಿಂದನೆ ಆರೋಪದ ಪ್ರಕರಣ ಎದುರಿಸುತ್ತಿರುವ ಚಿತ್ರನಟ ಉಪೇಂದ್ರಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿ ಚಿತ್ರನಟ ಉಪೇಂದ್ರ ವಿರುದ್ಧ ದಾಖಲಾಗಿರುವ ಎಫ್ಐಆರ್ ಮತ್ತು ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಎಫ್ಐಆರ್ ರದ್ದುಪಡಿಸುವಂತೆ ಕೋರಿ ಉಪೇಂದ್ರ ಅಲಿಯಾಸ್ ಬಿ.ಎಂ. ಉಪೇಂದ್ರ ಕುಮಾರ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಉಪೇಂದ್ರ ಪರ ಹಿರಿಯ ವಕೀಲ ಉದಯ ಹೊಳ್ಳ ಅವರು, ಅರ್ಜಿದಾರರು ಗಾದೆ ಮಾತನ್ನು ಮಾತ್ರವೇ ಉಲ್ಲೇಖಿಸಿದ್ದಾರೆ. ಮಾತಿನ ಹಿಂದೆ ಬೇರೆ ಯಾವುದೇ ದುರುದ್ದೇಶ ಇರಲಿಲ್ಲ. ಆದ್ದರಿಂದ, ಎಫ್ಐಆರ್ ರದ್ದುಪಡಿಸಬೇಕು ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಬರಿ ಇದೊಂದೇ ಗಾದೆ ಮಾತು ಪ್ರಯೋಗಿಸಿದರೋ ಹೇಗೆ ಎಂಬುದನ್ನು ಕೇಳಿ ಎರಡೂ ಕಡೆಯ ವಕೀಲರಿಂದ ಪ್ರಕರಣದ ವಿವರ ಕೇಳಿದರು. ನಂತರ ಅರ್ಜಿದಾರರ ಮನವಿಯನ್ನು ಪುರಸ್ಕರಿಸಿ ಎಫ್ ಐ ಆರ್ ಗೆ ಮಧ್ಯಂತರ ತಡೆ ನೀಡಿ ಆದೇಶ ಮಾಡಿದ್ದಾರೆ. ಇದರೊಂದಿಗೆ ಬಂಧನ ಭೀತಿ ಎದುರಿಸುತ್ತಿದ್ದ ಉಪೇಂದ್ರ ನಿಟ್ಟುಸಿರು ಬಿಟ್ಟಿದ್ದಾರೆ. ಉಪೇಂದ್ರ ವಿರುದ್ಧ ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಮತ್ತು ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮೊದಲ ದೂರನ್ನು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂದನ್ ಎಂಬವರು ನೀಡಿದ್ರೆ, ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಭೈರಪ್ಪ ಹರೀಶ್ ಕುಮಾರ್ ಎರಡನೇ ದೂರು ನೀಡಿದ್ದರು. ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಉಪೇಂದ್ರ ಅವರಿಗೆ ನೋಟಿಸ್ ನೀಡಿದ್ದರು. ಇದಲ್ಲದೆ, ವಿವಿಪುರಂ ವಿಭಾಗದ ಎಸಿಪಿ ನಾಗರಾಜ್ ನೇತೃತ್ವದ ಪೊಲೀಸರ ತಂಡವು ಕತ್ರಿಗುಪ್ಪೆಯಲ್ಲಿ ಉಪೇಂದ್ರ ನಿವಾಸಕ್ಕೆ ತೆರಳಿ ಸ್ಥಳ ಮಹಜರು ನಡೆಸಿದ್ದರು.
ಫೇಸ್ಬುಕ್ ಲೈವ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಉಪೇಂದ್ರ ಅವರು, "ಊರೆಂದರೆ ಹೊಲಗೇರಿ ಕೂಡ ಇರುತ್ತೆ" ಎಂದು ಹೇಳಿದ್ದರು. ತನ್ನ ಊರಿನ ಬಗ್ಗೆ ವಿವರಣೆ ನೀಡುತ್ತಿದ್ದ ಸಂದರ್ಭದಲ್ಲಿ ಈ ರೀತಿಯ ಶಬ್ದಗಳನ್ನು ಬಳಕೆ ಮಾಡಿದ್ದು ದಲಿತರನ್ನು ಅವಮಾನಿಸಿದಂತೆ ಎಂದು ಕೆಲವರು ಆಕ್ಷೇಪಿಸಿದ್ದರು. ದಲಿತ ಸಮುದಾಯದ ಜಾತಿ ಭಾವನೆಗಳಿಗೆ ಘಾಸಿ ಉಂಟು ಮಾಡಿದ್ದಾರೆ. ಒಬ್ಬ ನಟನಾಗಿ ರಾಜ್ಯದಾದ್ಯಂತ ಹೆಸರು ಮಾಡಿರುವ ಉಪೇಂದ್ರ ಎಲ್ಲರಿಗೂ ಮಾದರಿಯಾಗಿ ಇರಬೇಕಿತ್ತು. ನಟನನ್ನು ಅನುಕರಣೆ ಮಾಡುವವರು ಇದನ್ನೇ ಮುಂದುವರೆಸಿದಲ್ಲಿ ಸಾರ್ವಜನಿಕ ಸ್ವಾಸ್ಥ್ಯ ಹಾಳಾಗುವ ಸಾಧ್ಯತೆ ಇರುತ್ತದೆ ಎಂದು ಬೆಂಗಳೂರಿನ ಸಮತಾ ಸೈನಿಕ ದಳದವರು ಹಿಂದುಳಿದ ವರ್ಗದ ಸಮಾಜ ಕಲ್ಯಾಣ ಇಲಾಖೆಗೆ ದೂರು ನೀಡಿದ್ದರು.
After two First Information Reports (FIRs) were filed against Kannada actor Upendra for alleged derogatory comments about Dalits during a Facebook Live session, Karnataka police visited his residence, issuing an investigative notice. However, Upendra obtained a temporary stay from the Karnataka High Court regarding the investigation.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm