ಬ್ರೇಕಿಂಗ್ ನ್ಯೂಸ್
16-08-23 09:54 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ಕಟ್ಟಡವೊಂದಕ್ಕೆ 23 ಕಿಲೋವಾಟ್ ಸಾಮರ್ಥ್ಯದ ವಿದ್ಯುತ್ ಸಂಪರ್ಕಕ್ಕೆ ಮಂಜೂರಾತಿ ನೀಡಲು 3.5 ಲಕ್ಷ ಲಂಚ ಪಡೆಯುತ್ತಿದ್ದ ಬೆಸ್ಕಾಂ ಎಸ್–1 ಜಯನಗರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಧನಂಜಯ ಮತ್ತು ಅವರ ಪರವಾಗಿ ಹಣ ಪಡೆದ ಸೈಯದ್ ನಿಜಾಮ್ ಎಂಬ ಖಾಸಗಿ ವ್ಯಕ್ತಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಕಟ್ಟಡವೊಂದಕ್ಕೆ 23 ಕೆವಿ ಸಾಮರ್ಥ್ಯದ ವಿದ್ಯುತ್ ಸಂಪರ್ಕ ಕೋರಿ ಭರತ್ ಕುಮಾರ್ ಎನ್.ಎಂ. ಎಂಬ ಎಲೆಕ್ಟ್ರಿಕ್ ಕಾಮಗಾರಿಗಳ ಗುತ್ತಿಗೆದಾರ ಬೆಸ್ಕಾಂನ ಜಯನಗರ ಉಪ ವಿಭಾಗ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಮಂಜೂರಾತಿ ನೀಡಲು 13 ಲಕ್ಷ ಲಂಚ ನೀಡುವಂತೆ ಧನಂಜಯ ಬೇಡಿಕೆ ಇಟ್ಟಿದ್ದರು. 3.5 ಲಕ್ಷವನ್ನು ಬುಧವಾರವೇ ತಲಪಿಸುವಂತೆ ಅರ್ಜಿದಾರರಿಗೆ ಸೂಚಿಸಿದ್ದರು.

ಈ ಕುರಿತು ಭರತ್ ಕುಮಾರ್ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರಿಗೆ ದೂರು ನೀಡಿದ್ದರು. ಬೆಸ್ಕಾಂನ ಜಯನಗರ ಉಪ ವಿಭಾಗದ ಕಚೇರಿಯಲ್ಲಿ ದೂರುದಾರರು ಲಂಚದ ಹಣದೊಂದಿಗೆ ಧನಂಜಯ ಅವರನ್ನು ಬುಧವಾರ ಸಂಜೆ 4 ಗಂಟೆಗೆ ಭೇಟಿಮಾಡಿದ್ದರು. ಲಂಚದ ಹಣವನ್ನು ಅಲ್ಲಿಯೇ ಇದ್ದ ಸೈಯದ್ ನಿಜಾಮ್ ಅವರಿಗೆ ತಲುಪಿಸುವಂತೆ ಅಧಿಕಾರಿ ಸೂಚಿಸಿದರು. ಅದರಂತೆಯೇ ಭರತ್ ಕುಮಾರ್ ಹಣವನ್ನು ನೀಡಿದರು. ತಕ್ಷಣ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಧನಂಜಯ ಮತ್ತು ಸೈಯದ್ ನಿಜಾಮ್ ಇಬ್ಬರನ್ನೂ ಬಂಧಿಸಿದ್ದಾರೆ.
ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಎಸ್ಪಿ ಕೆ.ವಿ. ಅಶೋಕ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ಗಳಾದ ವೆಂಕಟೇಶ್ ಕೆ., ವಿಜಯಕೃಷ್ಣ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
An Assistant Executive Engineer of BESCOM and a middleman were arrested by Lokayukta officials on Wednesday while they were accepting bribes from an electricity contractor. The AEE, Dhananjaya, and the middleman, Sayid Nizam, were arrested from the BESCOM Sub division office in Jayanagar.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm