ಬ್ರೇಕಿಂಗ್ ನ್ಯೂಸ್
17-08-23 10:56 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಟೊಮೆಟೊ, ತರಕಾರಿ ಬೆಲೆ ಏರಿಕೆ ಬಿಸಿಯಿಂದ ಹೊರಬಾರದ ಜನರಿಗೆ ಈಗ ಬಾಳೆಹಣ್ಣಿನ ಬೆಲೆ ಹೆಚ್ಚಳ ಮತ್ತೊಂದು ಆಘಾತ ಉಂಟುಮಾಡಿದೆ.
ಶ್ರಾವಣ ಮಾಸದಲ್ಲಿ ಹಬ್ಬಗಳ ಸೀಸನ್ ಆರಂಭವಾಗುತ್ತಿದ್ದಂತೆಯೇ ಬಾಳೆ ಬೆಲೆ ಸದ್ದಿಲ್ಲದೇ ಹೆಚ್ಚಾಗಿದೆ. ಬಹುಮುಖ್ಯ ಬೇಡಿಕೆಯುಳ್ಳ ಈ ಹಣ್ಣಿನ ಬೆಲೆ ಶತಕ ದಾಟಿರುವುದು ಗ್ರಾಹಕರಿಗೆ ತಲೆಬಿಸಿ ತರಿಸಿದೆ. ಬೇಡಿಕೆ ಹಾಗೂ ಪೂರೈಕೆ ವ್ಯತ್ಯಾಸದಿಂದ ಈ ವಾರ ನಗರದಲ್ಲಿ ಒಂದು ಕೆ.ಜಿ. ಏಲಕ್ಕಿ ಬಾಳೆಹಣ್ಣಿನ ದರ 100 ರಿಂದ 140 ರೂ ಆಗಿದೆ.
ಬೆಂಗಳೂರು ಎಪಿಎಂಸಿ ಘಟಕಕ್ಕೆ ತುಮಕೂರು, ರಾಮನಗರ ಚಿಕ್ಕಬಳ್ಳಾಪುರ ಹಾಗು ಬೆಂಗಳೂರು ಗ್ರಾಮಾಂತರದಿಂದ ಬಾಳೆಹಣ್ಣು ಪೂರೈಕೆಯಾಗುತ್ತದೆ. ಹಾಗೆಯೇ ತಮಿಳುನಾಡಿಗೆ ಹೊಸೂರು ಹಾಗೂ ಕೃಷ್ಣಗಿರಿಯಿಂದ ಹಣ್ಣುಗಳು ಪೂರೈಕೆಯಾಗುತ್ತವೆ. ಹೊರರಾಜ್ಯಗಳಿಂದ ಪೂರೈಕೆ ಕಡಿಮೆ ಇರುವುದರಿಂದ ಏಲಕ್ಕಿ ಬಾಳೆಯ ಸಗಟು ಮಾರಾಟ ಬೆಲೆ ಪ್ರತಿ ಕೆಜಿಗೆ 80 ರೂ ಇದ್ದರೆ ಪಚ್ಚಬಾಳೆ 20 ರೂ ಇದೆ. ಆದರೆ ಸಾಗಾಣಿಕೆ ವೆಚ್ಚವನ್ನೂ ಸೇರಿಸಿ ಚಿಲ್ಲರೆ ಮಾರಾಟ ಬೆಲೆ 100 ರಿಂದ 140 ರೂ ತಲುಪಿದೆ.
ಕೊಡಗು, ಮೈಸೂರು, ಬೆಂಗಳೂರು ಗ್ರಾಮಾಂತರ ಹತ್ತಿರದಲ್ಲಿಯೇ ಇದ್ದರೂ ಅವರು ಬೆಳೆದಂತಹ ಉತ್ಪನ್ನಗಳು ನಗರ ತಲುಪುತ್ತಿಲ್ಲ. ಸಣ್ಣ ಹಿಡುವಳಿದಾರರು ಸಾಗಾಣಿಕಾ ವಾಹನ ಭರ್ತಿಯಾಗುವವರೆಗೂ ಕಾಯುತ್ತಿಲ್ಲ. ಬೇರೆ ಮಾರ್ಗವಿಲ್ಲದ ಕಾರಣ, ರೈತರು ಗ್ರಾಹಕರನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಓಣಂ, ಗಣೇಶ ಚತುರ್ಥಿ ಸೇರಿದಂತೆ ಹಬ್ಬಗಳು ಸಮೀಪಿಸುತ್ತಿದ್ದು ಬೇಡಿಕೆಯಲ್ಲಿಯೂ ಹೆಚ್ಚಳ ಕಂಡುಬರುತ್ತಿದೆ. ಬೆಲೆ ಏರಿಕೆಯ ಹಿಂದೆ ಮಧ್ಯವರ್ತಿಗಳ ಕೈವಾಡವಿದೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಹೆಚ್ಚಾಗಿ ತಮಿಳುನಾಡಿನಿಂದ ಪೂರೈಕೆಯಗುತ್ತಿದ್ದ ಏಲಕ್ಕಿ ಬಾಳೆ, ಪಚ್ಚ ಬಾಳೆ ಹಣ್ಣಿಗೆ ಬೇಡಿಕೆಯಿದ್ದು, ಈ ಬಾರಿ ತಮಿಳುನಾಡಿನಿಂದ ಪೂರೈಕೆಯಾಗುವ ಪ್ರಮಾಣದಲ್ಲಿ ಗಣನೀಯ ಕುಸಿತ ಕಂಡುಬಂದಿರುವುದು ಬೆಲೆ ಏರಿಕೆಗೆ ಕಾರಣ. ಈ ಮೊದಲು ಮಾರುಕಟ್ಟೆಗೆ ತಮಿಳುನಾಡಿನಿಂದ 1,500 ಕ್ವಿಂಟಲ್ ಬಾಳೆಹಣ್ಣುಗಳು ಪೂರೈಕೆಯಾಗುತ್ತಿತ್ತು. ಆದರೆ ಈ ಬಾರಿ ಕೇವಲ 1,000 ಕ್ವಿಂಟಲ್ ಮಾತ್ರ ಪೂರೈಕೆಯಾಗಿದೆ ಎಂದು ಬೆಂಗಳೂರು ಎಪಿಎಂಸಿ ಕಾರ್ಯದರ್ಶಿ ರಾಜಣ್ಣ ತಿಳಿಸಿದರು.
Bannana price hiked to 140 per kilo in Karnataka after tomato price.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm