ಬ್ರೇಕಿಂಗ್ ನ್ಯೂಸ್
17-08-23 10:56 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಟೊಮೆಟೊ, ತರಕಾರಿ ಬೆಲೆ ಏರಿಕೆ ಬಿಸಿಯಿಂದ ಹೊರಬಾರದ ಜನರಿಗೆ ಈಗ ಬಾಳೆಹಣ್ಣಿನ ಬೆಲೆ ಹೆಚ್ಚಳ ಮತ್ತೊಂದು ಆಘಾತ ಉಂಟುಮಾಡಿದೆ.
ಶ್ರಾವಣ ಮಾಸದಲ್ಲಿ ಹಬ್ಬಗಳ ಸೀಸನ್ ಆರಂಭವಾಗುತ್ತಿದ್ದಂತೆಯೇ ಬಾಳೆ ಬೆಲೆ ಸದ್ದಿಲ್ಲದೇ ಹೆಚ್ಚಾಗಿದೆ. ಬಹುಮುಖ್ಯ ಬೇಡಿಕೆಯುಳ್ಳ ಈ ಹಣ್ಣಿನ ಬೆಲೆ ಶತಕ ದಾಟಿರುವುದು ಗ್ರಾಹಕರಿಗೆ ತಲೆಬಿಸಿ ತರಿಸಿದೆ. ಬೇಡಿಕೆ ಹಾಗೂ ಪೂರೈಕೆ ವ್ಯತ್ಯಾಸದಿಂದ ಈ ವಾರ ನಗರದಲ್ಲಿ ಒಂದು ಕೆ.ಜಿ. ಏಲಕ್ಕಿ ಬಾಳೆಹಣ್ಣಿನ ದರ 100 ರಿಂದ 140 ರೂ ಆಗಿದೆ.
ಬೆಂಗಳೂರು ಎಪಿಎಂಸಿ ಘಟಕಕ್ಕೆ ತುಮಕೂರು, ರಾಮನಗರ ಚಿಕ್ಕಬಳ್ಳಾಪುರ ಹಾಗು ಬೆಂಗಳೂರು ಗ್ರಾಮಾಂತರದಿಂದ ಬಾಳೆಹಣ್ಣು ಪೂರೈಕೆಯಾಗುತ್ತದೆ. ಹಾಗೆಯೇ ತಮಿಳುನಾಡಿಗೆ ಹೊಸೂರು ಹಾಗೂ ಕೃಷ್ಣಗಿರಿಯಿಂದ ಹಣ್ಣುಗಳು ಪೂರೈಕೆಯಾಗುತ್ತವೆ. ಹೊರರಾಜ್ಯಗಳಿಂದ ಪೂರೈಕೆ ಕಡಿಮೆ ಇರುವುದರಿಂದ ಏಲಕ್ಕಿ ಬಾಳೆಯ ಸಗಟು ಮಾರಾಟ ಬೆಲೆ ಪ್ರತಿ ಕೆಜಿಗೆ 80 ರೂ ಇದ್ದರೆ ಪಚ್ಚಬಾಳೆ 20 ರೂ ಇದೆ. ಆದರೆ ಸಾಗಾಣಿಕೆ ವೆಚ್ಚವನ್ನೂ ಸೇರಿಸಿ ಚಿಲ್ಲರೆ ಮಾರಾಟ ಬೆಲೆ 100 ರಿಂದ 140 ರೂ ತಲುಪಿದೆ.
ಕೊಡಗು, ಮೈಸೂರು, ಬೆಂಗಳೂರು ಗ್ರಾಮಾಂತರ ಹತ್ತಿರದಲ್ಲಿಯೇ ಇದ್ದರೂ ಅವರು ಬೆಳೆದಂತಹ ಉತ್ಪನ್ನಗಳು ನಗರ ತಲುಪುತ್ತಿಲ್ಲ. ಸಣ್ಣ ಹಿಡುವಳಿದಾರರು ಸಾಗಾಣಿಕಾ ವಾಹನ ಭರ್ತಿಯಾಗುವವರೆಗೂ ಕಾಯುತ್ತಿಲ್ಲ. ಬೇರೆ ಮಾರ್ಗವಿಲ್ಲದ ಕಾರಣ, ರೈತರು ಗ್ರಾಹಕರನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಓಣಂ, ಗಣೇಶ ಚತುರ್ಥಿ ಸೇರಿದಂತೆ ಹಬ್ಬಗಳು ಸಮೀಪಿಸುತ್ತಿದ್ದು ಬೇಡಿಕೆಯಲ್ಲಿಯೂ ಹೆಚ್ಚಳ ಕಂಡುಬರುತ್ತಿದೆ. ಬೆಲೆ ಏರಿಕೆಯ ಹಿಂದೆ ಮಧ್ಯವರ್ತಿಗಳ ಕೈವಾಡವಿದೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಹೆಚ್ಚಾಗಿ ತಮಿಳುನಾಡಿನಿಂದ ಪೂರೈಕೆಯಗುತ್ತಿದ್ದ ಏಲಕ್ಕಿ ಬಾಳೆ, ಪಚ್ಚ ಬಾಳೆ ಹಣ್ಣಿಗೆ ಬೇಡಿಕೆಯಿದ್ದು, ಈ ಬಾರಿ ತಮಿಳುನಾಡಿನಿಂದ ಪೂರೈಕೆಯಾಗುವ ಪ್ರಮಾಣದಲ್ಲಿ ಗಣನೀಯ ಕುಸಿತ ಕಂಡುಬಂದಿರುವುದು ಬೆಲೆ ಏರಿಕೆಗೆ ಕಾರಣ. ಈ ಮೊದಲು ಮಾರುಕಟ್ಟೆಗೆ ತಮಿಳುನಾಡಿನಿಂದ 1,500 ಕ್ವಿಂಟಲ್ ಬಾಳೆಹಣ್ಣುಗಳು ಪೂರೈಕೆಯಾಗುತ್ತಿತ್ತು. ಆದರೆ ಈ ಬಾರಿ ಕೇವಲ 1,000 ಕ್ವಿಂಟಲ್ ಮಾತ್ರ ಪೂರೈಕೆಯಾಗಿದೆ ಎಂದು ಬೆಂಗಳೂರು ಎಪಿಎಂಸಿ ಕಾರ್ಯದರ್ಶಿ ರಾಜಣ್ಣ ತಿಳಿಸಿದರು.
Bannana price hiked to 140 per kilo in Karnataka after tomato price.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm