ಬ್ರೇಕಿಂಗ್ ನ್ಯೂಸ್
17-08-23 10:56 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಟೊಮೆಟೊ, ತರಕಾರಿ ಬೆಲೆ ಏರಿಕೆ ಬಿಸಿಯಿಂದ ಹೊರಬಾರದ ಜನರಿಗೆ ಈಗ ಬಾಳೆಹಣ್ಣಿನ ಬೆಲೆ ಹೆಚ್ಚಳ ಮತ್ತೊಂದು ಆಘಾತ ಉಂಟುಮಾಡಿದೆ.
ಶ್ರಾವಣ ಮಾಸದಲ್ಲಿ ಹಬ್ಬಗಳ ಸೀಸನ್ ಆರಂಭವಾಗುತ್ತಿದ್ದಂತೆಯೇ ಬಾಳೆ ಬೆಲೆ ಸದ್ದಿಲ್ಲದೇ ಹೆಚ್ಚಾಗಿದೆ. ಬಹುಮುಖ್ಯ ಬೇಡಿಕೆಯುಳ್ಳ ಈ ಹಣ್ಣಿನ ಬೆಲೆ ಶತಕ ದಾಟಿರುವುದು ಗ್ರಾಹಕರಿಗೆ ತಲೆಬಿಸಿ ತರಿಸಿದೆ. ಬೇಡಿಕೆ ಹಾಗೂ ಪೂರೈಕೆ ವ್ಯತ್ಯಾಸದಿಂದ ಈ ವಾರ ನಗರದಲ್ಲಿ ಒಂದು ಕೆ.ಜಿ. ಏಲಕ್ಕಿ ಬಾಳೆಹಣ್ಣಿನ ದರ 100 ರಿಂದ 140 ರೂ ಆಗಿದೆ.
ಬೆಂಗಳೂರು ಎಪಿಎಂಸಿ ಘಟಕಕ್ಕೆ ತುಮಕೂರು, ರಾಮನಗರ ಚಿಕ್ಕಬಳ್ಳಾಪುರ ಹಾಗು ಬೆಂಗಳೂರು ಗ್ರಾಮಾಂತರದಿಂದ ಬಾಳೆಹಣ್ಣು ಪೂರೈಕೆಯಾಗುತ್ತದೆ. ಹಾಗೆಯೇ ತಮಿಳುನಾಡಿಗೆ ಹೊಸೂರು ಹಾಗೂ ಕೃಷ್ಣಗಿರಿಯಿಂದ ಹಣ್ಣುಗಳು ಪೂರೈಕೆಯಾಗುತ್ತವೆ. ಹೊರರಾಜ್ಯಗಳಿಂದ ಪೂರೈಕೆ ಕಡಿಮೆ ಇರುವುದರಿಂದ ಏಲಕ್ಕಿ ಬಾಳೆಯ ಸಗಟು ಮಾರಾಟ ಬೆಲೆ ಪ್ರತಿ ಕೆಜಿಗೆ 80 ರೂ ಇದ್ದರೆ ಪಚ್ಚಬಾಳೆ 20 ರೂ ಇದೆ. ಆದರೆ ಸಾಗಾಣಿಕೆ ವೆಚ್ಚವನ್ನೂ ಸೇರಿಸಿ ಚಿಲ್ಲರೆ ಮಾರಾಟ ಬೆಲೆ 100 ರಿಂದ 140 ರೂ ತಲುಪಿದೆ.
ಕೊಡಗು, ಮೈಸೂರು, ಬೆಂಗಳೂರು ಗ್ರಾಮಾಂತರ ಹತ್ತಿರದಲ್ಲಿಯೇ ಇದ್ದರೂ ಅವರು ಬೆಳೆದಂತಹ ಉತ್ಪನ್ನಗಳು ನಗರ ತಲುಪುತ್ತಿಲ್ಲ. ಸಣ್ಣ ಹಿಡುವಳಿದಾರರು ಸಾಗಾಣಿಕಾ ವಾಹನ ಭರ್ತಿಯಾಗುವವರೆಗೂ ಕಾಯುತ್ತಿಲ್ಲ. ಬೇರೆ ಮಾರ್ಗವಿಲ್ಲದ ಕಾರಣ, ರೈತರು ಗ್ರಾಹಕರನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಓಣಂ, ಗಣೇಶ ಚತುರ್ಥಿ ಸೇರಿದಂತೆ ಹಬ್ಬಗಳು ಸಮೀಪಿಸುತ್ತಿದ್ದು ಬೇಡಿಕೆಯಲ್ಲಿಯೂ ಹೆಚ್ಚಳ ಕಂಡುಬರುತ್ತಿದೆ. ಬೆಲೆ ಏರಿಕೆಯ ಹಿಂದೆ ಮಧ್ಯವರ್ತಿಗಳ ಕೈವಾಡವಿದೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಹೆಚ್ಚಾಗಿ ತಮಿಳುನಾಡಿನಿಂದ ಪೂರೈಕೆಯಗುತ್ತಿದ್ದ ಏಲಕ್ಕಿ ಬಾಳೆ, ಪಚ್ಚ ಬಾಳೆ ಹಣ್ಣಿಗೆ ಬೇಡಿಕೆಯಿದ್ದು, ಈ ಬಾರಿ ತಮಿಳುನಾಡಿನಿಂದ ಪೂರೈಕೆಯಾಗುವ ಪ್ರಮಾಣದಲ್ಲಿ ಗಣನೀಯ ಕುಸಿತ ಕಂಡುಬಂದಿರುವುದು ಬೆಲೆ ಏರಿಕೆಗೆ ಕಾರಣ. ಈ ಮೊದಲು ಮಾರುಕಟ್ಟೆಗೆ ತಮಿಳುನಾಡಿನಿಂದ 1,500 ಕ್ವಿಂಟಲ್ ಬಾಳೆಹಣ್ಣುಗಳು ಪೂರೈಕೆಯಾಗುತ್ತಿತ್ತು. ಆದರೆ ಈ ಬಾರಿ ಕೇವಲ 1,000 ಕ್ವಿಂಟಲ್ ಮಾತ್ರ ಪೂರೈಕೆಯಾಗಿದೆ ಎಂದು ಬೆಂಗಳೂರು ಎಪಿಎಂಸಿ ಕಾರ್ಯದರ್ಶಿ ರಾಜಣ್ಣ ತಿಳಿಸಿದರು.
Bannana price hiked to 140 per kilo in Karnataka after tomato price.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am