ಬ್ರೇಕಿಂಗ್ ನ್ಯೂಸ್
19-08-23 07:38 pm HK News Desk ಕರ್ನಾಟಕ
ದಾವಣಗೆರೆ, ಆಗಸ್ಟ್ 19: ದಾವಣೆಗೆರೆ ಮೂಲದ ಒಂದೇ ಕುಟುಂಬದ ಮೂವರು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ ಎಂಬ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಮೃತರನ್ನು ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಹಾಲೆಕಲ್ಲು ಗ್ರಾಮದ ಯೋಗೇಶ್ ಹೊನ್ನಾಳ(37), ಅವರ ಪತ್ನಿ ಪ್ರತಿಭಾ ಹೊನ್ನಾಳ(35), ಅವರ ಪುತ್ರ ಯಶ್ ಹೊನ್ನಾಳ(06) ಎಂದು ಗುರುತಿಸಲಾಗಿದೆ.
ಸಾವಿನ ಸುತ್ತ ಅನುಮಾನದ ಹುತ್ತ ;
ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಯೋಗೇಶ್-ಪ್ರತಿಭಾ ದಂಪತಿಗೆ 9 ವರ್ಷಗಳ ಹಿಂದೆ ಮದುವೆ ಮಾಡಲಾಗಿತ್ತು. ದಂಪತಿಗೆ ಆರು ವರ್ಷದ ಪುತ್ರನಿದ್ದಾನೆ. ಮದುವೆಯ ನಂತರ ದಂಪತಿಗಳು ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದಲ್ಲಿರುವ ಬಾಲ್ಟಿಮೋರ್ ಎಂಬ ಪ್ರದೇಶದಲ್ಲಿ ನೆಲೆಸಿದ್ದರು. ಎರಡು ದಿನಗಳಿಂದ ಮನೆಯಿಂದ ಯಾರು ಹೊರಬಾರದೆ ಇದ್ದುದ್ದನ್ನು ಗಮನಿಸಿದ ನೆರೆಹೊರೆಯವರು ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ದಂಪತಿಗಳ ಯೋಗಕ್ಷೇಮ ವಿಚಾರಿಸಲೆಂದು ಅವರ ಮನೆಯ ದೂರವಾಣಿ ಸಂಖ್ಯೆಗೆ ಕರೆ ಮಾಡಿದ್ದು, ಯಾರು ಕರೆಯನ್ನು ಸ್ವೀಕರಿಸದೆ ಇದ್ದಾಗ ಅನುಮಾನಗೊಂಡು ಮನೆಯ ಬಳಿ ಬಂದು ಪರಿಶೀಲನೆ ನಡೆಸಿದಾಗ ಮೂವರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಕೂಡಲೇ ಅಧಿಕಾರಿಗಳು ಬೆಂಗಳೂರಿನಲ್ಲಿ ವಾಸವಿರುವ ಯೋಗೇಶ್ ಅವರ ಸಹೋದರನಿಗೆ ವಿಷಯವನ್ನು ತಿಳಿಸಿದ್ದಾರೆ.
ಮೂವರ ಸಾವು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ತನಿಖೆ ನಡೆಸಿ ಸತ್ಯಾಸತ್ಯತೆ ತಿಳಿಸುವಂತೆ ಹಾಗೂ ಮೃತದೇಹಗಳನ್ನು ಆದಷ್ಟು ಬೇಗ ಭಾರತಕ್ಕೆ ತರಿಸಿಕೊಡುವಂತೆ ಯೋಗೇಶ್ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Davanagere Techie couple along with six year old son found dead at America.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am