ಬ್ರೇಕಿಂಗ್ ನ್ಯೂಸ್
20-08-23 09:45 pm HK News Desk ಕರ್ನಾಟಕ
ದಾವಣಗೆರೆ, ಆಗಸ್ಟ್ 20: ರಾಜ್ಯದ ದಾವಣಗೆರೆ ಮೂಲದ ಯೋಗೇಶ್ ಕುಟುಂಬದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಯೋಗೇಶ್ ಕುಟುಂಬ ಅಮೆರಿಕಾದಲ್ಲಿ ವಾಸವಾಗಿತ್ತು. ಮೂವರ ಶವ ಮನೆಯಲ್ಲಿ ಪತ್ತೆಯಾಗಿದ್ದು, ಆರಂಭದಲ್ಲಿ ಆತ್ಮಹತ್ಯೆ ಎಂದು ವರದಿಯಾಗಿತ್ತು. ಇದೀಗ ಪತ್ನಿ ಪ್ರತಿಭಾ, ಮಗು ಯಶ್ಗೆ ಗುಂಡಕ್ಕಿ ಹತ್ಯೆ ಮಾಡಿ ಕೊನೆಗೆ ಯೋಗೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಬಾಲ್ಟಿಮೋರ್ ಪೊಲೀಸರು ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ ಕೊಲೆ ಮಾಡಿ ಆತ್ಮಹತ್ಯೆ ಯಾಕೆ ಮಾಡಿಕೊಂಡಿದ್ದು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆಗಸ್ಟ್ 18 ರಂದು ಪಕ್ಕದ ಮನೆಯವರ ಮಾಹಿತಿ ಮೇರೆ ಯೋಗೇಶ್ ಮನೆಗೆ ಪೊಲೀಸರು ಬಂದಿದ್ದರು. ಒಳಗಿನಿಂದ ಯಾರೂ ಪ್ರತಿಕ್ರಿಯೆ ನೀಡದ ಹಿನ್ನೆಲೆ ಬಾಗಿಲು ಒಡೆದು ನೋಡಿದಾಗ ಯೋಗೇಶ್, ಪ್ರತಿಭಾ ಮತ್ತು ಯಶ್ ಮೃತದೇಹ ಪತ್ತೆಯಾಗಿತ್ತು.
ಡೆತ್ ನೋಟ್ ಪತ್ತೆ ?
ಮೃತಪಟ್ಟ ಜಾಗದಲ್ಲಿ ಡೆತ್ ನೋಟ್ ಪತ್ತೆಯಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಬಾಲ್ಟಿಮೋರ್ ಪೊಲೀಸರು ಸ್ಪಷ್ಟ ಮಾಹಿತಿ ನೀಡಿಲ್ಲ ಎನ್ನಲಾಗಿದೆ. ಸಾವಿಗೆ ನಿಖರ ಕಾರಣ ಮತ್ತು ಮೃತದೇಹ ತಾಯ್ನಾಡಿಗೆ ತರೆಸುವಂತೆ ಯೋಗೇಶ್ ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಕಣ್ಣೀರಿಡುತ್ತಾ ಸರ್ಕಾರಕ್ಕೆ ಮನವಿ ಮಾಡಿರುವ ಮೃತ ಯೋಗೇಶ್ ತಾಯಿ ಶೋಭಾ, ನಮ್ಮ ಬಳಿ ಮಗ ಮತ್ತು ಸೊಸೆ ಯಾವುದೇ ತೊಂದರೆ ಆಗಿರುವ ಬಗ್ಗೆ ಹೇಳಿಕೊಂಡಿಲ್ಲ. ಮದುವೆಯಾಗಿ 9 ವರ್ಷ ಆಗಿದೆ. ಮದುವೆಯಾದ ಸಮಯದಿಂದ ಅಲ್ಲಿಯೇ ಇದ್ದಾರೆ. ನಮ್ಮ ಸೊಸೆ ಬೆಂಗಳೂರು ಮೂಲದವರು, ಯಾವಾಗ? ಏನಾಗಿದೆ ಅಂತ ನಮಗೆ ಮಾಹಿತಿ ಇಲ್ಲ ಎಂದು ಕಣ್ಣೀರಿಟ್ಟಿದ್ದಾರೆ.
Couple from Davangere, son, found dead at home in America, twist of double murder and suicide. Based on the initial investigation, the incident is believed to be a double murder-suicide that Nagarajappa committed," Baltimore County Police spokesperson Anthony Shelton was quoted as saying by The Baltimore Sun newspaper.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm