ಬ್ರೇಕಿಂಗ್ ನ್ಯೂಸ್
26-08-23 09:07 pm HK News Desk ಕರ್ನಾಟಕ
ಬೆಂಗಳೂರು, ಆಗಸ್ಟ್ 26; ಬಿಜೆಪಿ ಆಡಳಿತದಲ್ಲಿ ಗುತ್ತಿಗೆದಾರರು ಮಾಡಿದ್ದ 40 ಪರ್ಸೆಂಟ್ ಲಂಚದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸರ್ಕಾರ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿದೆ.
ಈ ಹಿಂದೆ ಇದೇ ವಿಷಯವಾಗಿ ತನಿಖೆ ನಡೆಸಲು ವಿಶೇಷ ತನಿಖಾ ಸಮಿತಿ ರಚಿಸಿತ್ತು. ಈಗ ಆ ಸಮಿತಿ ರದ್ದುಪಡಿಸಿ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ತನಿಖೆಯನ್ನು ನಡೆಸಲು ವಿಚಾರಣಾ ಆಯೋಗ ರಚಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ನಾಗಮೋಹನದಾಸ್ ಅವರ ನೇತೃತ್ವದಲ್ಲಿ ವಿಚಾರಣಾ ಆಯೋಗ ನೇಮಿಸಿದೆ. ತನಿಖೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸರ್ಕಾರ ಅಪೇಕ್ಷಿಸಿದೆ.
ಕರ್ನಾಟಕ ಸ್ಟೇಟ್ ಕಂಟ್ರ್ಯಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಡಿ.ಕೆಂಪಣ್ಣ ಅವರು ರಾಜ್ಯದಲ್ಲಿ ಪ್ರಮುಖ ಕಾಮಗಾರಿಗಳನ್ನು ನಡೆಸುವ ಇಲಾಖೆಗಳಲ್ಲಿ ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮೀಷನ್ ಕೇಳುತ್ತಿರುವ ಕುರಿತು ಪ್ರಧಾನ ಮಂತ್ರಿ ಹಾಗೂ ನಿಕಟ ಪೂರ್ವ ಮುಖ್ಯಮಂತ್ರಿಗೆ ಪತ್ರ ಬರೆದು ತನಿಖೆಗೆ ಆಗ್ರಹಿಸಿದ್ದರು. ಇದು ರಾಷ್ಟ್ರಾದ್ಯಂತ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು.
ಇದುವರೆಗೆ ಈ ಗಂಭೀರ ಆರೋಪಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ತನಿಖೆ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ, ಜಲಸಂಪನ್ಮೂಲ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಸಣ್ಣ ನೀರಾವರಿ ಇಲಾಖೆಗಳಲ್ಲಿ ನಡೆಸುವ ಟೆಂಡರ್ ಪ್ರಕ್ರಿಯೆ, ಪ್ಯಾಕೇಜ್ ಪದ್ಧತಿ, ಪುನರ್ ಅಂದಾಜು, ಬಾಕಿ ಮೊತ್ತ ಬಿಡುಗಡೆ ಇತ್ಯಾದಿ ವಿಷಯಗಳಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಕುರಿತು ತನಿಖೆಯ ಅಗತ್ಯವಿರುವುದನ್ನು ಮನಗಂಡು ಸರ್ಕಾರ ವಿಚಾರಣಾ ಆಯೋಗ ರಚಿಸಿದೆ.
Over a year after the “40 per cent commission” row erupted in Karnataka, the Congress-led state government, which came to power in May this year, has order a judicial probe into the matter.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am