ಬ್ರೇಕಿಂಗ್ ನ್ಯೂಸ್
26-08-23 09:07 pm HK News Desk ಕರ್ನಾಟಕ
ಬೆಂಗಳೂರು, ಆಗಸ್ಟ್ 26; ಬಿಜೆಪಿ ಆಡಳಿತದಲ್ಲಿ ಗುತ್ತಿಗೆದಾರರು ಮಾಡಿದ್ದ 40 ಪರ್ಸೆಂಟ್ ಲಂಚದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸರ್ಕಾರ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿದೆ.
ಈ ಹಿಂದೆ ಇದೇ ವಿಷಯವಾಗಿ ತನಿಖೆ ನಡೆಸಲು ವಿಶೇಷ ತನಿಖಾ ಸಮಿತಿ ರಚಿಸಿತ್ತು. ಈಗ ಆ ಸಮಿತಿ ರದ್ದುಪಡಿಸಿ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ತನಿಖೆಯನ್ನು ನಡೆಸಲು ವಿಚಾರಣಾ ಆಯೋಗ ರಚಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ನಾಗಮೋಹನದಾಸ್ ಅವರ ನೇತೃತ್ವದಲ್ಲಿ ವಿಚಾರಣಾ ಆಯೋಗ ನೇಮಿಸಿದೆ. ತನಿಖೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸರ್ಕಾರ ಅಪೇಕ್ಷಿಸಿದೆ.
ಕರ್ನಾಟಕ ಸ್ಟೇಟ್ ಕಂಟ್ರ್ಯಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಡಿ.ಕೆಂಪಣ್ಣ ಅವರು ರಾಜ್ಯದಲ್ಲಿ ಪ್ರಮುಖ ಕಾಮಗಾರಿಗಳನ್ನು ನಡೆಸುವ ಇಲಾಖೆಗಳಲ್ಲಿ ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮೀಷನ್ ಕೇಳುತ್ತಿರುವ ಕುರಿತು ಪ್ರಧಾನ ಮಂತ್ರಿ ಹಾಗೂ ನಿಕಟ ಪೂರ್ವ ಮುಖ್ಯಮಂತ್ರಿಗೆ ಪತ್ರ ಬರೆದು ತನಿಖೆಗೆ ಆಗ್ರಹಿಸಿದ್ದರು. ಇದು ರಾಷ್ಟ್ರಾದ್ಯಂತ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು.
ಇದುವರೆಗೆ ಈ ಗಂಭೀರ ಆರೋಪಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ತನಿಖೆ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ, ಜಲಸಂಪನ್ಮೂಲ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಸಣ್ಣ ನೀರಾವರಿ ಇಲಾಖೆಗಳಲ್ಲಿ ನಡೆಸುವ ಟೆಂಡರ್ ಪ್ರಕ್ರಿಯೆ, ಪ್ಯಾಕೇಜ್ ಪದ್ಧತಿ, ಪುನರ್ ಅಂದಾಜು, ಬಾಕಿ ಮೊತ್ತ ಬಿಡುಗಡೆ ಇತ್ಯಾದಿ ವಿಷಯಗಳಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಕುರಿತು ತನಿಖೆಯ ಅಗತ್ಯವಿರುವುದನ್ನು ಮನಗಂಡು ಸರ್ಕಾರ ವಿಚಾರಣಾ ಆಯೋಗ ರಚಿಸಿದೆ.
Over a year after the “40 per cent commission” row erupted in Karnataka, the Congress-led state government, which came to power in May this year, has order a judicial probe into the matter.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm