ಬ್ರೇಕಿಂಗ್ ನ್ಯೂಸ್
28-08-23 07:33 pm HK News Desk ಕರ್ನಾಟಕ
ಹಾಸನ, ಆಗಸ್ಟ್ 28: ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣವನ್ನು ಸರಕಾರ ನೇರವಾಗಿ ಮರು ತನಿಖೆ ನಡೆಸುವಂತಿಲ್ಲ. ಆದರೆ ನ್ಯಾಯಾಲಯದಿಂದ ಸರಕಾರಕ್ಕೆ ಸೂಕ್ತ ನಿರ್ದೇಶನ ಬಂದಲ್ಲಿ ಮರು ತನಿಖೆ ಮಾಡಬಹುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಅರಸೀಕೆರೆ ತಾಲೂಕಿನ ಹಾರನಹಳ್ಳಿ ಕೋಡಿ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸೌಜನ್ಯಾ ಕೊಲೆ ಪ್ರಕರಣದಲ್ಲಿ ಸರಕಾರದ ನಿಲುವಿನ ಪ್ರಶ್ನೆ ಬರುವುದಿಲ್ಲ. ಈಗ ಮರು ತನಿಖೆ ಆಗಬೇಕು ಎನ್ನುತ್ತಿರುವವರು ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬೇಕು. ಕೋರ್ಟ್ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಆಧರಿಸಿ ಸರಕಾರ ಕ್ರಮ ಕೈಗೊಳ್ಳುತ್ತದೆ. ಕೋರ್ಟ್ ಮರು ತನಿಖೆ ಮಾಡಿ ಎಂದು ನಿರ್ದೇಶನ ನೀಡಿದರೆ ಮಾತ್ರ ಸರಕಾರ ಮರು ತನಿಖೆ ಮಾಡಬಹುದು. ಅದನ್ನು ಬಿಟ್ಟು ಈಗ ಸರಕಾರ ಏನೂ ಮಾಡಲಾಗದು ಎಂದು ಸ್ಪಷ್ಟಪಡಿಸಿದರು.
ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಸೌಜನ್ಯಾ ಕೊಲೆ ಪ್ರಕರಣದಲ್ಲಿ ಕಾನೂನು ಪ್ರಕಾರ ಏನು ಮಾಡಬೇಕಿತ್ತೋ ಅದನ್ನು ಮಾಡಿ ಆಗಿದೆ. ಮರು ತನಿಖೆ ಮಾಡಬೇಕು ಎನ್ನುವವರು ಕೋರ್ಟ್ಗೆ ಹೋಗಿ ನಿರ್ದೇಶನ ತರಲಿ. ಅದನ್ನು ಬಿಟ್ಟು ಎಸ್ಐಟಿ ತನಿಖೆ ರಾಜ್ಯ ಸರಕಾರದ ಹಂತದಲ್ಲಿ ಸಾಧ್ಯವಿಲ್ಲ ಎಂದರು.
ಸೌಜನ್ಯಾ ಕೊಲೆ ಪ್ರಕರಣ ಸಿಬಿಐ ತನಿಖೆಯಾಗಬೇಕೆಂಬ ಒತ್ತಾಯದ ಹಿನ್ನೆಲೆಯಲ್ಲಿ ಈ ಹಿಂದೆ ಸಿಬಿಐಗೆ ಪ್ರಕರಣವನ್ನು ವಹಿಸಲಾಗಿತ್ತು. ಸಿಬಿಐನವರು ತನಿಖೆ ನಡೆಸಿ ವರದಿ ಕೊಟ್ಟಿದ್ದಾರೆ ಎಂದರು.
Home Minister Parameshwar says for reinvestigation of Sowjanya case let the family go to the court.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am