ಬ್ರೇಕಿಂಗ್ ನ್ಯೂಸ್
29-08-23 03:37 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 29: ಸೂಪರ್ ಸ್ಟಾರ್ ರಜಿನಿಕಾಂತ್ ʼಜೈಲರ್ʼ ಸಿನಿಮಾ ಹಿಟ್ ಆದ ಸಂತಸದಲ್ಲಿದ್ದಾರೆ. ಸಿನಿಮಾ ಥಿಯೇಟರ್ ನಲ್ಲಿ ಇನ್ನು ಕೂಡ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈ ನಡುವೆ ರಜಿನಿಕಾಂತ್ ಬೆಂಗಳೂರಿಗೆ ಭೇಟಿ ನೀಡಿದ್ದಾರೆ.
ಸಿನಿಮಾರಂಗಕ್ಕೆ ಬರುವ ಮುನ್ನ ರಜಿನಿಕಾಂತ್ ಬೆಂಗಳೂರಿನಲ್ಲಿ ಹತ್ತಾರು ವರ್ಷ ನೆಲೆಸಿದ್ದರು. ಬಸ್ ಕಂಡೆಕ್ಟರ್ ಬದುಕನ್ನು ಸಾಗಿಸುತ್ತಿದ್ದರು. ಇಂದಿಗೂ ಅವರು ಕನ್ನಡವನ್ನು ಸೊಗಸಾಗಿ ಮಾತನಾಡುತ್ತಾರೆ. ಕನ್ನಡ ಹಾಗೂ ಅನ್ನ ಕೊಟ್ಟ ಕರ್ನಾಟಕದ ಬಗ್ಗೆ ಅವರಿಗೆ ಇಂದಿಗೂ ಹೆಮ್ಮಯಿದೆ. ಎಷ್ಟೇ ದೊಡ್ಡ ಸೂಪರ್ ಸ್ಟಾರ್ ಆಗಿದ್ದರೂ ಅವರು ಇಂದಿಗೂ ತನ್ನ ಸರಳತನವನ್ನು, ಹಳೆ ದಿನದ ಕಷ್ಟವನ್ನು ಮರೆತಿಲ್ಲ.


ʼಜೈಲರ್ʼ ಸಿನಿಮಾದ ಜನಮನವನ್ನು ಗೆದ್ದಿರುವ ಖುಷಿಯಲ್ಲಿ ರಜಿನಿಕಾಂತ್ ಇದ್ದಾರೆ. ಈ ನಡುವೆ ಮಂಗಳವಾರ ರಜಿನಿಕಾಂತ್ ಕಂಡೆಕ್ಟರ್ ಆಗಿ ಕೆಲಸ ಮಾಡಿದ್ದ ಜಯನಗರ ಡಿಪೋಗೆ ದಿಢೀರ್ ಭೇಟಿ ನೀಡಿದ್ದಾರೆ.
ಜಯನಗರ ಡಿಪೋಗೆ ಭೇಟಿ ನೀಡಿ, ಅಲ್ಲಿನ ಚಾಲಕರು, ಸಿಬ್ಬಂದಿಗಳೊಂದಿಗೆ ಆತ್ಮೀಯ ಕ್ಷಣಗಳನ್ನು ಕಳೆದು, ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ತಲೈವಾ ಭೇಟಿಗೆ ಡಿಪೋ ಚಾಲಕರು ಹಾಗೂ ಸಿಬ್ಬಂದಿಗಳು ಫುಲ್ ಖುಷ್ ಆಗಿದ್ದಾರೆ. ಅವರೊಂದಿಗೆ ಫೋಟೋ, ಸೆಲ್ಫಿಗಳನ್ನು ತೆಗೆದುಕೊಂಡಿದ್ದಾರೆ.



ಇದಾದ ಬಳಿಕ ರಜಿನಿಕಾಂತ್ ಚಾಮರಾಜಪೇಟೆಯ ರಾಯರ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನವನ್ನು ಪಡೆದರು.
ಬಸ್ ಚಾಲಕರು ಹಾಗೂ ಸಿಬ್ಬಂದಿಗಳೊಂದಿಗೆ ಕೂತು ರಜಿನಿಕಾಂತ್ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಸದ್ಯ ಸೂಪರ್ ಸ್ಟಾರ್ ಬೆಂಗಳೂರು ಭೇಟಿಯ ಫೋಟೋ, ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
Superstar Rajinikanth made a surprise visit to a Bengaluru bus depot, located in the southern part of the city on Tuesday. The 72-year-old actor visited a bus depot in the Jayanagar area of the city, much to the surprise of everyone working there.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am