ಬ್ರೇಕಿಂಗ್ ನ್ಯೂಸ್
29-08-23 03:37 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 29: ಸೂಪರ್ ಸ್ಟಾರ್ ರಜಿನಿಕಾಂತ್ ʼಜೈಲರ್ʼ ಸಿನಿಮಾ ಹಿಟ್ ಆದ ಸಂತಸದಲ್ಲಿದ್ದಾರೆ. ಸಿನಿಮಾ ಥಿಯೇಟರ್ ನಲ್ಲಿ ಇನ್ನು ಕೂಡ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈ ನಡುವೆ ರಜಿನಿಕಾಂತ್ ಬೆಂಗಳೂರಿಗೆ ಭೇಟಿ ನೀಡಿದ್ದಾರೆ.
ಸಿನಿಮಾರಂಗಕ್ಕೆ ಬರುವ ಮುನ್ನ ರಜಿನಿಕಾಂತ್ ಬೆಂಗಳೂರಿನಲ್ಲಿ ಹತ್ತಾರು ವರ್ಷ ನೆಲೆಸಿದ್ದರು. ಬಸ್ ಕಂಡೆಕ್ಟರ್ ಬದುಕನ್ನು ಸಾಗಿಸುತ್ತಿದ್ದರು. ಇಂದಿಗೂ ಅವರು ಕನ್ನಡವನ್ನು ಸೊಗಸಾಗಿ ಮಾತನಾಡುತ್ತಾರೆ. ಕನ್ನಡ ಹಾಗೂ ಅನ್ನ ಕೊಟ್ಟ ಕರ್ನಾಟಕದ ಬಗ್ಗೆ ಅವರಿಗೆ ಇಂದಿಗೂ ಹೆಮ್ಮಯಿದೆ. ಎಷ್ಟೇ ದೊಡ್ಡ ಸೂಪರ್ ಸ್ಟಾರ್ ಆಗಿದ್ದರೂ ಅವರು ಇಂದಿಗೂ ತನ್ನ ಸರಳತನವನ್ನು, ಹಳೆ ದಿನದ ಕಷ್ಟವನ್ನು ಮರೆತಿಲ್ಲ.


ʼಜೈಲರ್ʼ ಸಿನಿಮಾದ ಜನಮನವನ್ನು ಗೆದ್ದಿರುವ ಖುಷಿಯಲ್ಲಿ ರಜಿನಿಕಾಂತ್ ಇದ್ದಾರೆ. ಈ ನಡುವೆ ಮಂಗಳವಾರ ರಜಿನಿಕಾಂತ್ ಕಂಡೆಕ್ಟರ್ ಆಗಿ ಕೆಲಸ ಮಾಡಿದ್ದ ಜಯನಗರ ಡಿಪೋಗೆ ದಿಢೀರ್ ಭೇಟಿ ನೀಡಿದ್ದಾರೆ.
ಜಯನಗರ ಡಿಪೋಗೆ ಭೇಟಿ ನೀಡಿ, ಅಲ್ಲಿನ ಚಾಲಕರು, ಸಿಬ್ಬಂದಿಗಳೊಂದಿಗೆ ಆತ್ಮೀಯ ಕ್ಷಣಗಳನ್ನು ಕಳೆದು, ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ತಲೈವಾ ಭೇಟಿಗೆ ಡಿಪೋ ಚಾಲಕರು ಹಾಗೂ ಸಿಬ್ಬಂದಿಗಳು ಫುಲ್ ಖುಷ್ ಆಗಿದ್ದಾರೆ. ಅವರೊಂದಿಗೆ ಫೋಟೋ, ಸೆಲ್ಫಿಗಳನ್ನು ತೆಗೆದುಕೊಂಡಿದ್ದಾರೆ.



ಇದಾದ ಬಳಿಕ ರಜಿನಿಕಾಂತ್ ಚಾಮರಾಜಪೇಟೆಯ ರಾಯರ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನವನ್ನು ಪಡೆದರು.
ಬಸ್ ಚಾಲಕರು ಹಾಗೂ ಸಿಬ್ಬಂದಿಗಳೊಂದಿಗೆ ಕೂತು ರಜಿನಿಕಾಂತ್ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಸದ್ಯ ಸೂಪರ್ ಸ್ಟಾರ್ ಬೆಂಗಳೂರು ಭೇಟಿಯ ಫೋಟೋ, ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
Superstar Rajinikanth made a surprise visit to a Bengaluru bus depot, located in the southern part of the city on Tuesday. The 72-year-old actor visited a bus depot in the Jayanagar area of the city, much to the surprise of everyone working there.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm