ಬ್ರೇಕಿಂಗ್ ನ್ಯೂಸ್
30-08-23 10:59 am HK News Desk ಕರ್ನಾಟಕ
ಹೊಸಪೇಟೆ, ಆಗಸ್ಟ್ ,30: ಐತಿಹಾಸಿಕ ಕ್ಷೇತ್ರ ಹಂಪಿಯ ವಿಜಯ ವಿಠ್ಠಲ ದೇವಸ್ಥಾನದ ಆವರಣದಲ್ಲಿ ಅಪರೂಪದ ಬಿಳಿ ಬಣ್ಣದ ಮಣ್ಣು ಮುಕ್ಕ ಹಾವು ಪತ್ತೆಯಾಗಿದ್ದು, ಈ ಹಾವು ಯಾವ ಪ್ರಭೇದದ್ದು ಎಂದು ಗುರುತಿಸಲಾಗದೇ ಅಲ್ಲಿನ ಭದ್ರತಾ ಸಿಬ್ಬಂದಿ ಹಾಗೂ ಪ್ರವಾಸಿಗರು ಗೊಂದಲಕ್ಕೀಡಾಗಿದ್ದರು.
ಹಾವು ಪತ್ತೆಯಾದ ವಿಷಯ ತಿಳಿದ ಕಮಲಾಪುರದ ಹಾವು(ಉರಗ) ಮತ್ತು ವನ್ಯಜೀವಿ ರಕ್ಷಕ ಮಲ್ಲಿಕಾರ್ಜುನ ಜಿ.ಬಿ ಅವರು ಸ್ಥಳಕ್ಕೆ ಬಂದು ಈ ಹಾವನ್ನು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಇದು ಬೇರೆಯ ಜಾತಿ ಹಾವಲ್ಲ. ಚರ್ಮಕ್ಕೆ ಬಣ್ಣ ನೀಡುವ ವರ್ಣ ದ್ರವ್ಯ ಗ್ರಂಥಿ ಅಂದರೆ ಮೆಲಾಲಿನ್ ಅಥವಾ ಪಿಗ್ಮೆಂಟ್ ಕೊರತೆಯಿಂದ ಚರ್ಮಕ್ಕೆ ಬಣ್ಣ ಬರದೇ ಈ ರೀತಿ ಬಿಳಿ ಬಣ್ಣಕ್ಕೆ ಕಾರಣವಾಗುತ್ತದೆ. ಇದನ್ನು ಅಲ್ಬಿನೋ ಸ್ನೇಕ್ಸ್ ಎಂದು ಕೂಡಾ ಕರೆಯುತ್ತಾರೆ ಎಂದು ಅನಿಮಲ್ ಕನ್ಸರ್ವೇಷನ್ ಸಂಸ್ಥೆಯ ಮುಖ್ಯಸ್ಥರು ಹಾಗೂ ಹಾವು(ಉರಗ) ಮತ್ತು ವನ್ಯ ಜೀವಿ ರಕ್ಷಕ ವೇಣುಗೋಪಾಲ್ ನಾಯ್ಡು ತಿಳಿಸಿದರು.
ಇದು ಅನುವಂಶಿಕ ಅಸಹಜತೆಯಾಗಿದೆ. ಇವುಗಳ ಅಸಹಜತೆ, ವರ್ಣದ್ರವ್ಯ ಮತ್ತು ಬಣ್ಣದಿಂದಾಗಿ ಈ ಹಾವುಗಳನ್ನು ‘ಅಪರೂಪ’ದ ಹಾವು ಎಂದು ಕರೆಯುತ್ತಾರೆ. ಬಹುಶಃ ಕರ್ನಾಟಕದಲ್ಲಿ ಮೊದಲನೇ ಬಾರಿಗೆ ಇಂತಹ ಅಪರೂಪದ ಸಾಮಾನ್ಯ ಬಿಳಿ ಮಣ್ಣು ಮುಕ್ಕ ಹಾವು (albino Common Sand Boa) ಕಂಡುಬಂದಿದೆ. ಈ ಹಾವುಗಳು ವಿಷಕಾರಿಯಲ್ಲದ ಹಾವಾಗಿದೆ.
ಈ ಮಣ್ಣು ಮುಕ್ಕ ಹಾವುಗಳಲ್ಲಿ ಮೂರು ಜಾತಿಯ ಹಾವುಗಳಿದ್ದು, ಸಾಮಾನ್ಯ ಮಣ್ಣು ಮುಕ್ಕ ಹಾವು (Common Sand Boa), ಕೆಂಪು ಮಣ್ಣು ಮುಕ್ಕ ಹಾವು (Red Sand Boa), ಹಾಗೂ ವೇಟೆಕಾರ್ ಮಣ್ಣು ಮುಕ್ಕ (Whitaker’s Boa) ಹಾವುಗಳಿವೆ ಎಂದು ಉರಗ ರಕ್ಷಕ ಮಲ್ಲಿಕಾರ್ಜುನ್ ಅಭಿಪ್ರಾಯವಾಗಿದೆ.
A rare common white coloured mud mukka snake has been found in the premises of Vijaya Vittala Temple in Hampi. Reptile and wildlife conservationist Mallikarjuna G.B. The snake was rescued and released to a safe place.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am