ಬ್ರೇಕಿಂಗ್ ನ್ಯೂಸ್
30-08-23 10:59 am HK News Desk ಕರ್ನಾಟಕ
ಹೊಸಪೇಟೆ, ಆಗಸ್ಟ್ ,30: ಐತಿಹಾಸಿಕ ಕ್ಷೇತ್ರ ಹಂಪಿಯ ವಿಜಯ ವಿಠ್ಠಲ ದೇವಸ್ಥಾನದ ಆವರಣದಲ್ಲಿ ಅಪರೂಪದ ಬಿಳಿ ಬಣ್ಣದ ಮಣ್ಣು ಮುಕ್ಕ ಹಾವು ಪತ್ತೆಯಾಗಿದ್ದು, ಈ ಹಾವು ಯಾವ ಪ್ರಭೇದದ್ದು ಎಂದು ಗುರುತಿಸಲಾಗದೇ ಅಲ್ಲಿನ ಭದ್ರತಾ ಸಿಬ್ಬಂದಿ ಹಾಗೂ ಪ್ರವಾಸಿಗರು ಗೊಂದಲಕ್ಕೀಡಾಗಿದ್ದರು.
ಹಾವು ಪತ್ತೆಯಾದ ವಿಷಯ ತಿಳಿದ ಕಮಲಾಪುರದ ಹಾವು(ಉರಗ) ಮತ್ತು ವನ್ಯಜೀವಿ ರಕ್ಷಕ ಮಲ್ಲಿಕಾರ್ಜುನ ಜಿ.ಬಿ ಅವರು ಸ್ಥಳಕ್ಕೆ ಬಂದು ಈ ಹಾವನ್ನು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಇದು ಬೇರೆಯ ಜಾತಿ ಹಾವಲ್ಲ. ಚರ್ಮಕ್ಕೆ ಬಣ್ಣ ನೀಡುವ ವರ್ಣ ದ್ರವ್ಯ ಗ್ರಂಥಿ ಅಂದರೆ ಮೆಲಾಲಿನ್ ಅಥವಾ ಪಿಗ್ಮೆಂಟ್ ಕೊರತೆಯಿಂದ ಚರ್ಮಕ್ಕೆ ಬಣ್ಣ ಬರದೇ ಈ ರೀತಿ ಬಿಳಿ ಬಣ್ಣಕ್ಕೆ ಕಾರಣವಾಗುತ್ತದೆ. ಇದನ್ನು ಅಲ್ಬಿನೋ ಸ್ನೇಕ್ಸ್ ಎಂದು ಕೂಡಾ ಕರೆಯುತ್ತಾರೆ ಎಂದು ಅನಿಮಲ್ ಕನ್ಸರ್ವೇಷನ್ ಸಂಸ್ಥೆಯ ಮುಖ್ಯಸ್ಥರು ಹಾಗೂ ಹಾವು(ಉರಗ) ಮತ್ತು ವನ್ಯ ಜೀವಿ ರಕ್ಷಕ ವೇಣುಗೋಪಾಲ್ ನಾಯ್ಡು ತಿಳಿಸಿದರು.
ಇದು ಅನುವಂಶಿಕ ಅಸಹಜತೆಯಾಗಿದೆ. ಇವುಗಳ ಅಸಹಜತೆ, ವರ್ಣದ್ರವ್ಯ ಮತ್ತು ಬಣ್ಣದಿಂದಾಗಿ ಈ ಹಾವುಗಳನ್ನು ‘ಅಪರೂಪ’ದ ಹಾವು ಎಂದು ಕರೆಯುತ್ತಾರೆ. ಬಹುಶಃ ಕರ್ನಾಟಕದಲ್ಲಿ ಮೊದಲನೇ ಬಾರಿಗೆ ಇಂತಹ ಅಪರೂಪದ ಸಾಮಾನ್ಯ ಬಿಳಿ ಮಣ್ಣು ಮುಕ್ಕ ಹಾವು (albino Common Sand Boa) ಕಂಡುಬಂದಿದೆ. ಈ ಹಾವುಗಳು ವಿಷಕಾರಿಯಲ್ಲದ ಹಾವಾಗಿದೆ.
ಈ ಮಣ್ಣು ಮುಕ್ಕ ಹಾವುಗಳಲ್ಲಿ ಮೂರು ಜಾತಿಯ ಹಾವುಗಳಿದ್ದು, ಸಾಮಾನ್ಯ ಮಣ್ಣು ಮುಕ್ಕ ಹಾವು (Common Sand Boa), ಕೆಂಪು ಮಣ್ಣು ಮುಕ್ಕ ಹಾವು (Red Sand Boa), ಹಾಗೂ ವೇಟೆಕಾರ್ ಮಣ್ಣು ಮುಕ್ಕ (Whitaker’s Boa) ಹಾವುಗಳಿವೆ ಎಂದು ಉರಗ ರಕ್ಷಕ ಮಲ್ಲಿಕಾರ್ಜುನ್ ಅಭಿಪ್ರಾಯವಾಗಿದೆ.
A rare common white coloured mud mukka snake has been found in the premises of Vijaya Vittala Temple in Hampi. Reptile and wildlife conservationist Mallikarjuna G.B. The snake was rescued and released to a safe place.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm