ಬ್ರೇಕಿಂಗ್ ನ್ಯೂಸ್
30-08-23 03:15 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 30: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಡರಾತ್ರಿ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆ, ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದ್ದಕ್ಕಿದ್ದಂತೆ ಸುಸ್ತು ಮತ್ತು ವೀಕ್ನೆಸ್ ಕಾಣಿಸಿಕೊಂಡ ಹಿನ್ನೆಲೆ ನಸುಕಿನ ಜಾವ 3.40ಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕುಮಾರಸ್ವಾಮಿ ಅವರ ಆರೋಗ್ಯ ಕುರಿತಾಗಿ ಜಯನಗರದ ಅಪೋಲೊ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಡಾಕ್ಟರ್ ಪಿ.ಸತೀಶ್ ಚಂದ್ರ & ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಜೊತೆಗೆ ಅವರ ಆರೋಗ್ಯ ಸ್ಥಿತಿಯನ್ನು ಗಮನಿಸಲಾಗುತ್ತಿದೆ ಎಂದು ವೈದ್ಯರ ತಂಡ ಹೇಳಿದೆ.
ಎಚ್.ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ ಜೊತೆಗೆ ನಿಂತಿದ್ದಾರೆ. ಇದರ ಬೆನ್ನಲ್ಲೇ ಮಗನ ಆರೋಗ್ಯ ವಿಚಾರಿಸಲು ದೇವೆಗೌಡರು ಆಸ್ಪತ್ರೆಗೆ ಆಗಮಿಸಿದ್ದಾರೆ. ವೀಕ್ನೆಸ್ ಮತ್ತು ಸುಸ್ತಾಗಿ ಕುಮಾರಸ್ವಾಮಿ ಬಳಲುತ್ತಿದ್ದರು. ಚಿಕಿತ್ಸೆ ಕೊಡಲಾಗಿದ್ದು, ಚಿಕಿತ್ಸೆಗೆ ಸಕಾರಾತ್ಮಕ ವಾಗಿ ಸ್ಪಂದಿಸುತ್ತಿದ್ದಾರೆ. ಈಗ ಅವರ ಆರೋಗ್ಯ ಸ್ಥಿತಿ ಚೇತರಿಕೆ ಕಂಡಿದೆ ಎಂದು ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರಾದ ಡಾ. ಪಿ. ಸತೀಶ್ ಚಂದ್ರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೂರು ತಿಂಗಳ ಹಿಂದೆ ಕರ್ನಾಟಕ ವಿಧಾನಸಭೆ ಚುನಾವಣೆ ಸಮಯದಲ್ಲಿ ಪಕ್ಷದ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ವೇಳೆ ಕುಮಾರಸ್ವಾಮಿಗೆ ಆಯಾಸದಿಂದಾಗಿ ಜ್ವರ ಕಾಣಿಸಿಕೊಂಡಿತ್ತು. ಈ ವೇಳೆ ಸಣ್ಣ ಪ್ರಮಾಣದಲ್ಲಿ ಲಂಗ್ಸ್ ಇನ್ಫೆಕ್ಷನ್ ಹಾಗೂ ಡಸ್ಟ್ ಅಲರ್ಜಿ ಇರುವುದು ತಿಳಿದುಬಂದಿತ್ತು. ಆಗ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಚುನಾವಣೆ ಫಲಿತಾಂಶದ ನಂತರ ವಿಶ್ರಾಂತಿಗಾಗಿ ಕುಟುಂಬದ ಜೊತೆಗೆ ಕುಮಾರಸ್ವಾಮಿ ವಿದೇಶ ಪ್ರವಾಸಕ್ಕೆ ತೆರಳಿದ್ದರು.
Former Chief Minister and senior JD(S) leader H.D. Kumaraswamy got admitted to a private hospital on Wednesday morning after he complained of fever. Sources close to him said that Kumaraswamy developed fever and fatigue due to hectic activity in the last week.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am