ಬ್ರೇಕಿಂಗ್ ನ್ಯೂಸ್
08-11-20 01:22 pm Headline Karnataka News Network ಕರ್ನಾಟಕ
ರಾಮನಗರ, ನವೆಂಬರ್ 8: ಸದಾ ಓದು ಎನ್ನುವ ಪೋಷಕರ ಕಾಟ ತಪ್ಪಿಸಿಕೊಳ್ಳಲು ಹಾಗೂ ಹಣಕ್ಕಾಗಿ ಅಪಹರಣದ ನಾಟಕ ಮಾಡಿ ತನ್ನ ಹೆತ್ತವರನ್ನೇ ಬಾಲಕ ಬೇಸ್ತು ಬೀಳಿಸಿರುವ ಘಟನೆ ರಾಮನಗರ ಜಿಲ್ಲೆ ಕನಕಪುರದಲ್ಲಿ ನಡೆದಿದೆ.
ತಮಿಳುನಾಡು ಮೂಲದ ಬಟ್ಟೆ ಅಂಗಡಿ ಮಾಲೀಕ ಮನೋಹರ್ ಎಂಬುವವರ ಪುತ್ರ ಸರ್ವೇಶ್ (16) ಕಳೆದ ಶುಕ್ರವಾರ ಸೈಬರ್ ಸೆಂಟರ್ಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ. ರಾತ್ರಿಯಾದರೂ ಮನೆಗೆ ವಾಪಸ್ಸು ಬಾರದ ಕಾರಣ ಆತಂಕಗೊಂಡ ಪೋಷಕರು, ಮಗ ಕಾಣೆಯಾಗಿದ್ದಾನೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ನಡುವೆ ಬಾಲಕನ ಪಕ್ಕದ ಮನೆಯವರ ಮೊಬೈಲಿಗೆ ಹುಡುಗನನ್ನು ಶೌಚಾಲಯದಲ್ಲಿ ಕೈ-ಕಾಲು ಕಟ್ಟಿ ಹಾಕಿರೋ ಸ್ಥಿತಿಯಲ್ಲಿರುವ ಫೋಟೋವನ್ನು ರವಾನಿಸಿ, 5 ಲಕ್ಷ ರುಪಾಯಿಗೆ ಅಪಹರಣಕಾರರು ಬೇಡಿಕೆಯಿಟ್ಟಿದ್ದರು. ನಂತರ ಬಾಲಕನ ಫೋಟೋ ವೈರಲ್ ಆಗಿದ್ದರಿಂದ ಜನರು ಆತಂಕಕ್ಕೆ ಒಳಗಾಗಿದ್ದರು.
ಪ್ರಕರಣ ಬೆನ್ನತ್ತಿದ ಪೊಲೀಸರು, ಬಾಲಕನ್ನು ತಿರುಪತಿ ಬಳಿ ಲಾಡ್ಜ್ ನಲ್ಲಿ ಪತ್ತೆ ಹಚ್ಚಿದ್ದಾರೆ. ಪೋಷಕರನ್ನು ಬೆದರಿಸಲು ಬಾಲಕನೇ ಅಪಹರಣದ ನಾಟಕವಾಡಿದ್ದಾನೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಗಿರೀಶ್, ಬಾಲಕ ಪೋಷಕರಿಂದ ಹಣ ಕೀಳಲು ಹಾಗೂ ಓದು ಎಂದು ಒತ್ತಾಯ ಮಾಡುವುದರಿಂದ ತಪ್ಪಿಸಿಕೊಳ್ಳಲು ಸ್ವಯಂ ಅಪಹರಣದ ನಾಟಕ ಸೃಷ್ಟಿಸಿದ್ದಾನೆ ಎಂದು ತಿಳಿಸಿದ್ದಾರೆ. ಬಾಲಕನನ್ನು ತಿರುಪತಿಯಿಂದ ಕರೆತಂದು ಕನಕಪುರ ನಗರ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರೆದಿದೆ. ಇನ್ನು ಬಾಲಕನಿಗೆ ಅಪಹರಣ ಎಂದು ಬಿಂಬಿಸಲು ಯಾರೆಲ್ಲ ಸಹಾಯ ಮಾಡಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ಬಯಲಾಗಬೇಕಿದೆ.
A boy was allegedly involved in a drama of kidnapping for the sake of getting money from his parents. The incident took place in Kanakapura, Ramanagara district.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm