ಬ್ರೇಕಿಂಗ್ ನ್ಯೂಸ್
02-09-23 10:37 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಅಲ್ ಖೈದಾ ಮತ್ತು ತೆಹ್ರೀಕ್ ಇ- ತಾಲಿಬಾನ್ ಉಗ್ರವಾದಿ ಸಂಘಟನೆಗೆ ಯುವಕರ ಸೇರ್ಪಡೆಗೆ ಸಂಚು ಹೂಡಿರುವ ಕುರಿತ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ಕರ್ನಾಟಕ, ತಮಿಳ್ನಾಡು, ಮಹಾರಾಷ್ಟ್ರ ಮತ್ತು ಗುಜರಾತ್ ನಲ್ಲಿ ಏಕಕಾಲದಲ್ಲಿ ದಾಳಿ ಕಾರ್ಯಾಚರಣೆ ನಡೆಸಿದ್ದಾರೆ.
ದೇಶಾದ್ಯಂತ ಉಗ್ರವಾದ ಚಟುವಟಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಯುವಕರನ್ನು ಬ್ರೇನ್ ವಾಶ್ ಮಾಡಿ ಸಂಘಟನೆಗೆ ಸೇರ್ಪಡೆ ಮಾಡಲು ಸಂಚು ಹೂಡಲಾಗಿದೆ. ಈ ಕುರಿತ ಮಾಹಿತಿ ಬೆನ್ನತ್ತಿ ನಾಲ್ಕು ರಾಜ್ಯಗಳಲ್ಲಿ ಎನ್ಐಎ ಅಧಿಕಾರಿಗಳು ದಾಳಿ ಸಂಘಟಿಸಿದ್ದರು. ಈ ವೇಳೆ, ಹಲವು ಮಾದರಿಯ ಡಿಜಿಟಲ್ ಸಾಕ್ಷ್ಯಗಳನ್ನು ವಶಕ್ಕೆ ಪಡೆಯಲಾಗಿದೆ. ಮಹಾರಾಷ್ಟ್ರದಲ್ಲಿ ಮೂರು ಕಡೆಗಳಲ್ಲಿ ಮತ್ತು ಇತರ ಮೂರು ರಾಜ್ಯಗಳಲ್ಲಿ ತಲಾ ಒಂದೊಂದು ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಎನ್ಐಎ ಮಾಹಿತಿ ನೀಡಿದೆ.
ಎರಡು ಉಗ್ರವಾದಿ ಗುಂಪುಗಳಿಗೆ ಯುವಕರ ಸೇರ್ಪಡೆ, ವಿಧ್ವಂಸಕ ಕೃತ್ಯಕ್ಕೆ ಸಂಚು ಸೇರಿದಂತೆ ದೇಶದ ಆಂತರಿಕ ಭದ್ರತೆಗೆ ಸವಾಲೊಡ್ಡುವ ರೀತಿಯ ವರ್ತನೆಯನ್ನು ದಾಳಿ ಸಂದರ್ಭದಲ್ಲಿ ಪತ್ತೆ ಹಚ್ಚಲಾಗಿದೆ. ದಾಳಿ ವೇಳೆ ಸಿಕ್ಕಿರುವ ಡಿಜಿಟಲ್ ಸಾಕ್ಷ್ಯಗಳನ್ನು ಕೇಂದ್ರದ ಏಂಟಿ ಟೆರರಿಸ್ಟ್ ಏಜನ್ಸಿಯು ಪರೀಕ್ಷೆಗೆ ಒಳಪಡಿಸಲಿದೆ. ಕಳೆದ ಎಪ್ರಿಲ್ ತಿಂಗಳಲ್ಲಿ ಈ ಎರಡು ಉಗ್ರವಾದಿ ಸಂಘಟನೆಗಳಿಗೆ ಇಬ್ಬರು ಯುವಕರು ಸೇರ್ಪಡೆ ಆಗಿರುವ ಬಗ್ಗೆ ಎನ್ಐಎ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತ್ತು. ಇದೇ ಪ್ರಕರಣದಲ್ಲಿ ಅಧಿಕಾರಿಗಳು ದಾಳಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಆ ವ್ಯಕ್ತಿಗಳಿಬ್ಬರು ಅಫ್ಘಾನಿಸ್ತಾನದಲ್ಲಿ ಜಮೀನು ಖರೀದಿಸಲು ಹಣ ಹೂಡಿಕೆ ಮಾಡಿರುವುದು ಮತ್ತು ಸ್ಥಳೀಯ ಯುವಕರನ್ನು ಬ್ರೇನ್ ವಾಶ್ ಮಾಡಿ ಉಗ್ರವಾದಿ ಸಂಘಟನೆಗಳಿಗೆ ಸೇರುವಂತೆ ಪ್ರೇರಣೆ ನೀಡುತ್ತಿದ್ದುದನ್ನು ಪತ್ತೆಹಚ್ಚಲಾಗಿತ್ತು.
Special police probe in Rameshwaram and Bangalore after NIA raid on terror module.The Tamil Nadu ‘Q’ branch police is probing the accomplices, friends and relatives of a Rameswaram-based youth whose premises was raided by the National Investigating Agency (NIA) on Friday in a suspected terror module case.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm