ಬ್ರೇಕಿಂಗ್ ನ್ಯೂಸ್
02-09-23 10:37 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಅಲ್ ಖೈದಾ ಮತ್ತು ತೆಹ್ರೀಕ್ ಇ- ತಾಲಿಬಾನ್ ಉಗ್ರವಾದಿ ಸಂಘಟನೆಗೆ ಯುವಕರ ಸೇರ್ಪಡೆಗೆ ಸಂಚು ಹೂಡಿರುವ ಕುರಿತ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ಕರ್ನಾಟಕ, ತಮಿಳ್ನಾಡು, ಮಹಾರಾಷ್ಟ್ರ ಮತ್ತು ಗುಜರಾತ್ ನಲ್ಲಿ ಏಕಕಾಲದಲ್ಲಿ ದಾಳಿ ಕಾರ್ಯಾಚರಣೆ ನಡೆಸಿದ್ದಾರೆ.
ದೇಶಾದ್ಯಂತ ಉಗ್ರವಾದ ಚಟುವಟಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಯುವಕರನ್ನು ಬ್ರೇನ್ ವಾಶ್ ಮಾಡಿ ಸಂಘಟನೆಗೆ ಸೇರ್ಪಡೆ ಮಾಡಲು ಸಂಚು ಹೂಡಲಾಗಿದೆ. ಈ ಕುರಿತ ಮಾಹಿತಿ ಬೆನ್ನತ್ತಿ ನಾಲ್ಕು ರಾಜ್ಯಗಳಲ್ಲಿ ಎನ್ಐಎ ಅಧಿಕಾರಿಗಳು ದಾಳಿ ಸಂಘಟಿಸಿದ್ದರು. ಈ ವೇಳೆ, ಹಲವು ಮಾದರಿಯ ಡಿಜಿಟಲ್ ಸಾಕ್ಷ್ಯಗಳನ್ನು ವಶಕ್ಕೆ ಪಡೆಯಲಾಗಿದೆ. ಮಹಾರಾಷ್ಟ್ರದಲ್ಲಿ ಮೂರು ಕಡೆಗಳಲ್ಲಿ ಮತ್ತು ಇತರ ಮೂರು ರಾಜ್ಯಗಳಲ್ಲಿ ತಲಾ ಒಂದೊಂದು ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಎನ್ಐಎ ಮಾಹಿತಿ ನೀಡಿದೆ.
ಎರಡು ಉಗ್ರವಾದಿ ಗುಂಪುಗಳಿಗೆ ಯುವಕರ ಸೇರ್ಪಡೆ, ವಿಧ್ವಂಸಕ ಕೃತ್ಯಕ್ಕೆ ಸಂಚು ಸೇರಿದಂತೆ ದೇಶದ ಆಂತರಿಕ ಭದ್ರತೆಗೆ ಸವಾಲೊಡ್ಡುವ ರೀತಿಯ ವರ್ತನೆಯನ್ನು ದಾಳಿ ಸಂದರ್ಭದಲ್ಲಿ ಪತ್ತೆ ಹಚ್ಚಲಾಗಿದೆ. ದಾಳಿ ವೇಳೆ ಸಿಕ್ಕಿರುವ ಡಿಜಿಟಲ್ ಸಾಕ್ಷ್ಯಗಳನ್ನು ಕೇಂದ್ರದ ಏಂಟಿ ಟೆರರಿಸ್ಟ್ ಏಜನ್ಸಿಯು ಪರೀಕ್ಷೆಗೆ ಒಳಪಡಿಸಲಿದೆ. ಕಳೆದ ಎಪ್ರಿಲ್ ತಿಂಗಳಲ್ಲಿ ಈ ಎರಡು ಉಗ್ರವಾದಿ ಸಂಘಟನೆಗಳಿಗೆ ಇಬ್ಬರು ಯುವಕರು ಸೇರ್ಪಡೆ ಆಗಿರುವ ಬಗ್ಗೆ ಎನ್ಐಎ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತ್ತು. ಇದೇ ಪ್ರಕರಣದಲ್ಲಿ ಅಧಿಕಾರಿಗಳು ದಾಳಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಆ ವ್ಯಕ್ತಿಗಳಿಬ್ಬರು ಅಫ್ಘಾನಿಸ್ತಾನದಲ್ಲಿ ಜಮೀನು ಖರೀದಿಸಲು ಹಣ ಹೂಡಿಕೆ ಮಾಡಿರುವುದು ಮತ್ತು ಸ್ಥಳೀಯ ಯುವಕರನ್ನು ಬ್ರೇನ್ ವಾಶ್ ಮಾಡಿ ಉಗ್ರವಾದಿ ಸಂಘಟನೆಗಳಿಗೆ ಸೇರುವಂತೆ ಪ್ರೇರಣೆ ನೀಡುತ್ತಿದ್ದುದನ್ನು ಪತ್ತೆಹಚ್ಚಲಾಗಿತ್ತು.
Special police probe in Rameshwaram and Bangalore after NIA raid on terror module.The Tamil Nadu ‘Q’ branch police is probing the accomplices, friends and relatives of a Rameswaram-based youth whose premises was raided by the National Investigating Agency (NIA) on Friday in a suspected terror module case.
23-04-26 01:36 pm
HK News Staffer
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm