ಬ್ರೇಕಿಂಗ್ ನ್ಯೂಸ್
12-09-23 09:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.12: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದನಿ ಎತ್ತಿದ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ಗೆ ಪಕ್ಷದ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದ್ದು 10 ದಿನಗಳಲ್ಲಿ ಸ್ಪಷ್ಟನೆ ನೀಡುವಂತೆ ತಾಕೀತು ಮಾಡಿದೆ.
ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತೀ ಹಿಂದುಳಿದ ವರ್ಗಗಳ ಸಮಾವೇಶದ ಭಾಗವಾಗಿ ಶನಿವಾರ ಅರಮನೆ ಮೈದಾನದಲ್ಲಿ ನಡೆದ ಚಿಂತನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದ ಹರಿಪ್ರಸಾದ್, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದರು. ಹಿಂದಿನ ಯಾವ ಮುಖ್ಯಮಂತ್ರಿಗಳು ಜಾತಿ ರಾಜಕಾರಣ ಮಾಡಲಿಲ್ಲ. ದುಬಾರಿ ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿ ಸಮಾಜವಾದಿ ಎಂದು ಹೇಳಿದರೆ ಆಗೋದಿಲ್ಲ ಎಂದು ಆಕ್ರೋಶ ಹೊರಹಾಕಿದ್ದರು.

ಈ ಮಾತು ರಾಜಕೀಯದಲ್ಲಿ ಸದ್ದು ಮಾಡುತ್ತಿದ್ದಂತೆ ಸಿದ್ದರಾಮಯ್ಯ ಬಣದವರು ಹೈಕಮಾಂಡ್ಗೆ ದೂರು ನೀಡಿದ್ದರು. ಸರ್ಕಾರದ ಚಟುವಟಿಕೆಗೆ ಇಂತಹ ಬೆಳವಣಿಗೆ ಅಡ್ಡಿಯಾಗಲಿದೆ. ಕೂಡಲೇ ಕ್ರಮಕೈಗೊಳ್ಳಿ ಎಂದು ಒತ್ತಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಕಡೆಯಿಂದ ಇಬ್ಬರು ನಾಯಕರು ಹರಿಪ್ರಸಾದ್ಗೆ ದೂರವಾಣಿ ಕರೆ ಮಾಡಿದ್ದರು. ಆದರೆ ಹರಿಪ್ರಸಾದ್ ಸ್ಪಂದಿಸಿರಲಿಲ್ಲ. ಬಳಿಕ ದೆಹಲಿಯಲ್ಲಿ ಸಭೆ ಸೇರಿದ್ದ ಪ್ರಮುಖರು, ಹರಿಪ್ರಸಾದ್ಗೆ ನೋಟಿಸ್ ನೀಡಿ ಬಾಯಿ ಮುಚ್ಚಿಸಲು ತೀರ್ಮಾನಿಸಿದ್ದರು. ಈಗ ನೋಟೀಸಿಗೆ ಹರಿಪ್ರಸಾದ್ ಯಾವ ರೀತಿ ಸ್ಪಂದಿಸುತ್ತಾರೆ ಎನ್ನುವುದು ಕುತೂಹಲ.
The Congress on Tuesday issued a show cause notice to its senior leader B K Hariprasad on charges of criticising Karnataka Chief Minister Siddaramaiah and sharing the dais with BJP and YSR Congress leaders at a backward classes conference in Bengaluru
29-11-25 08:11 pm
Bangalore Correspondent
ಚೆಂಡನ್ನು ಮತ್ತೆ ದೆಹಲಿ ಅಂಗಳಕ್ಕೆ ಎಸೆದುಬಿಟ್ಟ ಸಿಎಂ...
29-11-25 03:34 pm
Accident Karnool, Kolar, Five Killed: ಫಾರ್ಚುನ...
29-11-25 02:26 pm
ಸಿಎಂ ಫೈಟ್ ಕ್ಲೈಮ್ಯಾಕ್ಸ್ ; ನೀವಾಗಿಯೇ ನಿರ್ಧಾರ ಮಾಡ...
28-11-25 10:37 pm
ಇಬ್ಬರೂ ಬಿಟ್ಕೊಡ್ತಾ ಇಲ್ಲ, 3ನೇ ಸೂತ್ರ ತಯಾರಾಗ್ತಾ ಇ...
28-11-25 10:33 pm
30-11-25 10:59 pm
HK News Desk
Puttur Honey Gains National Attention, PM Mod...
30-11-25 03:53 pm
WhatsApp, Telegram, Snapchat, ShareChat, Cybe...
30-11-25 03:37 pm
ಸ್ಲೀಪರ್ ಕೋಚ್ ಬಸ್ಸಿಗೆ ಹೆದ್ದಾರಿ ನಡುವಲ್ಲೇ ಬೆಂಕಿ...
29-11-25 08:34 pm
ಐಶ್ವರ್ಯಾ ರೈ ತನ್ನ ಗಂಡನಿಂದ ಬೇರ್ಪಟ್ಟರೆ ಮತಾಂತರ ಮಾ...
28-11-25 10:42 pm
30-11-25 06:03 pm
Udupi Correspondent
DK Trasnsport Mangalore, Joel: ಡಿಕೆ ಟ್ರಾನ್ಸ್...
29-11-25 10:01 pm
Moodushedde, Mangalore, Daughter Assaults Mot...
29-11-25 04:26 pm
ಮೊಬೈಲ್ ಜಾಮರ್ ಜೈಲಿಗಷ್ಟೇ ಇರಲಿ, ಜನರ ಸೇವೆಗಳಿಗೆ ತೊ...
29-11-25 10:53 am
ದೇಶ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನವ ಸಂಕಲ್ಪ ; ಮಿ...
28-11-25 02:48 pm
29-11-25 10:57 pm
Mangalore Correspondent
Davanagere, Police Steal Gold: ದಾವಣಗೆರೆಯಲ್ಲಿ...
28-11-25 06:23 pm
ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್ ; ಪ್ರಮುಖ ಆರೋಪಿ ಪ...
28-11-25 02:16 pm
9 ಕ್ಯಾರೆಟ್ ಚಿನ್ನ ಮಂಗಳೂರಿನ ಮಾರುಕಟ್ಟೆಗೆ ಲಗ್ಗೆ ಇ...
27-11-25 09:14 pm
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm