ಬ್ರೇಕಿಂಗ್ ನ್ಯೂಸ್
12-09-23 09:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.12: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದನಿ ಎತ್ತಿದ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ಗೆ ಪಕ್ಷದ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದ್ದು 10 ದಿನಗಳಲ್ಲಿ ಸ್ಪಷ್ಟನೆ ನೀಡುವಂತೆ ತಾಕೀತು ಮಾಡಿದೆ.
ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತೀ ಹಿಂದುಳಿದ ವರ್ಗಗಳ ಸಮಾವೇಶದ ಭಾಗವಾಗಿ ಶನಿವಾರ ಅರಮನೆ ಮೈದಾನದಲ್ಲಿ ನಡೆದ ಚಿಂತನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದ ಹರಿಪ್ರಸಾದ್, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದರು. ಹಿಂದಿನ ಯಾವ ಮುಖ್ಯಮಂತ್ರಿಗಳು ಜಾತಿ ರಾಜಕಾರಣ ಮಾಡಲಿಲ್ಲ. ದುಬಾರಿ ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿ ಸಮಾಜವಾದಿ ಎಂದು ಹೇಳಿದರೆ ಆಗೋದಿಲ್ಲ ಎಂದು ಆಕ್ರೋಶ ಹೊರಹಾಕಿದ್ದರು.

ಈ ಮಾತು ರಾಜಕೀಯದಲ್ಲಿ ಸದ್ದು ಮಾಡುತ್ತಿದ್ದಂತೆ ಸಿದ್ದರಾಮಯ್ಯ ಬಣದವರು ಹೈಕಮಾಂಡ್ಗೆ ದೂರು ನೀಡಿದ್ದರು. ಸರ್ಕಾರದ ಚಟುವಟಿಕೆಗೆ ಇಂತಹ ಬೆಳವಣಿಗೆ ಅಡ್ಡಿಯಾಗಲಿದೆ. ಕೂಡಲೇ ಕ್ರಮಕೈಗೊಳ್ಳಿ ಎಂದು ಒತ್ತಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಕಡೆಯಿಂದ ಇಬ್ಬರು ನಾಯಕರು ಹರಿಪ್ರಸಾದ್ಗೆ ದೂರವಾಣಿ ಕರೆ ಮಾಡಿದ್ದರು. ಆದರೆ ಹರಿಪ್ರಸಾದ್ ಸ್ಪಂದಿಸಿರಲಿಲ್ಲ. ಬಳಿಕ ದೆಹಲಿಯಲ್ಲಿ ಸಭೆ ಸೇರಿದ್ದ ಪ್ರಮುಖರು, ಹರಿಪ್ರಸಾದ್ಗೆ ನೋಟಿಸ್ ನೀಡಿ ಬಾಯಿ ಮುಚ್ಚಿಸಲು ತೀರ್ಮಾನಿಸಿದ್ದರು. ಈಗ ನೋಟೀಸಿಗೆ ಹರಿಪ್ರಸಾದ್ ಯಾವ ರೀತಿ ಸ್ಪಂದಿಸುತ್ತಾರೆ ಎನ್ನುವುದು ಕುತೂಹಲ.
The Congress on Tuesday issued a show cause notice to its senior leader B K Hariprasad on charges of criticising Karnataka Chief Minister Siddaramaiah and sharing the dais with BJP and YSR Congress leaders at a backward classes conference in Bengaluru
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm